AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಜೂನ್ 13ರ ಭಾನುವಾರ ನಾಲ್ಕು ಗಂಟೆಗಳ ಕಾಲ ಇಂಟರ್​ನೆಟ್ ಬ್ಯಾಂಕಿಂಗ್, ಯುಪಿಐ ಸೇವೆಗಳು ದೊರೆಯುವುದಿಲ್ಲ ಎಂದು ತಿಳಿಸಲಾಗಿದೆ.

SBI Customer Alert: ಎಸ್​ಬಿಐ ಇಂಟರ್​ನೆಟ್​ ಬ್ಯಾಂಕಿಂಗ್, ಯುಪಿಐ ಸೇವೆ ಜೂನ್ 13ರ ಭಾನುವಾರ 4 ಗಂಟೆ ಲಭ್ಯವಿರಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jun 12, 2021 | 9:58 PM

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇಂಟರ್​ನೆಟ್​ ಬ್ಯಾಂಕಿಂಗ್, ಅದರ ಮೊಬೈಲ್ ಅಪ್ಲಿಕೇಷನ್ YONO ಮತ್ತು ಯುಪಿಐ ಸೇವೆಗಳು ಭಾನುವಾರದಂದು ನಿರ್ವಹಣೆ ಚಟುವಟಿಕೆಗಳು ಇರುವುದರಿಂದ ಕಾರ್ಯ ನಿರ್ವಹಿಸುವುದಿಲ್ಲ. “ಉತ್ತಮ ಬ್ಯಾಂಕಿಂಗ್ ಸೇವೆ ಒದಗಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಗೌರವಾನ್ವಿತ ಗ್ರಾಹಕರಿಗೆ ಸಹಕರಿಸುವಂತೆ ಕೇಳಿಕೊಳ್ಳುತ್ತೇವೆ,” ಎಂದು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಟ್ವೀಟ್ ಮಾಡಿದೆ. ಬ್ಯಾಂಕ್ ಹೇಳಿರುವ ಪ್ರಕಾರ ಜೂನ್ 13ರಂದು 2:40ರಿಂದ 6:40ರ ಮಧ್ಯೆ ನಿರ್ವಹಣೆ ಚಟುವಟಿಕೆಗಳು ನಡೆಸಲಿದ್ದೇವೆ ಎಂದು ಬ್ಯಾಂಕ್​ನಿಂದ ಹೇಳಲಾಗಿದೆ.

ಕಳೆದ ಶುಕ್ರವಾರದಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕೊಲ್ಯಾಟರಲ್ ಇಲ್ಲದಂತೆ ಕವಚ್ ಪರ್ಸನಲ್ ಲೋನ್ ಅನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ಕೊವಿಡ್​ಗೆ ಸಂಬಂಧಿಸಿದಂತೆ ಖರ್ಚುಗಳಿದ್ದು, ಆರ್ಥಿಕ ಒತ್ತಡದಲ್ಲಿ ಇರುವ ಗ್ರಾಹಕರಿಗೆ ಪರ್ಸನಲ್ ಲೋನ್ ಅನ್ನು ನೀಡಲಾಗುತ್ತದೆ. ನೆನಪಿರಲಿ, ಇದು ಕೊವಿಡ್ ವೈದ್ಯಕೀಯ ಚಿಕಿತ್ಸೆಗಾಗಿ ನೀಡಲಿರುವ ಹಣಕಾಸಿನ ಸಾಲವಾಗಿದೆ.

ಸರ್ಕಾರಿ ಸ್ವಾಮ್ಯದ ಎಸ್​ಬಿಐ ಯಾವುದೇ ಕೊಲಾಟರಲ್, ಅಂದರೆ ಆಧಾರಗಳನ್ನು ಪಡೆದುಕೊಳ್ಳದೆ 5 ಲಕ್ಷ ರೂಪಾಯಿ ತನಕ ಸಾಲವನ್ನು ನೀಡುತ್ತದೆ. ಅದಕ್ಕಾಗಿ ವಾರ್ಷಿಕ ಶೇ 8.5ರಷ್ಟು ಬಡ್ಡಿ ದರವನ್ನು ವಿಧಿಸಲಾಗುತ್ತದೆ. ಈ ಮೂಲಕ ಗ್ರಾಹಕರು ಸ್ವಂತ ಹಾಗೂ ಕುಟುಂಬಸ್ಥರ ಕೊವಿಡ್- 19 ವೈದ್ಯಕೀಯ ವೆಚ್ಚವನ್ನು ಭರಿಸುವುದಕ್ಕೆ ಅನುಕೂಲ ಆಗಲಿದೆ ಎಂದು ಬ್ಯಾಂಕ್ ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನೂ ಓದಿ: SBI Loan: ಕೊವಿಡ್​- 19 ಚಿಕಿತ್ಸೆಗೆ ಎಸ್​ಬಿಐನಿಂದ ಕೊಲಾಟರಲ್ ಇಲ್ಲದಂತೆ ಶೇ 8.5 ಬಡ್ಡಿ ದರದಲ್ಲಿ 5 ಲಕ್ಷದ ತನಕ ಸಾಲ

ಇದನ್ನೂ ಓದಿ: SBI Alert: ಮನೆಯಲ್ಲಿ ಕುಳಿತೇ ಎಸ್​ಬಿಐ ಎಟಿಎಂ ಕಾರ್ಡ್​ಗೆ ಅಪ್ಲೈ ಮಾಡುವುದು ಹೇಗೆ; ಇಲ್ಲಿದೆ ಹಂತಹಂತವಾದ ವಿವರಣೆ

(Due to maintenance of State Of India internet banking and UPI services unavailable for 4 hours on June 13th, 2021. That is on Sunday)

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ