AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ..?

Smartphone Update: ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ ಎಂಬುದನ್ನು ನೆನಪಿಡಿ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು.

Tech Tips: ಸ್ಮಾರ್ಟ್​ಫೋನ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ..?
Smartphone Update
Vinay Bhat
|

Updated on:Mar 07, 2024 | 12:49 PM

Share

ಸ್ಮಾರ್ಟ್​ಫೋನ್ (Smartphone) ಎಂದಮೇಲೆ ಅದರಲ್ಲಿ ಅಪ್ಡೇಟ್​ಗಳು ಬರುವುದು ಸಾಮಾನ್ಯ. ಆದರೆ ಕೆಲವರು ಅದರ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಈ ಅಪ್ಡೇಟ್ ಸೂಚನೆ ನಿಮಗೆ ತಿಂಗಳುಗಳವರೆಗೆ ಕಾಣಿಸುತ್ತಲೇ ಇರುತ್ತದೆ. ನೀವು ಅಪ್ಡೇಟ್ ಮಾಡದಿದ್ದರೆ ಸಮಸ್ಯೆ ಏನು?. ಅಪ್ಡೇಟ್ ಕೊಡದಿದ್ದರೆ ನಿಮ್ಮ ಫೋನ್​ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸುತ್ತದೆ. ಸಮಯಕ್ಕೆ ಸರಿಯಾಗಿ ಅಪ್ಡೇಟ್ ಆಗದೇ ಇದ್ದಾಗ ಮೊಬೈಲ್ ಬಿಸಿಯಾಗಲು ಪ್ರಾರಂಭಿಸುತ್ತದೆ. ಸೆಕ್ಯುರಿಟಿ ಸಮಸ್ಯೆ ಕಾಣಿಸಬಹುದು. ಫೋನ್ ಹ್ಯಾಕ್ ಆಗುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿಯೇ ಸ್ಮಾರ್ಟ್​ಫೋನ್ ಸಾಫ್ಟ್ ವೇರ್​ಗಳನ್ನು ಸರಿಯಾದ ಸಮಯಕ್ಕೆ ಅಪ್ಡೇಟ್ ಮಾಡುವುದು ಬಹಳ ಮುಖ್ಯ ಎನ್ನುವುದು ಟೆಕ್ ತಜ್ಞರ ಅಭಿಪ್ರಾಯ.

ಅಪ್ಡೇಟ್ ಮುಖ್ಯವೇ?

ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ ಎಂಬುದನ್ನು ನೆನಪಿಡಿ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು. ನೀವು ನಿಮ್ಮ ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ದೀರ್ಘಕಾಲದವರೆಗೆ ನವೀಕರಿಸದೆ ಬಿಟ್ಟರೆ, ಮದರ್‌ಬೋರ್ಡ್ ಒಂದು ಹಂತದಲ್ಲಿ ಕೆಟ್ಟದಾಗಿ ಹೋಗಬಹುದು. ಪರಿಣಾಮವಾಗಿ, ಫೋನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ.

ಭಾರತದಲ್ಲಿ ಬಹುನಿರೀಕ್ಷಿತ ನಥಿಂಗ್ ಫೋನ್ 2a ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?, ಏನಿದೆ ಫೀಚರ್ಸ್

ಹ್ಯಾಕಿಂಗ್​ನಿಂದ ಸುರಕ್ಷಿತವಾಗಿರುತ್ತದೆ

ಫೋನ್ ಅಪ್‌ಡೇಟ್ ಆದ ತಕ್ಷಣ ಫೋನ್‌ನಲ್ಲಿರುವ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅಲ್ಲದೆ ಫೋನಿನ ಸೆಕ್ಯುರಿಟಿ ಕೂಡ ಸಾಕಷ್ಟು ಹೆಚ್ಚುತ್ತದೆ. ಫೋನ್‌ನಲ್ಲಿ ಯಾವುದೇ ದೋಷಗಳು ಅಥವಾ ವೈರಸ್‌ಗಳು ಇದ್ದರೆ, ಅವುಗಳನ್ನು ಅಪ್‌ಡೇಟ್ ಮೂಲಕ ತೆಗೆದುಹಾಕಲಾಗುತ್ತದೆ. ಹಾಗಾಗಿ ಈ ಸೈಬರ್ ಕ್ರೈಮ್ ಜಗತ್ತಿನಲ್ಲಿ ಫೋನ್ ಅನ್ನು ಹ್ಯಾಕಿಂಗ್ ನಿಂದ ರಕ್ಷಿಸಲು ಸರಿಯಾದ ಸಮಯಕ್ಕೆ ಸ್ಮಾರ್ಟ್​ಫೋನ್ ಸಾಫ್ಟ್ ವೇರ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ.

ಕ್ಯಾಮೆರಾ ಪ್ರಿಯರನ್ನು ದಂದಾಗಿಸಿರುವ ಒಪ್ಪೋ F25 ಪ್ರೊ 5G ಸ್ಮಾರ್ಟ್​ಫೋನ್ ಮಾರಾಟ ಆರಂಭ

ಹಾಗೆಯೆ ನಿಮ್ಮ ಫೋನ್‌ಗೆ ನವೀಕರಣಗಳು ಅಂದರೆ ಅಪ್ಡೇಟ್ ಬರುವುದು ನಿಂತಾಗ, ಫೋನ್ ಬದಲಾಯಿಸುವ ಸಮಯ ಬಂದಿದೆ ಎಂದು ಅರ್ಥಮಾಡಿಕೊಳ್ಳಿ. ಕಂಪನಿಗಳು ಅಪ್ಡೇಟ್ ನೀಡುವುದು ಏಕೆಂದರೆ ನಿಮ್ಮ ಸ್ಮಾರ್ಟ್​ಫೋನ್​ಗಳಿಗೆ ಯಾವುದೇ ತೊಂದರೆ ಅಥವಾ ವೈರಸ್ ಅಟ್ಯಾಕ್ ಆಗದಿರಲಿ ಮತ್ತು ಸುರಕ್ಷತೆಗಾಗಿ ನವೀಕರಣಗಳನ್ನು ನೀಡಲಾಗುತ್ತದೆ. ಈ ಅಪ್ಡೇಟ್ ನೀಡುವುದನ್ನು ಕಂಪನಿ ನಿಲ್ಲಿಸಿದಾಗ ಫೋನ್ ಬದಲಾವಣೆ ಮಾಡುವುದು ಉತ್ತಮ ನಿರ್ಧಾರ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Thu, 7 March 24

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ