AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ..?

Smartphone Update: ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ ಎಂಬುದನ್ನು ನೆನಪಿಡಿ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು.

Tech Tips: ಸ್ಮಾರ್ಟ್​ಫೋನ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ..?
Smartphone Update
Vinay Bhat
|

Updated on:Mar 07, 2024 | 12:49 PM

Share

ಸ್ಮಾರ್ಟ್​ಫೋನ್ (Smartphone) ಎಂದಮೇಲೆ ಅದರಲ್ಲಿ ಅಪ್ಡೇಟ್​ಗಳು ಬರುವುದು ಸಾಮಾನ್ಯ. ಆದರೆ ಕೆಲವರು ಅದರ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಈ ಅಪ್ಡೇಟ್ ಸೂಚನೆ ನಿಮಗೆ ತಿಂಗಳುಗಳವರೆಗೆ ಕಾಣಿಸುತ್ತಲೇ ಇರುತ್ತದೆ. ನೀವು ಅಪ್ಡೇಟ್ ಮಾಡದಿದ್ದರೆ ಸಮಸ್ಯೆ ಏನು?. ಅಪ್ಡೇಟ್ ಕೊಡದಿದ್ದರೆ ನಿಮ್ಮ ಫೋನ್​ನಲ್ಲಿ ಹಲವಾರು ಸಮಸ್ಯೆಗಳು ಕಾಣಿಸುತ್ತದೆ. ಸಮಯಕ್ಕೆ ಸರಿಯಾಗಿ ಅಪ್ಡೇಟ್ ಆಗದೇ ಇದ್ದಾಗ ಮೊಬೈಲ್ ಬಿಸಿಯಾಗಲು ಪ್ರಾರಂಭಿಸುತ್ತದೆ. ಸೆಕ್ಯುರಿಟಿ ಸಮಸ್ಯೆ ಕಾಣಿಸಬಹುದು. ಫೋನ್ ಹ್ಯಾಕ್ ಆಗುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿಯೇ ಸ್ಮಾರ್ಟ್​ಫೋನ್ ಸಾಫ್ಟ್ ವೇರ್​ಗಳನ್ನು ಸರಿಯಾದ ಸಮಯಕ್ಕೆ ಅಪ್ಡೇಟ್ ಮಾಡುವುದು ಬಹಳ ಮುಖ್ಯ ಎನ್ನುವುದು ಟೆಕ್ ತಜ್ಞರ ಅಭಿಪ್ರಾಯ.

ಅಪ್ಡೇಟ್ ಮುಖ್ಯವೇ?

ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ನವೀಕರಿಸಿದಾಗಲೆಲ್ಲಾ ಅದು ಸ್ಮಾರ್ಟ್‌ಫೋನ್‌ನ ವೇಗವನ್ನು ಬಹಳಷ್ಟು ಹೆಚ್ಚಿಸುತ್ತದೆ ಎಂಬುದನ್ನು ನೆನಪಿಡಿ. ಆಗ ಫೋನ್​ನಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹ್ಯಾಂಗ್ ಆಗುವ ಸಮಸ್ಯೆ ಬರುವುದಿಲ್ಲ. ನೀವು ಮೊಬೈಲ್​ನಲ್ಲಿ ತೊಂದರೆ ಅನುಭವಿಸುತ್ತಿದ್ದರೆ ಅಪ್ಡೇಟ್ ಕೊಡಲೇ ಬೇಕು. ನೀವು ನಿಮ್ಮ ಸ್ಮಾರ್ಟ್‌ಫೋನ್ ಸಾಫ್ಟ್‌ವೇರ್ ಅನ್ನು ದೀರ್ಘಕಾಲದವರೆಗೆ ನವೀಕರಿಸದೆ ಬಿಟ್ಟರೆ, ಮದರ್‌ಬೋರ್ಡ್ ಒಂದು ಹಂತದಲ್ಲಿ ಕೆಟ್ಟದಾಗಿ ಹೋಗಬಹುದು. ಪರಿಣಾಮವಾಗಿ, ಫೋನ್ ಸಂಪೂರ್ಣವಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತದೆ.

ಭಾರತದಲ್ಲಿ ಬಹುನಿರೀಕ್ಷಿತ ನಥಿಂಗ್ ಫೋನ್ 2a ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?, ಏನಿದೆ ಫೀಚರ್ಸ್

ಹ್ಯಾಕಿಂಗ್​ನಿಂದ ಸುರಕ್ಷಿತವಾಗಿರುತ್ತದೆ

ಫೋನ್ ಅಪ್‌ಡೇಟ್ ಆದ ತಕ್ಷಣ ಫೋನ್‌ನಲ್ಲಿರುವ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಅಲ್ಲದೆ ಫೋನಿನ ಸೆಕ್ಯುರಿಟಿ ಕೂಡ ಸಾಕಷ್ಟು ಹೆಚ್ಚುತ್ತದೆ. ಫೋನ್‌ನಲ್ಲಿ ಯಾವುದೇ ದೋಷಗಳು ಅಥವಾ ವೈರಸ್‌ಗಳು ಇದ್ದರೆ, ಅವುಗಳನ್ನು ಅಪ್‌ಡೇಟ್ ಮೂಲಕ ತೆಗೆದುಹಾಕಲಾಗುತ್ತದೆ. ಹಾಗಾಗಿ ಈ ಸೈಬರ್ ಕ್ರೈಮ್ ಜಗತ್ತಿನಲ್ಲಿ ಫೋನ್ ಅನ್ನು ಹ್ಯಾಕಿಂಗ್ ನಿಂದ ರಕ್ಷಿಸಲು ಸರಿಯಾದ ಸಮಯಕ್ಕೆ ಸ್ಮಾರ್ಟ್​ಫೋನ್ ಸಾಫ್ಟ್ ವೇರ್ ಅನ್ನು ಅಪ್ಡೇಟ್ ಮಾಡಿಕೊಳ್ಳಿ.

ಕ್ಯಾಮೆರಾ ಪ್ರಿಯರನ್ನು ದಂದಾಗಿಸಿರುವ ಒಪ್ಪೋ F25 ಪ್ರೊ 5G ಸ್ಮಾರ್ಟ್​ಫೋನ್ ಮಾರಾಟ ಆರಂಭ

ಹಾಗೆಯೆ ನಿಮ್ಮ ಫೋನ್‌ಗೆ ನವೀಕರಣಗಳು ಅಂದರೆ ಅಪ್ಡೇಟ್ ಬರುವುದು ನಿಂತಾಗ, ಫೋನ್ ಬದಲಾಯಿಸುವ ಸಮಯ ಬಂದಿದೆ ಎಂದು ಅರ್ಥಮಾಡಿಕೊಳ್ಳಿ. ಕಂಪನಿಗಳು ಅಪ್ಡೇಟ್ ನೀಡುವುದು ಏಕೆಂದರೆ ನಿಮ್ಮ ಸ್ಮಾರ್ಟ್​ಫೋನ್​ಗಳಿಗೆ ಯಾವುದೇ ತೊಂದರೆ ಅಥವಾ ವೈರಸ್ ಅಟ್ಯಾಕ್ ಆಗದಿರಲಿ ಮತ್ತು ಸುರಕ್ಷತೆಗಾಗಿ ನವೀಕರಣಗಳನ್ನು ನೀಡಲಾಗುತ್ತದೆ. ಈ ಅಪ್ಡೇಟ್ ನೀಡುವುದನ್ನು ಕಂಪನಿ ನಿಲ್ಲಿಸಿದಾಗ ಫೋನ್ ಬದಲಾವಣೆ ಮಾಡುವುದು ಉತ್ತಮ ನಿರ್ಧಾರ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Thu, 7 March 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ