AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​​ಫೋನ್ ವಿಚಾರ ಭಾಗ 1: ನೀವು ಹೊಸ ಮೊಬೈಲ್ ಖರೀದಿಸಿದಾಗ ‘ಪೂರ್ತಿ ಚಾರ್ಜ್ ಮಾಡಿದ ಬಳಿಕ ಮತ್ತೆ ಉಪಯೋಗಿಸಿ’ ಎಂದು ಹೇಳುವುದೇಕೆ?

ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳುವುದು ಏಕೆ? ಚಾರ್ಜ್ ಮಾಡದೆ ಏಕೆ ಬಳಸಬಾರದು? ಒಂದು ವೇಳೆ ಹಾಗೆಯೇ ಬಳಸಿದರೆ ಏನಾಗುತ್ತದೆ? ಇದರ ಹಿಂದಿರುವ ಸಾಮಾನ್ಯ ಜ್ಞಾನ ಏನು ಎಂಬುದನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

ಸ್ಮಾರ್ಟ್​​ಫೋನ್ ವಿಚಾರ ಭಾಗ 1: ನೀವು ಹೊಸ ಮೊಬೈಲ್ ಖರೀದಿಸಿದಾಗ ‘ಪೂರ್ತಿ ಚಾರ್ಜ್ ಮಾಡಿದ ಬಳಿಕ ಮತ್ತೆ ಉಪಯೋಗಿಸಿ’ ಎಂದು ಹೇಳುವುದೇಕೆ?
Smart Phone Tips Part 1
Follow us
TV9 Web
| Updated By: Vinay Bhat

Updated on: Jul 28, 2021 | 3:33 PM

ಮಾರುಟ್ಟೆಯಲ್ಲಿ ಇಂದು ಸ್ಮಾರ್ಟ್​ಫೋನ್​ಗಳು ಕಡಿಮೆ ಬೆಲೆಗೆ ಲಭ್ಯವಾಗುತ್ತಿರುವುದರಿಂದ ಇದರ ಬಿಡುಗಡೆ ಹಾಗೂ ಮಾರಾಟ ಕೂಡ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ನೀವು ಯಾವುದೇ ಹೊಸ ಮೊಬೈಲ್ ಅನ್ನು ಖರೀದಿಸಿದಾಗ ಕನಿಷ್ಟ 10 ಗಂಟೆಗೆ ಚಾರ್ಚ್‌ಗೆ ಹಾಕಿ ಬಿಡಿ ಅಥವಾ ಚಾರ್ಜ್ ಫುಲ್ ಮಾಡಿದ ನಂತರವೇ ಉಪಯೋಗಿಸಿ, ಯಾವುದೇ ಕಾರಣಕ್ಕೂ ಚಾರ್ಜ್ ಮಾಡದೆ ಈ ಹೊಸ ಮೊಬೈಲ್ ಅನ್ನು ಬಳಕೆ ಮಾಡಬೇಡಿ ಎಂದು ಹೇಳುತ್ತಾರೆ.

ಇದಕ್ಕೆ ಯಾವುದೇ ಪ್ರಶ್ನೆ ಮಾಡದೆ ಹೊಸ ಮೊಬೈಲ್ ಆಗಿರುವುದರಿಂದ ಅವರು ಹೇಳಿದಂತೆ ಪಾಲಿಸುತ್ತೀರಿ. ಅಷ್ಟಕ್ಕು ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳುವುದು ಏಕೆ? ಚಾರ್ಜ್ ಮಾಡದೆ ಏಕೆ ಬಳಸಬಾರದು? ಒಂದು ವೇಳೆ ಹಾಗೆಯೇ ಬಳಸಿದರೆ ಏನಾಗುತ್ತದೆ? ಇದರ ಹಿಂದಿರುವ ಸಾಮಾನ್ಯ ಜ್ಞಾನ ಏನು ಎಂಬುದನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ.

ಇದಕ್ಕೆ ಲೀ-ಐಯಾನ್ ಬ್ಯಾಟರಿ ಕಾರಣ: ಪ್ರಸ್ತುತ ಹೆಚ್ಚು ಮೊಬೈಲ್‌ಗಳಲ್ಲಿ ಬಳಕೆಯಲ್ಲಿರುವ ಲಿ-ಐಯಾನ್ ಬ್ಯಾಟರಿ ಖರೀದಿಸಿದ ಹೊಸ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಿ ಬಳಸಲು ಮುಖ್ಯ ಕಾರಣ. ಲಿ- ಐಯಾನ್ ಬ್ಯಾಟರಿಯಲ್ಲಿನ ಪ್ರತಿ ಕೋಶದ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಅನ್ನು ಪೂರ್ತಿ ತಗ್ಗಿಸಲು ಮೊಬೈಲ್ ಕಂಪೆನಿಗಳು ಸೂಚಿಸುತ್ತವೆ. ಬ್ಯಾಟರಿಯು ಶೇ. 100 ರಷ್ಟು ಸಂಪೂರ್ಣ ಚಾರ್ಜ್ ಆಗಿದ್ದರೆ ಬ್ಯಾಟರಿಯ ಡಿಒಡಿ 0% ಆಗಿದೆ ಎಂದರ್ಥ. ಆಗ ನಿಮ್ಮ ಮೊಬೈಲ್​ಗೆ ಯಾವುದೆ ತೊಂದರೆ ಆಗುವುದಿಲ್ಲ.

20% ಗಿಂತ ಕಡಿಮೆ ಇರಬೇಕು: ಮೇಲೆ ತಿಳಿಸಿದಂತೆ ಲಿ-ಐಯಾನ್ ಬ್ಯಾಟರಿಯ DOD (ಡೆಪ್ತ್ ಆಫ್ ಡಿಸ್ಟಾರ್ಜ್) ಪೂರ್ತಿ ಕಡಿಮೆ ಇದ್ದರೆ ಒಳ್ಳೆಯದು. ಅಂದರೆ, ಸಂಪೂರ್ಣ ಚಾರ್ಜ್ ಆದ ಬ್ಯಾಟರಿ ಫೋನ್ ಶುರು ಮಾಡಲು ಇರಬೇಕು. ಹಾಗಾಗಿ, ಬ್ಯಾಟರಿಯಲ್ಲಿ ಕನಿಷ್ಟಪಕ್ಷ ಎಂದರೂ 20% ಗಿಂತ ಕಡಿಮೆ ಡಿಒಡಿ ಇರಬೇಕು. ಅಂದರೆ 80% ಹೆಚ್ಚು ಬ್ಯಾಟರಿ ಶಕ್ತಿ ತುಂಬಿರಬೇಕು.

ಹಾರ್ಡ್‌ವೇರ್ ರಕ್ಷಣೆಗಾಗಿ: ತುಂಬಾ ದಿನಗಳಿಂದ ಬಳಕೆಯಲ್ಲಿರದ ಮೊಬೈಲ್ ಬ್ಯಾಟರಿ, ಒಮ್ಮೆಲೇ ಮೊಬೈಲ್‌ನ ಎಲ್ಲಾ ಬಿಡಿಭಾಗಗಳಿಗೂ ವಿಧ್ಯುತ್ ಶಕ್ತಿಯನ್ನು ಪೂರೈಸಬೇಕಾಗುತ್ತದೆ. ಇಂತಹ ಸಮಯದಲ್ಲಿ ಮೊಬೈಲ್‌ನ ಹಾರ್ಡ್​ವೇರ್ ಭಾಗಗಳು ಹೆಚ್ಚು ವಿಧ್ಯುತ್ ಶಕ್ತಿಯನ್ನು ಬೇಡುವುದರಿಂದ ಮೊಬೈಲ್ ಬ್ಯಾಟರಿ ಪೂರ್ತಿ ತುಂಬಿರಬೇಕಾಗುತ್ತದೆ.

ಚಾರ್ಜ್ ಮಾಡದಿದ್ದರೆ ಏನಾಗುತ್ತದೆ?: ಮೊಬೈಲ್‌ಗಳು ತಯಾರಾಗಿ ಓರ್ವ ಗ್ರಾಹಕನ ಕೈ ತಲುಪಲು ಕನಿಷ್ಟ ಎಂದರೂ 3 ರಿಂದ 6 ತಿಂಗಳ ಸಮಯ ಹಿಡಿಯುತ್ತದೆ. ಇದು ಎಲ್ಲರಿಗು ತಿಳಿದಿರುವ ವಿಚಾರ. ಈ ಸಮಯದಲ್ಲಿ ಬ್ಯಾಟರಿ ಸೆಲ್‌ಗಳು ಸಂಕುಚಿತಗೊಂಡಿರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಒಮ್ಮೆ ಬ್ಯಾಟರಿ ಪೂರ್ಣ ಡೆಡ್ ಆದರೆ ಅದರ ಕಾರ್ಯನಿರ್ವಹಣಾ ಶಕ್ತಿ ಕುಂದುತ್ತದೆ.

ಬೇರೆ ಏನು ಕಾರಣ?: ಹೊಸ ಮೊಬೈಲ್ ಖರೀಸದಿಸಿದ ನಂತರ ಮೊಬೈಲ್ ಅನ್ನು ಪೂರ್ತಿ ಚಾರ್ಜ್ ಮಾಡಲು ಹೇಳಲು ಇವಿಷ್ಟೆ ಕಾರಣಗಳಲ್ಲದೇ ಮತ್ತೊಂದು ಕಾರಣವಿದೆ. ಗ್ರಾಹಕರು ಹೊಸ ಮೊಬೈಲ್ ಖರೀದಿಸಿದ ನಂತರ ಮೊಬೈಲ್ ಬಳಕೆಯ ಪೂರ್ತಿ ಅನುಭವ ಪಡೆಯಬೇಕು. ಬ್ಯಾಟರಿ ಬೇಗ ಖಾಲಿಯಾಗುವ ಕಿರಿಕಿರಿ ಅವರಿಂದ ದೂರವಿರಬೇಕು ಎಂದು ಮೊಬೈಲ್ ಕಂಪೆನಿಗಳು ಹೀಗೆ ಹೇಳುತ್ತವೆ.

(Smart Phone Tips Part 1: When You Buy a New Mobile Phone suggested to use after full charge what’s the reason behind it)

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ