AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸರ್ವಿಸ್ ಸೆಂಟರ್​ಗೆ ಫೋನ್ ಕೊಡುವ ಮುನ್ನ ಈ 3 ಕೆಲಸಗಳನ್ನು ಮಾಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಅನುಭವಿಸುತ್ತೀರಿ

ಸ್ಮಾರ್ಟ್ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ. ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್ಫೋನ್‌ನಲ್ಲಿ ಇರುತ್ತದೆ. ಹೀಗಿರುವಾಗ ಫೋನ್ ಅನ್ನು ಸರ್ವಿಸ್ ಸೆಂಟರ್ನಲ್ಲಿ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.

Tech Tips: ಸರ್ವಿಸ್ ಸೆಂಟರ್​ಗೆ ಫೋನ್ ಕೊಡುವ ಮುನ್ನ ಈ 3 ಕೆಲಸಗಳನ್ನು ಮಾಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಅನುಭವಿಸುತ್ತೀರಿ
Mobile Service Center
ಮಾಲಾಶ್ರೀ ಅಂಚನ್​
| Edited By: |

Updated on:Jan 13, 2025 | 12:39 PM

Share

ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಅರ್ಧಕ್ಕಿಂತ ಹೆಚ್ಚು ಕೆಲಸಗಳು ಮನೆಯಲ್ಲಿ ಕುಳಿತು ಮೊಬೈಲ್ ಫೋನ್‌ಗಳ ಮೂಲಕವೇ ಪೂರ್ಣಗೊಳ್ಳುತ್ತವೆ. ಆದರೆ ಕೆಲವೊಮ್ಮೆ ಫೋನ್ ಕೆಟ್ಟು ಹೋದಾಗ ಅಥವಾ ಫೋನ್‌ನಲ್ಲಿ ಯಾವುದಾದರು ದೋಷ ಕಾಣಿಸಿಕೊಂಡರೆ, ನಾವು ನಮ್ಮ ಫೋನ್ ಅನ್ನು ಮನೆಯ ಹತ್ತಿರವಿರುವ ಮೊಬೈಲ್ ಫೋನ್‌ ಸೇವಾ ಕೇದ್ರಕ್ಕೆ ತೆಗೆದುಕೊಂಡು ಹೋಗುತ್ತೇವೆ. ಆದರೆ ಅನೇಕ ಬಾರಿ ಆತುರದಿಂದಾಗಿ, ಜನರು ಹೀಗೆ ತೆಗೆದುಕೊಂಡು ಹೋಗುವಾಗ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದರಿಂದಾಗಿ ನಂತರ ದೊಡ್ಡ ಪಶ್ಚಾತ್ತಾಪ ಪಡಬೇಕಾಗುತ್ತದೆ.

ಸ್ಮಾರ್ಟ್​ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ. ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್​ಫೋನ್‌ನಲ್ಲಿ ಇರುತ್ತದೆ. ಹೀಗಿರುವಾಗ ಫೋನ್ ಅನ್ನು ಸರ್ವಿಸ್ ಸೆಂಟರ್​ನಲ್ಲಿ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಹೊಂದಿದ್ದರೆ, ನೀವು ಮೊದಲು ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಬೇಕು. ಅಪ್ಲಿಕೇಶನ್‌ಗಳನ್ನು ಡಿಲೀಟ್ ಮಾಡುವ ಮೊದಲು ಪಾಸ್‌ವರ್ಡ್ ಮತ್ತು ಯೂಸರ್ ನೇಮ್ ಅನ್ನು ಬರೆದಿಟ್ಟುಕೊಳ್ಳುವುದು ಉತ್ತಮ.

ಸ್ಮಾರ್ಟ್‌ಫೋನ್‌ನ ನೋಟ್ ಪ್ಯಾಡ್‌ನಲ್ಲಿ ಪಾಸ್‌ವರ್ಡ್ ಮತ್ತು ವೈಯಕ್ತಿಕ ವಿವರಗಳನ್ನು ಬರೆಯುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಫೋನ್ ಅನ್ನು ಯಾರಿಗಾದರೂ ನೀಡುವಾಗ ನೋಟ್ ಪ್ಯಾಡ್​ನಲ್ಲಿ ಇರುವುದನ್ನು ಅಳಿಸಲು ಮರೆಯಬೇಡಿ.

Amazon Great Republic Day Sale 2025: ಅಮೆಜಾನ್ ಸ್ಫೋಟಕ ಮಾರಾಟ ಆರಂಭ: ಸ್ಮಾರ್ಟ್​​ಫೋನ್ ಬೇಕಿದ್ರೆ ಇಂದೇ ಖರೀದಿಸಿ

ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಸದವರೇ ಇಲ್ಲ. ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳದಿರಲು, ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಿದ ನಂತರವೇ ನೀವು ಫೋನ್ ಅನ್ನು ಸರ್ವಿಸ್​ಗೆ ನೀಡಬೇಕು.

ಜಿಮೇಲ್ ಖಾತೆಯೂ ಲಾಗ್ ಔಟ್ ಆದ ನಂತರವೇ ಫೋನ್ ಸರ್ವಿಸ್​ ಕೇಂದ್ರಕ್ಕೆ ನೀಡಬೇಕು. ಜಿಮೇಲ್ ಖಾತೆಗೆ ಸಂಬಂಧಿಸಿದ ಎಲ್ಲಾ ವಿವರಗಳಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಫೋನ್ ಗ್ಯಾಲರಿಯಲ್ಲಿ ಯಾವುದೇ ವೈಯಕ್ತಿಕ ಫೋಟೋಗಳಿದ್ದರೆ, ಅವುಗಳನ್ನು ಡಿಲೀಟ್ ಮಾಡಿ. ಫೋಟೋಗಳು ಬೇಕು ಎಂದಿದ್ದರೆ, ಅವುಗಳನ್ನು ಮೆಮೊರಿ ಕಾರ್ಡ್ ಅಥವಾ ಪೆನ್ ಡ್ರೈವ್‌ಗೆ ವರ್ಗಾಯಿಸಿ.

ನೀವು ಫೋನ್ ಅನ್ನು ಸೇವಾ ಕೇಂದ್ರಕ್ಕೆ ತೆಗೆದುಕೊಂಡು ಹೋಗುತ್ತಿದ್ದರೆ ಮತ್ತು ನಿಮ್ಮ ಫೋನ್ ಆನ್ ಆಗಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಪ್ರಮುಖ ಡೇಟಾವನ್ನು ಬ್ಯಾಕಪ್ ತೆಗೆದುಕೊಳ್ಳಬೇಕು. ಆದರೆ ಅನೇಕ ಬಾರಿ ನಾವು ಅವಸರದಲ್ಲಿ ಅಗತ್ಯ ಮಾಹಿತಿಯನ್ನು ಸೇವ್ ಮಾಡಿಕೊಟ್ಟುಕೊಳ್ಳಲು ಮರೆತುಬಿಡುತ್ತೇವೆ. ಅನೇಕ ಬಾರಿ ಫೋನ್ ರಿಪೇರಿ ಮಾಡಿದಾಗ ಹಿಂದಿನ ಎಲ್ಲ ಡೇಟಾ ಹಾಗೆಯೆ ಇರುತ್ತದೆ ಎಂಬ ಗ್ಯಾರಂಟಿ ಇಲ್ಲ ಎಂದು ಸೇವಾ ಕೇಂದ್ರದಲ್ಲಿ ಹೇಳಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಡ್ರೈವ್, ಡ್ರಾಪ್‌ಬಾಕ್ಸ್, ಗೂಗಲ್ ಫೋಟೋಗಳಲ್ಲಿ ಫೋಟೋಗಳನ್ನು ಬ್ಯಾಕಪ್ ಮಾಡಬಹುದು.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:38 pm, Mon, 13 January 25

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ