AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy A23: ಗ್ಯಾಲಕ್ಸಿ A ಸರಣಿಯ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಮತ್ತೆರಡು ಹೊಸ ಫೋನ್ ಬಿಡುಗಡೆ

Samsung Galaxy A13: ಸ್ಯಾಮ್​ಸಂಗ್ ಕಂಪನಿ ಇದೀಗ ಅಚ್ಚರಿ ಎಂಬಂತೆ ಮತ್ತೆ ಎ ಸರಣಿಯಲ್ಲಿ ಎರಡು ಹೊಸ ಮೊಬೈಲ್ ಅನ್ನು ಬಿಡುಗಡೆ ಮಾಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 ಮತ್ತು ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಲಾಂಚ್‌ ಆಗಿದೆ.

Galaxy A23: ಗ್ಯಾಲಕ್ಸಿ A ಸರಣಿಯ ಫೋನ್​ಗಳಿಗೆ ಭರ್ಜರಿ ಬೇಡಿಕೆ: ಮತ್ತೆರಡು ಹೊಸ ಫೋನ್ ಬಿಡುಗಡೆ
Samsung Galaxy A13 and Galaxy A23 mid-range 4G smartphones have launched in India
TV9 Web
| Edited By: |

Updated on: Mar 26, 2022 | 3:01 PM

Share

ಕಳೆದ ವಾರವಷ್ಟೆ ಭಾರತೀಯ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ತನ್ನ ಗ್ಯಾಲಕ್ಸಿ A ಸರಣಿಯಲ್ಲಿ ಗ್ಯಾಲಕ್ಸಿ A53 5G ಮತ್ತು ಗ್ಯಾಲಕ್ಸಿ A33 ಫೋನನ್ನು ಪರಿಚಯಿಸಿದ್ದ ಸ್ಯಾಮ್​ಸಂಗ್ (Samsung) ಕಂಪನಿ ಇದೀಗ ಅಚ್ಚರಿ ಎಂಬಂತೆ ಮತ್ತೆ ಎ ಸರಣಿಯಲ್ಲಿ ಎರಡು ಹೊಸ ಮೊಬೈಲ್ ಅನ್ನು ಬಿಡುಗಡೆ ಮಾಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 (Galaxy A13) ಮತ್ತು ಗ್ಯಾಲಕ್ಸಿ A23 (Galaxy A23) ಸ್ಮಾರ್ಟ್‌ಫೋನ್‌ ಲಾಂಚ್‌ ಆಗಿದೆ. ಸಾಕಷ್ಟು ಬಲಿಷ್ಠವಾಗಿರುವ ಈ ಎರಡೂ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಜೊತೆಗೆ 5,000mAh ಸಾಮರ್ಥ್ಯದ ದೀರ್ಘ ಬಾಳಿಕೆ ಬರುವ ಬ್ಯಾಟರಿ, ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡುವುದಾದರೆ…

ಬೆಲೆ ಎಷ್ಟು?:

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A13 ಫೋನ್‌ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ಮಾದರಿಗೆ 14,999 ರೂ. ನಿಗದಿ ಮಾwಲಾಗಿದೆ. ಅಂತೆಯೆ 6GB + 128GB ರೂಪಾಂತರದ ಬೆಲೆ 17,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌, ತಿಳಿ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಗ್ಯಾಲಕ್ಸಿ A23 ಫೋನ್‌ ಬೆಲೆ 6GB + 128GB ಮಾದರಿಗೆ 19,499 ರೂ. ಮತ್ತು 8GB + 128GB ರೂಪಾಂತರದ ಬೆಲೆ 20,999 ರೂ.ಆಗಿದೆ. ಈ ಫೋನ್‌ ಕಪ್ಪು, ತಿಳಿ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಸದ್ಯಕ್ಕೆ ಸ್ಯಾಮ್‌ಸಂಗ್‌ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲಿ ಖರೀದಿಗೆ ಸಿಗಲಿದೆ.

ಏನು ವಿಶೇಷತೆ?:

ಗ್ಯಾಲಕ್ಸಿ A13 ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಇನ್ನುಳಿದ ಎರಡೂ ಕ್ಯಾಮೆರಾಗಳು 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಇನ್ನು ಗ್ಯಾಲಕ್ಸಿ A23 ಸ್ಮಾರ್ಟ್‌ಫೋನ್‌ ಕೂಡ 6.6-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅನಿರ್ದಿಷ್ಟ ಆಕ್ಟಾ-ಕೋರ್‌ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 12-ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರು ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾಗಳನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸುತ್ತದೆ.

IPL 2022: ಐಪಿಎಲ್ 2022 ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಜಿಯೋದಿಂದ ಬಂಪರ್ ಆಫರ್ ಘೋಷಣೆ

Virat Kohli: ಕೊಹ್ಲಿ ಅಲ್ಲ: ಅಭ್ಯಾಸ ಪಂದ್ಯ ಮುಗಿದ ಬಳಿಕ ಡುಪ್ಲೆಸಿಸ್ ಹೊಗಳಿದ್ದು ಯಾರನ್ನ ಗೊತ್ತೇ?

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!