10 ಲಕ್ಷ ಡಂಡ: ಇಂದಿನಿಂದ ಸಿಮ್ ಕಾರ್ಡ್ ಹೊಸ ನಿಯಮ: ಈ ವಿಷಯ ನಿಮಗೆ ತಿಳಿದಿರಲಿ

SIM Card Rule Changed From 1st October 2023: ಒಂದುವೇಳೆ ಒಬ್ಬ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ಕಳೆದುಕೊಂಡರೆ ಅಥವಾ ಸಿಮ್ ಕಟ್ ಆದರೆ, ಅವನು ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೋಗಬೇಕಾಗುತ್ತದೆ. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ನಿರ್ದೇಶನ ನೀಡಲಾಗಿದೆ.

10 ಲಕ್ಷ ಡಂಡ: ಇಂದಿನಿಂದ ಸಿಮ್ ಕಾರ್ಡ್ ಹೊಸ ನಿಯಮ: ಈ ವಿಷಯ ನಿಮಗೆ ತಿಳಿದಿರಲಿ
Sim Card
Follow us
|

Updated on:Oct 01, 2023 | 2:42 PM

ಅಕ್ಟೋಬರ್ 1 ಅಂದರೆ ಇಂದಿನಿಂದ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯಾಗಿದೆ. ದೂರಸಂಪರ್ಕ ಇಲಾಖೆ ಅಥವಾ ಡಾಟ್ ಈ ಹಿಂದೆ ಸಿಮ್ ಕಾರ್ಡ್‌ಗಳನ್ನು (Sim Card) ಮಾರಾಟ ಮಾಡುವ ನಿಯಮಗಳನ್ನು ಬದಲಾಯಿಸುವುದಾಗಿ ಘೋಷಿಸಿತ್ತು. ಇನ್ನು ಮುಂದೆ, ಮಾರಾಟಗಾರರು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಈ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂಪಾಯಿಗಳವರೆಗೆ ದಂಡ ಕಟ್ಟಬೇಕು. ದೇಶದಲ್ಲಿ ಹೆಚ್ಚುತ್ತಿರುವ ಸಿಮ್ ಕಾರ್ಡ್ ವಂಚನೆ ದರವನ್ನು ತಡೆಯಲು ಸರ್ಕಾರದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ನಕಲಿ ಸಿಮ್ ಕಾರ್ಡ್‌ಗಳ ಮಾರಾಟವನ್ನು ತಡೆಯಲು ಮಾರಾಟಗಾರರಿಗೆ ಈ ನಿಯಮ ತಂದಿದ್ದರೂ, ಇದು ಖರೀದಿದಾರರ ಮೇಲೂ ಪರಿಣಾಮ ಬೀರುತ್ತದೆ. ಬಹಳ ದಿನಗಳಿಂದ ಬರುತ್ತಿರುವ ದೂರುಗಳಿಗೂ ಸ್ವಲ್ಪ ಮಟ್ಟಿಗೆ ಪರಿಹಾರ ದೊರೆಯಲಿದೆ. ದಿನದಿಂದ ದಿನಕ್ಕೆ ಪ್ರಿ-ಆಕ್ಟಿವೇಟೆಡ್ ಸಿಮ್ ಕಾರ್ಡ್‌ಗಳು ದೇಶದಲ್ಲಿ ಮಾರಾಟವಾಗುತ್ತಿವೆ. ಹೆಚ್ಚಿನ ಸಂದರ್ಭಗಳಲ್ಲಿ, ಆ ಸಿಮ್‌ಗಳನ್ನು ಬೇರೆಯವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈಗ ಸಿಮ್ ಕಾರ್ಡ್ ಮಾರಾಟವನ್ನು ಕಟ್ಟುನಿಟ್ಟಾಗಿ ಮಾಡಲು ಸಾಧ್ಯವಾದರೆ, ಅಂತಹ ವಂಚನೆಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರ ಹೇಳಿದೆ.

ಗೂಗಲ್ ಪಿಕ್ಸೆಲ್ 8 ಸರಣಿ ಬಿಡುಗಡೆಗೆ ದಿನಗಣನೆ: ಈ ಫೋನ್​ನಲ್ಲಿರುವ ಫೀಚರ್ಸ್ ನೋಡಿ

ಇದನ್ನೂ ಓದಿ
Image
ವಿವೋ ತಯಾರಿಸುತ್ತದೆ Y200 ಎಂಬ ಸ್ಮಾರ್ಟ್‌ಫೋನ್: ಇದರ ವಿಶೇಷತೆ ಏನು ನೋಡಿ
Image
ಮೋಟೋ ಫೋನುಗಳಿಗೆ ಹಿಂದೆಂದೂ ಇರದಷ್ಟು ಡಿಸ್ಕೌಂಟ್: ಸೇಲ್ ಯಾವಾಗ ಆರಂಭ?
Image
ಮಡಚುವ ​ಫೋನ್ ಟೆಕ್ನೋ ಪ್ಯಾಂಟಮ್ V ಫ್ಲಿಪ್ 5G ಇಂದಿನಿಂದ ಖರೀದಿಗೆ ಲಭ್ಯ
Image
17,499 ರೂ. ಗೆ 43 ಇಂಚಿನ ಹೊಸ ಸ್ಮಾರ್ಟ್​ ಟಿವಿ ಬಿಡುಗಡೆ

ಹೊಸ ನಿಯಮವು ಜಾರಿಗೆ ಬಂದ ನಂತರ, ಮಾರಾಟಗಾರರು ಪೂರ್ವ-ಸಕ್ರಿಯಗೊಳಿಸಿದ ಸಿಮ್‌ಗಳನ್ನು ಇತರರಿಗೆ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಸಿಮ್ ಕಾರ್ಡ್ ಮಾರಾಟ ಮಾಡುವ ಮಾರಾಟಗಾರರ ಮೇಲೆ ನಿಗಾ ಇಡುವ ಮೂಲಕ ಗ್ರಾಹಕರ ಸಮಸ್ಯೆಗೆ ಅಂತ್ಯ ಹಾಡಲು ದೂರಸಂಪರ್ಕ ಇಲಾಖೆ (ಡಿಒಟಿ) ಮುಂದಾಗಿದೆ. ಅಷ್ಟೇ ಅಲ್ಲ, ಸಿಮ್ ಮಾರಾಟಗಾರನು ತನ್ನ ಅಂಗಡಿ ಸಿಬ್ಬಂದಿಯ ಎಲ್ಲಾ ಮಾಹಿತಿಯ ದಾಖಲೆಯನ್ನು ಇಟ್ಟುಕೊಳ್ಳಬೇಕು. ಅಂಗಡಿ ಸಿಬ್ಬಂದಿ ಕೂಡ ಪೊಲೀಸ್ ಪರಿಶೀಲನೆಗೆ ಹೋಗಬೇಕಾಗುತ್ತದೆ.

DoT ನ ಹೊಸ ನಿಯಮಗಳ ಪ್ರಕಾರ, ಕಾರ್ಪೊರೇಟ್ ID ಸಂಖ್ಯೆ ಅಥವಾ CIN ಸಂಖ್ಯೆಯನ್ನು ಪ್ರತಿ SIM ಕಾರ್ಡ್ ಅಂಗಡಿಗೆ (ಚಿಲ್ಲರೆ) ನೀಡಲಾಗುತ್ತದೆ. ಈ ತುರ್ತು ಸಂಖ್ಯೆ ಇಲ್ಲದೆ ಯಾರೂ ಸಿಮ್ ಕಾರ್ಡ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ. ಈಗ DoT ಅಡಿಯಲ್ಲಿ ನೋಂದಾಯಿಸಲು ಚಿಲ್ಲರೆ ಅಂಗಡಿಯು ಆಧಾರ್, PAN, ಪಾಸ್‌ಪೋರ್ಟ್ ಮತ್ತು GST ವಿವರಗಳನ್ನು ಒದಗಿಸಬೇಕಾಗಿದೆ. ನೋಂದಣಿ ಇಲ್ಲದೆ ಯಾವುದೇ ಅಂಗಡಿಯು ಸಿಮ್ ಕಾರ್ಡ್ ಅನ್ನು ಮಾರಾಟ ಮಾಡಲು ಸಾಧ್ಯವಿಲ್ಲ. ಈ ನೋಂದಣಿ ಇಲ್ಲದೆ ಅಂಗಡಿಯು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಿದರೆ, ಅದರ ಐಡಿಯನ್ನು ನಿರ್ಬಂಧಿಸಲಾಗುತ್ತದೆ.

ಇನ್ನು ಒಂದುವೇಳೆ ಒಬ್ಬ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ಕಳೆದುಕೊಂಡರೆ ಅಥವಾ ಸಿಮ್ ಕಟ್ ಆದರೆ, ಅವನು ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೋಗಬೇಕಾಗುತ್ತದೆ. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ನಿರ್ದೇಶನ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 1 October 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ