AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನೀವು ಸ್ಮಾರ್ಟ್​ಫೋನ್ ಅನ್ನು ಈರೀತಿ ಚಾರ್ಜ್ ಮಾಡುತ್ತಿದ್ದರೆ ಒಮ್ಮೆ ಇಲ್ಲಿ ಗಮನಿಸಿ

Smartphone Tips: ನಿಮ್ಮ ಸ್ಮಾರ್ಟ್​ಫೋನ್ ಅನ್ನು ನೀವು ತಪ್ಪಾಗಿ ಚಾರ್ಜ್ ಮಾಡಿದರೆ ಅದು ಹಾನಿಗೊಳಗಾಗಬಹುದು. ಇದು ಬ್ಯಾಟರಿಯ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ಇದು ಮೊಬೈಲ್ ಬ್ಲಾಸ್ಟ್ ಆಗಲು ಕೂಡ ಕಾರಣವಾಗಬಹುದು. ಹಾಗಾದರೆ, ಚಾರ್ಜ್ ಮಾಡುವಾಗ ಏನು ಎಚ್ಚರಿಕೆ ವಹಿಸಬೇಕು.

Tech Tips: ನೀವು ಸ್ಮಾರ್ಟ್​ಫೋನ್ ಅನ್ನು ಈರೀತಿ ಚಾರ್ಜ್ ಮಾಡುತ್ತಿದ್ದರೆ ಒಮ್ಮೆ ಇಲ್ಲಿ ಗಮನಿಸಿ
Mobile Charging
Vinay Bhat
|

Updated on: Dec 28, 2023 | 1:57 PM

Share

ಇಂದು ಸ್ಮಾರ್ಟ್‌ಫೋನ್‌ಗಳು (Smartphones) ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತಿದಿನ ಚಾರ್ಜ್ ಮಾಡಬೇಕಾಗುತ್ತದೆ. ಹೀಗೆ ಫೋನ್ ಅನ್ನು ಚಾರ್ಜ್ ಮಾಡುವಾಗ ಕೆಲ ತಪ್ಪುಗಳನ್ನು ಮಾಡಿದರೆ ಅನೇಕ ತೊಂದರೆಗಳು ಉಂಟಾಗಬಹುದು. ಮೊಬೈಲ್ ಸ್ಫೋಟಗೊಳ್ಳುವ ಅಪಾಯವೂ ಇದೆ. ಗಂಭೀರವಾದ ಗಾಯ ಅಥವಾ ಸಾವುಕೂಡ ಸಂಭವಿಸಬಹುದು. ತಪ್ಪಾಗಿ ಚಾರ್ಜ್ ಮಾಡಿದರೆ ಸ್ಮಾರ್ಟ್‌ಫೋನ್ ಹಾನಿಗೊಳಗಾಗಬಹುದು. ಇದಲ್ಲದೆ, ಬ್ಯಾಟರಿಯ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ನಮ್ಮ ಕೆಲವು ತಪ್ಪುಗಳಿಂದಾಗಿ ಫೋನ್ ಬಿಸಿಯಾಗುವ ಸಮಸ್ಯೆಯೂ ಉದ್ಭವಿಸುತ್ತದೆ. ಹಾಗಾದರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ.

ಚಾರ್ಜರ್ ಸ್ವಿಚ್ ಆಫ್ ಮಾಡಿ

ಫೋನ್ ಚಾರ್ಜ್ ಆದಾಗ ಜನರು ಫೋನ್ ಅನ್ನು ಮಾತ್ರ ತೆಗೆಯುತ್ತಾರೆ. ಆದರೆ ಚಾರ್ಜರ್ ಅನ್ನು ಅನ್ನು ಅಲ್ಲೇ ಬಿಟ್ಟು ಪ್ಲಗ್ ಕೂಡ ಆಫ್ ಮಾಡುವುದಿಲ್ಲ. ಇದು ಚಾರ್ಜರ್‌ನ ಕಾರ್ಯಕ್ಷಮತೆಯನ್ನು ಕುಗ್ಗಿಸಬಹುದು. ಆದ್ದರಿಂದ, ಫೋನ್ ಅನ್ನು ಚಾರ್ಜ್ ಮಾಡಿದ ನಂತರ, ಸ್ವಿಚ್ ಆಫ್ ಮಾಡಿ. ಹಾಗೆಯೆ ಸ್ವಿಚ್ ಆನ್ ಮಾಡಿ ಚಾರ್ಜಿಂಗ್‌ನಲ್ಲಿ ಫೋನ್ ಬಿಡುವ ಅಭ್ಯಾಸ ಜನರಲ್ಲಿದೆ. ಫೋನ್ ಚಾರ್ಜ್ ಆದ ನಂತರವೂ ಚಾರ್ಜರ್ ಅನ್ನು ಕನೆಕ್ಟ್ ಮಾಡುವುದರಿಂದ ಬ್ಯಾಟರಿ ಬೇಗ ಹಾಳಾಗುವ ಅಪಾಯವಿದೆ.

Sim Card: ಸಿಮ್ ಕಾರ್ಡ್ ಖರೀದಿಸುವ ಮುನ್ನ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ

ಇದನ್ನೂ ಓದಿ
Image
ಚಿನ್ನ ಖರೀದಿಸುವ ಮೊದಲು ಈ ಆ್ಯಪ್ ಇನ್​ಸ್ಟಾಲ್ ಮಾಡಿಕೊಳ್ಳಿ
Image
ಐಕ್ಯೂಯಿಂದ ಬಂಪರ್ ಫೋನ್ ಬಿಡುಗಡೆ: ಐಕ್ಯೂ ನಿಯೋ 9, ನಿಯೋ 9 ಪ್ರೊ ಅನಾವರಣ
Image
60MP ಸೆಲ್ಫಿ ಕ್ಯಾಮೆರಾ,100W ಫಾಸ್ಟ್ ಚಾರ್ಜರ್: ಹುವೈ ನೋವ 12 ಸರಣಿ ರಿಲೀಸ್
Image
ಡೀಪ್​ಫೇಕ್ ಬಗ್ಗೆ ಬಳಕೆದಾರರಲ್ಲಿ ಅರಿವು: ಸೋಷಿಯಲ್ ಮೀಡಿಯಾಗೆ ಸರ್ಕಾರ ಸೂಚನೆ

ಸ್ಫೋಟ ಸಂಭವಿಸಬಹುದು

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್ ಕಂಪನಿಗಳು ಮೊಬೈಲ್​ಗಳೊಂದಿಗೆ ಚಾರ್ಜರ್‌ಗಳನ್ನು ಒದಗಿಸುವುದಿಲ್ಲ. ಜನರು ಪ್ರತ್ಯೇಕ ಚಾರ್ಜರ್ ಖರೀದಿಸಬೇಕು. ಈ ಚಾರ್ಜರ್‌ಗಳು ಸ್ವಲ್ಪ ದುಬಾರಿಯಾಗಿರುವುದರಿಂದ ಕೆಲವರು ಲೋಕಲ್ ಚಾರ್ಜರ್‌ಗಳನ್ನು ಖರೀದಿಸುತ್ತಾರೆ. ಆದರೆ ಹಾಗೆ ಮಾಡುವುದು ಅಪಾಯಕಾರಿ, ಏಕೆಂದರೆ, ಇದರಿಂದ ಫೋನ್ ಸ್ಫೋಟಗೊಳ್ಳುವ ಅಪಾಯವಿದೆ. ಆದ್ದರಿಂದ, ಯಾವಾಗಲೂ ಆ ಫೋನ್​ಗೆ ನಿಗದಿ ಪಡಿಸಿದ ಚಾರ್ಜರ್ ಅನ್ನು ಮಾತ್ರ ಬಳಸಬೇಕು.

ಇತರೆ ಫೋನ್ ಚಾರ್ಜರ್

ಇತರೆ ಫೋನ್‌ನ ಚಾರ್ಜರ್‌ನೊಂದಿಗೆ ನಿಮ್ಮ ಫೋನ್ ಚಾರ್ಜ್ ಮಾಡುವಾಗ ತುಂಬಾ ನಿಧಾನವಾಗಿ ಚಾರ್ಜ್ ಆಗುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಏಕೆಂದರೆ ನೀವು ಬಳಸುತ್ತಿರುವ ಚಾರ್ಜರ್ ನಿಮ್ಮ ಫೋನ್ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಿಮ್ಮ ಫೋನ್‌ನೊಂದಿಗೆ ಒದಗಿಸಲಾದ ಚಾರ್ಜರ್‌ನೊಂದಿಗೆ ಅದನ್ನು ಚಾರ್ಜ್ ಮಾಡಿ. ನಿಮ್ಮ ಫೋನ್ 20W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಭಾವಿಸೋಣ, ಆದರೆ, ನೀವು ಕನೆಕ್ಟ್ ಮಾಡಿರುವ ಚಾರ್ಜರ್ 120W ಅಥವಾ 65W ನದ್ದಾಗಿದ್ದರೆ ಫೋನ್ ಬಿಸಿಯಾಗಿ ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ