AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಬಿಡುಗಡೆ: ಬೆಲೆ ಕೇವಲ 14,999 ರೂ.

Samsung Galaxy A05s Launched in India: ಸ್ಯಾಮ್‌ಸಂಗ್ ಇದೀಗ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ಅನಾವರಣ ಮಾಡಿದೆ. ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ.

ಬಹುನಿರೀಕ್ಷಿತ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಬಿಡುಗಡೆ: ಬೆಲೆ ಕೇವಲ 14,999 ರೂ.
Samsung Galaxy A05s
Vinay Bhat
|

Updated on:Oct 19, 2023 | 12:56 PM

Share

ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ ಹೊಸ ಸ್ಮಾರ್ಟ್​ಫೋನ್​ನೊಂದಿಗೆ ಭಾರತಕ್ಕೆ ಲಗ್ಗೆಯಿಟ್ಟಿದೆ. ಬಜೆಟ್ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಸ್ಯಾಮ್‌ಸಂಗ್ ಇದೀಗ ದೇಶದಲ್ಲಿ ಗ್ಯಾಲಕ್ಸಿ A05s ಫೋನನ್ನು ತನ್ನ A-ಸರಣಿಯ ಅಡಿಯಲ್ಲಿ ಅನಾವರಣ ಮಾಡಿದೆ. ಕಡಿಮೆ ಬೆಲೆ ಆಗಿದ್ದರೂ ಈ ಫೋನ್​ನಲ್ಲಿ ಬಲಿಷ್ಠವಾದ ಕ್ವಾಲ್ಕಂ ಸ್ನಾಪ್​ಡ್ರಾಗನ್ ಪ್ರೊಸೆಸರ್ ಇದೆ. 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ನೀಡಲಾಗಿದೆ. ಬ್ಯಾಟರಿ ಕೂಡ ದೊಡ್ಡದಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಬೆಲೆ, ಲಭ್ಯತೆ:

ಭಾರತದಲ್ಲಿ ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಸ್ಮಾರ್ಟ್​ಫೋನ್ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಇದರ 6GB RAM + 128GB ಸ್ಟೋರೇಜ್ ಕಾನ್ಫಿಗರೇಶನ್​ಗೆ 14,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಮತ್ತು ತಿಳಿ ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಪಟ್ಟಿಯ ಪ್ರಕಾರ, SBI ಬ್ಯಾಂಕ್ ಕ್ರೆಡಿಟ್ ಕಾರ್ಡ್ EMI ವಹಿವಾಟುಗಳ ಮೇಲೆ ಈ ಫೋನಿನಗೆ 1,000 ತ್ವರಿತ ರಿಯಾಯಿತಿ ಇದೆ.

iPhone 15 Discounts: ಕೊನೆಗೂ ಹೊಸ ಐಫೋನ್ 15 ಫೋನಿಗೆ ಬಂತು ಡಿಸ್ಕೌಂಟ್: ಆ್ಯಪಲ್​ನಿಂದ ದೀಪಾವಳಿ ಸೇಲ್ ಘೋಷಣೆ

ಇದನ್ನೂ ಓದಿ
Image
ಬಲಿಷ್ಠ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾ: ಹಾನರ್​ನಿಂದ ಬಂತು ಅದ್ಭುತ ಫೋನ್
Image
ಇಂದು ಒನ್​ಪ್ಲಸ್​ನ ಮೊಟ್ಟ ಮೊದಲ ಮಡಚುವ ಫೋನ್ ರಿಲೀಸ್: ಬೆಲೆ ಎಷ್ಟು ಗೊತ್ತೇ?
Image
ಮಾಲ್ವೇರ್ ದಾಳಿಯಿಂದ ಡಿಜಿಟಲ್ ಸಾಧನಗಳ ರಕ್ಷಣೆಗೆ ಸಿಎಸ್​ಕೆ ಸ್ಥಾಪನೆ
Image
ಭಾರತದಲ್ಲಿ ಕೇವಲ 6,499 ರೂ. ಗೆ ಬಿಡುಗಡೆ ಆಗಿದೆ ಹೊಸ ಫೋನ್: ಯಾವುದು?

ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೀಚರ್ಸ್:

ಡ್ಯುಯಲ್-ಸಿಮ್ (ನ್ಯಾನೋ) ಸ್ಯಾಮ್​ಸಂಗ್ ಗ್ಯಾಲಕ್ಸಿ A05s ಫೋನ್ ಆಂಡ್ರಾಯ್ಡ್ 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ರನ್ ಆಗುತ್ತದೆ. 6.7-ಇಂಚಿನ ಪೂರ್ಣ-HD+ (1,080×2,4000 ಪಿಕ್ಸೆಲ್‌ಗಳು) PLS LCD ಡಿಸ್​ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 SoC ನಿಂದ ಚಾಲಿತವಾಗಿದೆ ಮತ್ತು 6GB RAM ಅನ್ನು ಹೊಂದಿದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, 50-ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು f/1.8 ದ್ಯುತಿರಂಧ್ರದೊಂದಿಗೆ ನೀಡಲಾಗಿದೆ. 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು f/2.4 ದ್ಯುತಿರಂಧ್ರದೊಂದಿಗೆ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಕ್ಯಾಮೆರಾ f/2.4 ಅಪರ್ಚರ್‌ನಲ್ಲಿದೆ. ಮುಂಭಾಗದಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ f/2.0 ದ್ಯುತಿರಂಧ್ರದೊಂದಿಗೆ 13-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಸ್ಮಾರ್ಟ್​ಫೋನ್ 25W ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.1, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಹ್ಯಾಂಡ್ಸೆಟ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒಳಗೊಂಡಿವೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Thu, 19 October 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ