AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Truecaller: ಟ್ರೂ ಕಾಲರ್​ನಲ್ಲಿ ಕಾಣಿಸುವ ನಿಮ್ಮ ಹೆಸರನ್ನು ಬದಲಾಯಿಸಬೇಕೇ: ಇಲ್ಲಿದೆ ನೋಡಿ ಟ್ರಿಕ್

Tech Tips: ಟ್ರೂಕಾಲರ್‌ನಲ್ಲಿ ಕಾಣಿಸುವ ಹೆಸರುಗಳು ಕೆಲವೊಮ್ಮೆ ತಪ್ಪಾಗಿರುತ್ತವೆ. ಆದರೆ ಬಳಕೆದಾರರೇ ಅವರ ಹೆಸರನ್ನು ಸರಿಯಾಗಿ ನಮೂದಿಸಲು ಅವಕಾಶ ಇದೆ. ಹೌದು, ನಿಮ್ಮ ಟ್ರೂ ಕಾಲರ್ ಹೆಸರನ್ನು ನೀವು ಸುಲಭವಾಗಿ ಬದಲಾಯಿಸಬಹುದು.

Truecaller: ಟ್ರೂ ಕಾಲರ್​ನಲ್ಲಿ ಕಾಣಿಸುವ ನಿಮ್ಮ ಹೆಸರನ್ನು ಬದಲಾಯಿಸಬೇಕೇ: ಇಲ್ಲಿದೆ ನೋಡಿ ಟ್ರಿಕ್
Truecaller
Follow us
TV9 Web
| Updated By: Vinay Bhat

Updated on: Oct 25, 2022 | 12:33 PM

ಈಗಂತು ಅನೇಕ ಸ್ಮಾರ್ಟ್‌ಫೋನ್ (Smartphone) ಬಳಕೆದಾರರು ಪ್ರಸಿದ್ಧ ಟ್ರೂ ಕಾಲರ್ ಆ್ಯಪ್ (Truecaller App) ಅನ್ನು ಬಳಕೆ ಮಾಡುತ್ತಿದ್ದಾರೆ. ಇದರಿಂದ ಬೇಡವಾದ ಕರೆಗಳನ್ನು ನಿರ್ಭಂದಿಸಬಹುದು. ಅಲ್ಲದೆ ಗುರುತು ಪತ್ತೆ ಇಲ್ಲದ ನಂಬರ್ ಗಳನ್ನು ಹುಡುಕಲು ಸೇರಿದಂತೆ ವಿವಿಧ ಕಾರ್ಯಗಳಿಗೆ ಟ್ರೂಕಾಲರ್ ಆ್ಯಪ್ ಸಹಕಾರಿಯಾಗಿದೆ. ಪ್ರಮುಖವಾಗಿ ಅಪರಿಚಿತ ಕರೆಯನ್ನು ಪತ್ತೆ ಹಚ್ಚುವುದಕ್ಕೆಂದೇ ಟ್ರೂಕಾಲರ್ ಆ್ಯಪ್ ಹೆಚ್ಚು ಫೇಮಸ್ ಆಗಿದೆ. ಹೀಗೆ ಟ್ರೂ ಕಾಲರ್ ಅನೇಕ ಫೀಚರ್​ಗಳನ್ನು ಪರಿಚಯಿಸಿ ವಿಶ್ವದ ಅತ್ಯಂತ ಜನಪ್ರಿಯ ಕ್ರೌಡ್‌ಸೋರ್ಸ್ಡ್ ಕಾಲರ್ ID ಅಪ್ಲಿಕೇಶನ್ (Application) ಆಗಿ ಗುರುತಿಸಿಕೊಂಡಿದೆ. ಹೆಚ್ಚಿನ ಸಂದರ್ಭಗಳಲ್ಲಿ ನಿಮಗೆ ಕರೆ ಮಾಡುವ ಸಂಖ್ಯೆಯನ್ನು ಬಳಸುವವರ ಹೆಸರನ್ನು ಕೂಡ ಪತ್ತೆ ಮಾಡಬಲ್ಲದು. ಆದರೆ ಹೆಸರು ಸರಿಯಾಗಿಲ್ಲದಿದ್ದರೆ ಅದು ದಾರಿ ತಪ್ಪಿಸುತ್ತದೆ ಎನ್ನಬಹುದಾಗಿದೆ.

ಟ್ರೂ ಕಾಲರ್ ಹೊಸ ನಂಬರ್‌ನಿಂದ ಕರೆ ಬಂದರೇ ಅದು ಯಾರದ್ದು ಅಂತಾ ತಿಳಿಸುತ್ತದೆ. ಹಾಗೆಯೇ ಫೋನ್ ರಿಂಗ್ ಆಗುವ ಮೊದಲೇ ಯಾರು ಕರೆ ಮಾಡುತ್ತಿದ್ದಾರೆ ಎಂದು ಹೇಳುವ ಆಯ್ಕೆಯನ್ನು ಈ ಆ್ಯಪ್‌ ಪಡೆದಿರುವುದು ವಿಶೇಷ. ಟ್ರೂಕಾಲರ್‌ನಲ್ಲಿ ಕಾಣಿಸುವ ಹೆಸರುಗಳು ಕೆಲವೊಮ್ಮೆ ತಪ್ಪಾಗಿರುತ್ತವೆ. ಆದರೆ ಬಳಕೆದಾರರೇ ಅವರ ಹೆಸರನ್ನು ಸರಿಯಾಗಿ ನಮೂದಿಸಲು ಅವಕಾಶ ಇದೆ. ಹೌದು, ನಿಮ್ಮ ಟ್ರೂ ಕಾಲರ್ ಹೆಸರನ್ನು ನೀವು ಸುಲಭವಾಗಿ ಬದಲಾಯಿಸಬಹುದು. ಒಂದು ವೇಳೆ, ನಿಮ್ಮ ಉಪಸ್ಥಿತಿಯನ್ನು ತೋರಿಸಲು ನೀವು ಬಯಸುವುದಿಲ್ಲ, ಜನರ ದೃಷ್ಟಿಯಿಂದ ನಿಮ್ಮ ಹೆಸರನ್ನು ನೀವು ಮರೆ ಮಾಡಲು ಬಯಸಿದರೆ ನಿಮ್ಮ ಫೋನ್ ಸಂಖ್ಯೆಯನ್ನು ಅಪ್ಲಿಕೇಶನ್‌ನಿಂದ ಅನ್ಲಿಸ್ಟ್ ಮಾಡಬಹುದು. ಅದು ಹೇಗೆ ಎಂಬುದಕ್ಕೆ ಇಲ್ಲಿದೆ ನೋಡಿ ಟ್ರಿಕ್.

ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿ ಟ್ರೂಕಾಲರ್ ಅಪ್ಲಿಕೇಶನ್‌ಗೆ ಹೋಗಿ ಮೇಲಿನ ಬಲ ಮೂಲೆಯಲ್ಲಿರುವ ಮೆನು ಆಯ್ಕೆಯನ್ನು ಆರಿಸಿ. ಅಲ್ಲಿ ಎಡಿಟ್‌ ಆಯ್ಕೆಯೊಂದಿಗೆ ನಿಮ್ಮ ಪ್ರೊಫೈಲ್ ಅನ್ನು ನೀವು ಕಾಣಬಹುದು. ನಿಮ್ಮ ಪ್ರೊಫೈಲ್ ಎಡಿಟ್‌ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ವಿವರಗಳ ಹಾಳೆ ಕಾಣಿಸುತ್ತದೆ.

ಇದನ್ನೂ ಓದಿ
Image
Airtel: ದಿನಕ್ಕೆ 3GB ಡೇಟಾ: ಏರ್ಟೆಲ್​ನ ಈ ಪ್ಲಾನ್ ಹಾಕಿಸಿಕೊಂಡರೆ ಸಿಗಲಿದೆ ಭರ್ಜರಿ ಆಫರ್
Image
ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್
Image
WhatsApp: ದೀಪಾವಳಿ ದಿನವೇ ಐಫೋನ್-ಆಂಡ್ರಾಯ್ಡ್ ಬಳಕೆದಾರರಿಗೆ ಶಾಕ್ ನೀಡಿದ ವಾಟ್ಸ್​ಆ್ಯಪ್
Image
Galaxy S23 Ultra: ಸ್ಯಾಮ್​ಸಂಗ್ ಗ್ಯಾಲಕ್ಸಿ S23 ಸರಣಿ ಬಗ್ಗೆ ಹೊರಬಿತ್ತು ಮತ್ತೊಂದು ಶಾಕಿಂಗ್ ವಿಚಾರ: ಪ್ರೊಸೆಸರ್ ಯಾವುದು?

ಈಗ, ಟ್ರೂಕಾಲರ್‌ನಲ್ಲಿ ನೀವು ತೋರಿಸಲು ಬಯಸುವ ಯಾವುದೇ ಹೆಸರಿನಿಂದ ಮೊದಲ ಮತ್ತು ಕೊನೆಯ ಹೆಸರುಗಳ ವಿಭಾಗವನ್ನು ಎಡಿಟ್‌ ಮಾಡಿ. ಇದನ್ನು ಮಾಡಿದ ನಂತರ, ಮೇಲಿನ ಬಲ ಮೂಲೆಯಲ್ಲಿರುವ ಸೇವ್ ಆಯ್ಕೆಯನ್ನು ಟ್ಯಾಪ್ ಮಾಡಿ ಮತ್ತು ಇದು ನಿಮ್ಮ ವಿವರಗಳನ್ನು ಸೇವ್‌ ಮಾಡುತ್ತದೆ.

ಇದಲ್ಲದೆ ನೀವು ಬಯಸಿದರೆ ಪರ್ಯಾಯವಾಗಿ, ಡೆಸ್ಕ್‌ಟಾಪ್ ಮೂಲಕವೂ ನಿಮ್ಮ ಹೆಸರನ್ನು ಟ್ರೂಕಾಲರ್‌ನಲ್ಲಿ ಬದಲಾಯಿಸಬಹುದು. ಇದಕ್ಕಾಗಿ ನೀವು ಮಾಡಬೇಕಾಗಿರುವುದು ಟ್ರೂಕಾಲರ್ ವೆಬ್‌ಸೈಟ್‌ಗೆ ಹೋಗಿ, ನಿಮ್ಮ ವಿವರಗಳೊಂದಿಗೆ ಪ್ಲಾಟ್‌ಫಾರ್ಮ್‌ಗೆ ಲಾಗ್ ಇನ್ ಮಾಡಿ. ನಿಮ್ಮ ಫೋನ್ ಸಂಖ್ಯೆಯನ್ನು ನಮೂದಿಸಿದ ನಂತರ ಸೂಚಿಸುವ ಹೆಸರನ್ನು ಆಯ್ಕೆ ಮಾಡಿ. ಹೊಸ ಹೆಸರನ್ನು ಸೇರಿಸಿ ಮತ್ತು ಸೇವ್‌ ಆಯ್ಕೆಯನ್ನು ಟ್ಯಾಪ್‌ ಮಾಡಿರಿ. ನೀವು ಮಾಡಿರುವ ಬದಲಾವಣೆಗಳು ಟ್ರೂಕಾಲರ್‌ನಲ್ಲಿರುವ ಜನರಿಗೆ ಒಂದು ಅಥವಾ ಎರಡು ದಿನಗಳಲ್ಲಿ ಕಾಣಿಸಲು ಪ್ರಾರಂಭವಾಗುತ್ತದೆ.

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್