AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜೂನ್ 13ರ ಭಾನುವಾರ ನಾಲ್ಕು ಗಂಟೆಗಳ ಕಾಲ ಇಂಟರ್​ನೆಟ್ ಬ್ಯಾಂಕಿಂಗ್, ಯುಪಿಐ ಸೇವೆಗಳು ದೊರೆಯುವುದಿಲ್ಲ ಎಂದು ತಿಳಿಸಲಾಗಿದೆ.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 12, 2021 | 9:58 PM

Share

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇಂಟರ್​ನೆಟ್​ ಬ್ಯಾಂಕಿಂಗ್, ಅದರ ಮೊಬೈಲ್ ಅಪ್ಲಿಕೇಷನ್ YONO ಮತ್ತು ಯುಪಿಐ ಸೇವೆಗಳು ಭಾನುವಾರದಂದು ನಿರ್ವಹಣೆ ಚಟುವಟಿಕೆಗಳು ಇರುವುದರಿಂದ ಕಾರ್ಯ ನಿರ್ವಹಿಸುವುದಿಲ್ಲ. “ಉತ್ತಮ ಬ್ಯಾಂಕಿಂಗ್ ಸೇವೆ ಒದಗಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಗೌರವಾನ್ವಿತ ಗ್ರಾಹಕರಿಗೆ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ,” ಎಂದು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಬ್ಯಾಂಕ್ ಹೇಳಿರುವ ಪ್ರಕಾರ ಜೂನ್ 13ರಂದು 2:40ರಿಂದ 6:40ರ ಮಧ್ಯೆ ನಿರ್ವಹಣೆ ಚಟುವಟಿಕೆಗಳು ನಡೆಸಲಿದ್ದೇವೆ ಎಂದು ಬ್ಯಾಂಕ್​ನಿಂದ ಹೇಳಲಾಗಿದೆ.

ಕಳೆದ ಶುಕ್ರವಾರದಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕೊಲ್ಯಾಟರಲ್ ಇಲ್ಲದಂತೆ ಕವಚ್ ಪರ್ಸನಲ್ ಲೋನ್ ಅನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ಕೊವಿಡ್​ಗೆ ಸಂಬಂಧಿಸಿದಂತೆ ಖರ್ಚುಗಳಿದ್ದು, ಆರ್ಥಿಕ ಒತ್ತಡದಲ್ಲಿ ಇರುವ ಗ್ರಾಹಕರಿಗೆ ಪರ್ಸನಲ್ ಲೋನ್ ಅನ್ನು ನೀಡಲಾಗುತ್ತದೆ. ನೆನಪಿರಲಿ, ಇದು ಕೊವಿಡ್ ವೈದ್ಯಕೀಯ ಚಿಕಿತ್ಸೆಗಾಗಿ ನೀಡಲಿರುವ ಹಣಕಾಸಿನ ಸಾಲವಾಗಿದೆ.

ಸರ್ಕಾರಿ ಸ್ವಾಮ್ಯದ ಎಸ್​ಬಿಐ ಯಾವುದೇ ಕೊಲಾಟರಲ್, ಅಂದರೆ ಆಧಾರಗಳನ್ನು ಪಡೆದುಕೊಳ್ಳದೆ 5 ಲಕ್ಷ ರೂಪಾಯಿ ತನಕ ಸಾಲವನ್ನು ನೀಡುತ್ತದೆ. ಅದಕ್ಕಾಗಿ ವಾರ್ಷಿಕ ಶೇ 8.5ರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ. ಈ ಮೂಲಕ ಗ್ರಾಹಕರು ಸ್ವಂತ ಹಾಗೂ ಕುಟುಂಬಸ್ಥರ ಕೊವಿಡ್- 19 ವೈದ್ಯಕೀಯ ವೆಚ್ಚವನ್ನು ಭರಿಸುವುದಕ್ಕೆ ಅನುಕೂಲ ಆಗಲಿದೆ ಎಂದು ಬ್ಯಾಂಕ್ ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನೂ ಓದಿ: SBI Loan: ಕೊವಿಡ್​- 19 ಚಿಕಿತ್ಸೆಗೆ ಎಸ್​ಬಿಐನಿಂದ ಕೊಲಾಟರಲ್ ಇಲ್ಲದಂತೆ ಶೇ 8.5 ಬಡ್ಡಿ ದರದಲ್ಲಿ 5 ಲಕ್ಷದ ತನಕ ಸಾಲ

ಇದನ್ನೂ ಓದಿ: SBI Alert: ಮನೆಯಲ್ಲಿ ಕುಳಿತೇ ಎಸ್​ಬಿಐ ಎಟಿಎಂ ಕಾರ್ಡ್​ಗೆ ಅಪ್ಲೈ ಮಾಡುವುದು ಹೇಗೆ; ಇಲ್ಲಿದೆ ಹಂತಹಂತವಾದ ವಿವರಣೆ

(Due to maintenance of State Of India internet banking and UPI services unavailable for 4 hours on June 13th, 2021. That is on Sunday)

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್