Data Protection: ನಿಮ್ಮ ಡಾಟಾವನ್ನು ಸುರಕ್ಷಿತವಾಗಿ ಇಡುವುದು ಹೇಗೆ?: ಗೂಗಲ್ ಸಿಇಒ ಸುಂದರ್ ಪಿಚೈ ನೀಡಿದ್ದಾರೆ ಟಿಪ್ಸ್

ಫೇಸ್​ಬುಕ್, ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಮ್ ಸೇರಿದಂತೆ ಸಕ್ರಿಯವಾಗಿರುವ ಹೆಚ್ಚಿನ ಸಾಮಾಜಿಕ ಜಾಲತಾಣಗಳಲ್ಲಿ ಈ ಆಯ್ಕೆಯನ್ನು ನೀಡಲಾಗಿದೆ. ಇದನ್ನು ಆ್ಯಕ್ಟಿವ್ ಮಾಡುವುದರಿಂದ ಹ್ಯಾಕರ್​ಗಳ ದಾಳಿಯಿಂದ ನಿಮ್ಮನ್ನ ನೀವು ರಕ್ಷಿಸಿಕೊಳ್ಳಬಹುದು.

Data Protection: ನಿಮ್ಮ ಡಾಟಾವನ್ನು ಸುರಕ್ಷಿತವಾಗಿ ಇಡುವುದು ಹೇಗೆ?: ಗೂಗಲ್ ಸಿಇಒ ಸುಂದರ್ ಪಿಚೈ ನೀಡಿದ್ದಾರೆ ಟಿಪ್ಸ್
Sundar Pichai
Follow us
| Updated By: Digi Tech Desk

Updated on:Jul 13, 2021 | 2:33 PM

ಟೆಕ್ನಾಲಜಿ (Technology) ಇಂದು ಆಗಸದೆತ್ತರಕ್ಕೆ ಬೆಳೆಯುತ್ತಿದೆ. ಸಾಮಾಜಿಕ ಜಾಲತಾಣ ಬಳಸುವವರ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಇದರ ನಡುವೆ ಇತ್ತೀಚಿನ ದಿನಗಳಲ್ಲಿ ಆನ್​ಲೈನ್​​ ವಂಚನೆ, ಸೈಬರ್​ ಕ್ರೈಂ (Cyber crime) ನಂತಹ ಘಟನೆಗಳು ಕೂಡ ಹೆಚ್ಚುತ್ತಿವೆ. ಇದರಿಂದ ನಮ್ಮ ಡಾಟಾವನ್ನು ಸುರಕ್ಷಿತವಾಗಿ ಇಡುವುದು ಸವಾಲಿನ ಕೆಲಸ ಆಗಿಬಿಟ್ಟಿದೆ. ಹೀಗಿರುವಾಗ ಸರ್ಚ್ ಇಂಜಿನ್ ಗೂಗಲ್ ಸಂಸ್ಥೆಯ ಸಿಇಒ ಸುಂದರ್ ಪಿಚೈ (Google CEO Sundar Pichai) ಅವರು ನಿಮ್ಮ ಡಾಟಾವನ್ನು ಸುರಕ್ಷಿತವಾಗಿಡಲು ಕೆಲವೊಂದು ಟಿಪ್ಸ್ ನೀಡಿದ್ದಾರೆ.

ಬಿಬಿಸಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಸುಂದರ್ ಪಿಚೈ ಪ್ರಮುಖವಾಗಿ ಪಾಸ್​ವರ್ಡ್ ವಿಚಾರವಾಗಿ ಹೇಳಿದ್ದಾರೆ. ಪಾಸ್​ವರ್ಡ್ ಅನ್ನು ಪದೇ ಪದೇ ಬದಲಾಯಿಸುವುದು ಉತ್ತಮ ಆಯ್ಕೆಯಲ್ಲ. ಬದಲಾಗಿ ಟು-ಫ್ಯಾಕ್ಟರ್ ಅಥೆಂಟಿಕೇಷನ್ ಅನ್ನು ಆ್ಯಕ್ಟಿವ್ ಮಾಡಿಕೊಂಡರೆ ಸೇಫ್ ಎಂಬುದು ಅವರ ಅಭಿಪ್ರಾಯ. ಸುಂದರ್ ಪಿಚೈ ಅವರು ಕೂಡ ಇದೇ ನಿಯಮವನ್ನು ಅನುಸರಿಸುತ್ತಾರಂತೆ.

ಟು-ಫ್ಯಾಕ್ಟರ್ ಅಥೆಂಟಿಕೇಷನ್ ಅನ್ನು ಆ್ಯಕ್ಟಿವ್ ಮಾಡುವುದರಿಂದ ನಿಮ್ಮ ಯಾವುದೇ ಮಾಹಿತಿ ಹ್ಯಾಕ್ ಆಗುವುದನ್ನು ತಡೆಯಬಹುದು ಎಂಬುದು ಸುಂದರ್ ಅನಿಸಿಕೆ. ವಿಶ್ವದಾದ್ಯಂತ ಬಹುತೇಕ ದೇಶಗಳಲ್ಲಿ ಮುಕ್ತ ಇಂಟರ್​ನೆಟ್​ ದಾಳಿಗೆ ಗುರಿಯಾಗುತ್ತಿದೆ. ಹಲವು ದೇಶಗಳು ಮಾಹಿತಿಗಳ ಹರಿವನ್ನು ನಿರ್ಬಂಧಿಸುತ್ತಿವೆ ಮತ್ತು ಈ ಮಾದರಿಯನ್ನು ಪದೇಪದೇ ಟೇಕಿಟ್ ಫಾರ್ ಗ್ರಾಂಟೆಡ್ ಅಂತ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಈಗ ಫೇಸ್​ಬುಕ್, ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಮ್ ಸೇರಿದಂತೆ ಸಕ್ರಿಯವಾಗಿರುವ ಹೆಚ್ಚಿನ ಸಾಮಾಜಿಕ ಜಾಲತಾಣಗಳಲ್ಲಿ ಈ ಆಯ್ಕೆಯನ್ನು ನೀಡಲಾಗಿದೆ. ಇದನ್ನು ಆ್ಯಕ್ಟಿವ್ ಮಾಡುವುದರಿಂದ ಹ್ಯಾಕರ್​ಗಳ ದಾಳಿಯಿಂದ ನಿಮ್ಮನ್ನ ನೀವು ರಕ್ಷಿಸಿಕೊಳ್ಳಬಹುದು.

ಇನ್ನೂ ಭಾರತದ ಬಗ್ಗೆಯೂ ಮಾತನಾಡಿರುವ ಸುಂದರ್, ನಾನೊಬ್ಬ ಅಮೆರಿಕ ನಾಗರಿಕ. ಆದರೆ ಭಾರತ ನನ್ನೊಳಗೆ ಆಳವಾಗಿ ಉಳಿದಿದೆ. ನಾನು ಇವತ್ತು ಏನಾಗಿದ್ದೇನೋ ಅದರ ದೊಡ್ಡ ಭಾಗವಾಗಿ ಭಾರತ ಇದೆ ಎಂದು ಹೇಳಿದರು.

ಕೇವಲ 60 ದಿನಗಳಲ್ಲಿ ನೀವು ಇಂಜಿನಿಯರ್ ಆಗಬೇಕೆ?: ಕನ್ನಡಿಗರಿಂದ ಕನ್ನಡಿಗರಿಗಾಗಿ ವಿನೂತನ ಪ್ರಯತ್ನ

Geomagnetic Storm: ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಸೌರ ಚಂಡಮಾರುತ; ಮೊಬೈಲ್​ ಸಿಗ್ನಲ್, ವಿದ್ಯುತ್, ಸ್ಯಾಟಲೈಟ್ ಸಂಪರ್ಕ ಎಲ್ಲವೂ ಕಡಿತ ಸಾಧ್ಯತೆ!

Published On - 1:40 pm, Tue, 13 July 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ