TCS: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಸಿಗಲಿದೆ ಚಿಪ್‌ ಆಧಾರಿತ ಇ- ಪಾಸ್​ಪೋರ್ಟ್

e-passports: ತನ್ನ ನಾಗರಿಕರಿಗೆ ಈ ವರ್ಷದ ಕೊನೆಯಲ್ಲಿ ಇ-ಪಾಸ್‌ಪೋರ್ಟ್‌ಗಳನ್ನು (E-Passports) ನೀಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ವರ್ಷದ ಕೇಂದ್ರ ಬಜೆಟ್‌ನಲ್ಲಿಯೂ ಕೂಡ ಇ-ಪಾಸ್‌ಪೋರ್ಟ್‌ ಪ್ರಾರಂಭದ ಬಗ್ಗೆ ಪ್ರಾಸ್ತಪಿಸಲಾಗಿತ್ತು.

TCS: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಸಿಗಲಿದೆ ಚಿಪ್‌ ಆಧಾರಿತ ಇ- ಪಾಸ್​ಪೋರ್ಟ್
passports
Follow us
| Edited By: Vinay Bhat

Updated on: Jun 23, 2022 | 11:57 AM

ಭಾರತದಲ್ಲಿ ಇ- ಪಾಸ್​ಪೋರ್ಟ್ ಯಾವಾಗ ಸಿಗಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ತನ್ನ ನಾಗರಿಕರಿಗೆ ಈ ವರ್ಷದ ಕೊನೆಯಲ್ಲಿ ಇ-ಪಾಸ್‌ಪೋರ್ಟ್‌ಗಳನ್ನು (E-Passports) ನೀಡಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ವರ್ಷದ ಕೇಂದ್ರ ಬಜೆಟ್‌ನಲ್ಲಿಯೂ ಕೂಡ ಇ-ಪಾಸ್‌ಪೋರ್ಟ್‌ ಪ್ರಾರಂಭದ ಬಗ್ಗೆ ಪ್ರಾಸ್ತಪಿಸಲಾಗಿತ್ತು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಜನರ ಅನುಕೂಲಕ್ಕಾಗಿ ಇ- ಪಾಸ್ ಪೋರ್ಟ್ ಗಳನ್ನು ವಿತರಿಸುವುದಾಗಿ ಘೋಷಣೆ ಮಾಡಿದ್ದರು. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಈಗಾಗಲೇ ಹೊಸ ನಿಯಂತ್ರಣ ಕೇಂದ್ರ ಮತ್ತು ಹೊಸ ಡೇಟಾ ಸೆಂಟರ್‌ ಸ್ಥಾಪಿಸುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ನೊಂದಿಗೆ ಕೆಲಸ ಮಾಡುತ್ತಿದೆ ಎನ್ನಲಾಗಿದೆ. ಹೀಗಾದಲ್ಲಿ ಈ ವರ್ಷದ ಕೊನೆಯಲ್ಲಿಯೇ ದೇಶದಲ್ಲಿ ಚಿಪ್‌ ಆಧಾರಿತ ಇ-ಪಾಸ್‌ಪೋರ್ಟ್‌ಗಳು ದೊರೆಯಲಿವೆ.

ಪ್ರಸ್ತುತ ಭಾರತೀಯ ನಾಗರಿಕರಿಗೆ ವಿತರಿಸುತ್ತಿರುವ ಪಾಸ್ ಪೋರ್ಟ್ ಪುಸ್ತಕ ರೂಪದಲ್ಲಿದೆ. ಇದನ್ನು  ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ನಿಗದಿಪಡಿಸಿರುವ ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಇ-ಪಾಸ್ ಪೋರ್ಟ್ ಅನ್ನು ಕೂಡ ಎರಡು ವಿಧದಲ್ಲಿ ವಿತರಿಸಲಾಗೋದು. ಒಂದು ಸಾಂಪ್ರದಾಯಿಕ ಪುಸ್ತಕ ರೂಪದಲ್ಲಿರೋ ಪಾಸ್ ಪೋರ್ಟ್​​ಗೆ ಎಲೆಕ್ಟ್ರಾನಿಕ್ ಚಿಪ್ (electronic chip) ಅಳವಡಿಸೋದು.ಇದು ಪಾಸ್ ಪೋರ್ಟ್ ಪುಟ 2ರಲ್ಲಿರೋ ವೈಯಕ್ತಿಕ ಮಾಹಿತಿಗಳು ಹಾಗೂ ಡಿಜಿಟಲ್ ಸುರಕ್ಷೆ ವೈಶಿಷ್ಟ್ಯಗಳನ್ನು ಸಂಗ್ರಹಿಸಿರುತ್ತದೆ.

Electric Bikes: 50,000 ಕ್ಕಿಂತ ಕಡಿಮೆ ಬೆಲೆಯ ಇಲೆಕ್ಟ್ರಿಕ್​​ ಬೈಕ್​ ಇಲ್ಲಿವೆ

ಇದನ್ನೂ ಓದಿ
Image
WhatsApp: ವಾಟ್ಸ್​​ಆ್ಯಪ್​​ನಲ್ಲಿರುವ ಮಲ್ಟಿಡಿವೈಸ್ ಆಯ್ಕೆಯನ್ನು ಅನ್​ಲಿಂಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ
Image
OnePlus Nord 2T: ಜೂ. 27ರಂದು ಭಾರತಕ್ಕೆ ಅಪ್ಪಳಿಸಲಿದೆ ಒನ್‌ಪ್ಲಸ್‌ ನಾರ್ಡ್ 2T: ಇದರ ಫೀಚರ್ಸ್​ ಕೇಳಿದ್ರೆ ದಂದಾಗ್ತೀರ
Image
OPPO A57: ಬಜೆಟ್ ಫೋನ್ ಅಂದ್ರೆ ಇದು: ಭಾರತದಲ್ಲಿ ಒಪ್ಪೋ A57 (2022) ಸ್ಮಾರ್ಟ್‌ಫೋನ್‌ ಬಿಡುಗಡೆ
Image
Cloudflare Outage: ಕ್ಲೌಡ್​ಫ್ಲೇರ್​ನಲ್ಲಿ ಮತ್ತೆ ಸಮಸ್ಯೆ: ಝೆರೊಧಾ, ಅಪ್​ಸ್ಟಾಕ್ಸ್, ಕ್ಯಾನ್ವಾ ಸೇರಿ ಹಲವು ವೆಬ್​ಸೈಟ್​ಗಳು ಡೌನ್

ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಇ-ಪಾಸ್‌ಪೋರ್ಟ್ ಅನ್ನು ನೀಡುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜೊತೆಗೆ ಕೆಲಸ ಮಾಡುತ್ತಿದೆ. ಇ-ಪಾಸ್‌ಪೋರ್ಟ್‌ ಅನುಷ್ಠಾನ ಹಂತದ ಪ್ರಕ್ರಿಯೆಯ ಎರಡನೇ ಹಂತದಲ್ಲಿ ಹೊಸ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸ ಲಾಗುತ್ತದೆ ಎನ್ನಲಾಗಿದೆ. ಇದರಿಂದ ಹೆಚ್ಚು ಅನುಕೂಲಕರವಾಗಲಿದ್ದು, ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ಸುಧಾರಿಸಲು ಸಾಧ್ಯವಾಗಲಿದೆ. ಮೈಕ್ರೋಚಿಪ್ ಪಾಸ್‌ಪೋರ್ಟ್ ಹೊಂದಿರುವವರ ಹೆಸರು, ಹುಟ್ಟಿದ ದಿನಾಂಕ ಮತ್ತು ಇತರ ವಿವರಗಳಂತಹ ಮಾಹಿತಿಯನ್ನು ಒಳಗೊಂಡಿರುತ್ತದೆ. ಇ-ಪಾಸ್‌ಪೋರ್ಟ್ ಪ್ರಯಾಣಿಕರಿಗೆ ಅತ್ಯಂತ ಉಪಯುಕ್ತವಾಗಿದೆ ಏಕೆಂದರೆ ಇದು ವಲಸೆ ಕೌಂಟರ್‌ನ ಮುಂದೆ ದೀರ್ಘ ಸರತಿಯಲ್ಲಿ ನಿಲ್ಲುವ ಅಗತ್ಯವನ್ನು ನಿವಾರಿಸುತ್ತದೆ.

ಇ-ಪಾಸ್‌ಪೋರ್ಟ್ ಅನ್ನು ಇಮಿಗ್ರೇಷನ್ ಕೌಂಟರ್‌ನಲ್ಲಿ ಭೌತಿಕ ಪರಿಶೀಲನೆಗೆ ವಿರುದ್ಧವಾಗಿ ನಿಮಿಷಗಳಲ್ಲಿ ಸ್ಕ್ಯಾನ್ ಮಾಡಬಹುದು. ಇದು ನಕಲಿ ಪಾಸ್‌ಪೋರ್ಟ್ ವ್ಯವಹಾರವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ ಏಕೆಂದರೆ ಸ್ಕ್ಯಾಮರ್‌ಗಳು ಮೈಕ್ರೋಚಿಪ್‌ನಲ್ಲಿ ದಾಖಲಾದ ಡೇಟಾವನ್ನು ಕದಿಯಲು ಕಷ್ಟವಾಗುತ್ತದೆ. ಈಗಾಗಲೇ ಬಯೋಮೆಟ್ರಿಕ್ ಇ-ಪಾಸ್‌ಪೋರ್ಟ್ ವ್ಯವಸ್ಥೆಯನ್ನು ಹೊಂದಿರುವ US, UK ಮತ್ತು ಜರ್ಮನಿ ಸೇರಿದಂತೆ 120 ದೇಶಗಳಲ್ಲಿ ಇ-ಪಾಸ್‌ಪೋರ್ಟ್‌ನ ಪರಿಕಲ್ಪನೆಯನ್ನು ಈಗಾಗಲೇ ಪರಿಚಯಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಲೀಲಾವತಿ ಅಂತಿಮ ದರ್ಶನಕ್ಕೆ ಹೇಗಿದೆ ವ್ಯವಸ್ಥೆ:ಜಿಲ್ಲಾಧಿಕಾರಿ ನೀಡಿದ ಮಾಹಿತಿ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
ಕಣ್ಣೀರು ಹಾಕುತ್ತಲೇ ಲೀಲಮ್ಮನ ಪೋಟೋಗೆ ವಿನೋದ್ ಪೂಜೆ; ಇಲ್ಲಿದೆ ಭಾವುಕ ಕ್ಷಣ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ