AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Uber service: ಇದೀಗ ವಾಟ್ಸ್​ಆ್ಯಪ್​ ಮೂಲಕ ಉಬರ್ ಕ್ಯಾಬ್ ಬುಕ್ ಮಾಡಿ: ಇಲ್ಲಿದೆ ಸಂಪೂರ್ಣ ಮಾಹಿತಿ

ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ.

WhatsApp Uber service: ಇದೀಗ ವಾಟ್ಸ್​ಆ್ಯಪ್​ ಮೂಲಕ ಉಬರ್ ಕ್ಯಾಬ್ ಬುಕ್ ಮಾಡಿ: ಇಲ್ಲಿದೆ ಸಂಪೂರ್ಣ ಮಾಹಿತಿ
WhatsApp and Ubar
TV9 Web
| Updated By: Vinay Bhat|

Updated on: Sep 26, 2022 | 3:29 PM

Share

ಉಬರ್‌ (Ubar) ಹಾಗೂ ವಾಟ್ಸ್​ಆ್ಯಪ್​ (WhatsApp)​ ಸಹಭಾಗಿತ್ವವನ್ನು ಘೋಷಿಸಿಕೊಂಡಿದ್ದು,ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ (Meta) ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ. ವಾಟ್ಸ್ಆ್ಯಪ್ ಮೆಸೆಂಜರ್ ಸೇವೆಯು ಭಾರತದಲ್ಲಿ ಅರ್ಧ ಶತಕೋಟಿಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿದೆ. ಬಹುತೇಕ ಜನರು ವಾಟ್ಸ್ಆ್ಯಪ್ ಅನ್ನು ಬಳಸುತ್ತಿದ್ದಾರೆ. ಹಾಗಾಗಿ ಉಬರ್ ಕೂಡ ಇದನ್ನು ಗಮನಿಸಿ ಆ್ಯಪ್ ಸಹಾಯವಿಲ್ಲದೆ ಬಳಕೆದಾರರಿಗೆ ಸುಲಭ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವಾಟ್ಸ್ಆ್ಯಪ್ ಜೊತೆಗೆ ಕೈ ಜೋಡಿಸಿದೆ.

ವಾಟ್ಸ್​ಆ್ಯಪ್​​ ಚಾಟ್‌ನಲ್ಲೇ ನೋಂದಣಿ, ರೈಡ್‌ ಬುಕಿಂಗ್‌, ಹಾಗೂ ಪ್ರಯಾಣದ ರಸೀದಿಯನ್ನು ಪಡೆದುಕೊಳ್ಳಬಹುದಾಗಿದೆ. ಉಬರ್‌ ಅನ್ನು ಬುಕಿಂಗ್‌ಗಾಗಿ ಇಂಗ್ಲೀಷ್‌ ಬಳಕೆ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಭಾರತೀಯ ಭಾಷೆಗಳಲ್ಲೂ ಬುಕಿಂಗ್‌ ಸೌಲಭ್ಯ ಒದಗಿಸಲಾಗುವುದು. ವಾಟ್ಸ್​ಆ್ಯಪ್​​ನಲ್ಲಿ ಉಬರ್ ಚಾಟ್‌ಬಾಟ್ ಮೂಲಕ ಒಮ್ಮೆ ರೈಡ್ ಬುಕ್ ಮಾಡಿದ ನಂತರ ಗ್ರಾಹಕರು ಚಾಲಕನ ಹೆಸರು, ವಾಹನದ ಲೈಸೆನ್ಸ್ ಪ್ಲೇಟ್ ಸಂಖ್ಯೆ ಮತ್ತು ಪಿಕಪ್ ಪಾಯಿಂಟ್‌ಗೆ ಹೋಗುವ ಸ್ಥಳ ಸೇರಿದಂತೆ ಎಲ್ಲಾ ವಿವರಗಳನ್ನು ವಾಟ್ಸ್​ಆ್ಯಪ್​​ ಸಂದೇಶದ ಮೂಲಕ ಪಡೆಯುತ್ತಾರೆ ಎಂದು ಉಬರ್ ಹೇಳಿದೆ.

“ಎಲ್ಲಾ ಭಾರತೀಯರಿಗೆ ಉಬರ್ ಸೇವೆ ಬಳಕೆಗೆ ಸಿಗುವಂತೆ ಮಾಡಲು ನಾವು ಬಯಸುತ್ತೇವೆ ಮತ್ತು ಅವರಿಗೆ ಅನುಕೂಲಕರವಾದ ವೇದಿಕೆಗಳಲ್ಲಿ ಸಿಗುವ ಮೂಲಕ ಸೇವೆಯನ್ನು ನೀಡಲಿದ್ದೇವೆ ” ಎಂದು ಉಬರ್​​ನ ವ್ಯಾಪಾರ ಅಭಿವೃದ್ಧಿಯ ಹಿರಿಯ ನಿರ್ದೇಶಕಿ ನಂದಿನಿ ಮಹೇಶ್ವರಿ ಹೇಳಿದರು.

ಇದನ್ನೂ ಓದಿ
Image
Huawei Nova 10 SE: ಮಾರುಕಟ್ಟೆಗೆ ಬಂತು 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?
Image
iPhone 13: ದಿಢೀರ್ ಔಟ್-ಆಫ್-ಸ್ಟಾಕ್: ಫ್ಲಿಪ್​ಕಾರ್ಟ್, ಅಮೆಜಾನ್​ನಲ್ಲಿ ಕಡಿಮೆ ಬೆಲೆಗೆ ಸಿಗುತ್ತಿದ್ದ ಐಫೋನ್ 13 ನಾಪತ್ತೆ
Image
Tecno Pova Neo 5G: ಅತಿ ಕಡಿಮೆ ಬೆಲೆಯ 5G ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಯಾವುದು?, ಬೆಲೆ ಎಷ್ಟು?
Image
ಅತಿಯಾದ ಸ್ಮಾರ್ಟ್​ಫೋನ್, ಲ್ಯಾಪ್​ಟಾಪ್ ಬಳಕೆಯಿಂದ ಏನಾಗುತ್ತೇ?: ಅಚ್ಚರಿ ವಿಚಾರ ಬಹಿರಂಗ

ಹೇಗೆ ಕಾರ್ಯನಿರ್ವಹಿಸುತ್ತದೆ?:

ಉಬರ್ ಆ್ಯಪ್ ಅವಶ್ಯಕತೆಯಿಲ್ಲದೆಯೇ, ವಾಟ್ಸ್​ಆ್ಯಪ್​​ ಮೂಲಕ ಚಾಟ್ ಇಂಟರ್ಫೇಸ್​ನಲ್ಲಿ ನೋಂದಾಯಿಸಿಕೊಳ್ಳಬಹುದು. ಜೊತೆಗೆ ರೈಡ್​ಗಳನ್ನು ಬುಕ್ ಮಾಡಬಹುದು ಮತ್ತು ಟ್ರಿಪ್ ರಸೀದಿಗಳನ್ನು ಪಡೆಯಬಹುದಾಗಿದೆ. ಇದಕ್ಕಾಗಿ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದು ಅಥವಾ ಉಬರ್ ವಾಟ್ಸ್​ಆ್ಯಪ್​​ ಚಾಟ್ ತೆರೆಯಲು ನೇರವಾಗಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಚಾಟ್‌ಬಾಟ್ ನಂತರ ಪಿಕಪ್ ಮತ್ತು ಡ್ರಾಪ್ ಆಫ್ ಸ್ಥಳಗಳನ್ನು ನೀಡಲು ಬಳಕೆದಾರರನ್ನು ಕೇಳುತ್ತದೆ. ಅವರು ಬುಕ್ ಮಾಡಲು ಬಯಸುವ ರೀತಿಯ ರೈಡ್ ಅನ್ನು ಆಯ್ಕೆ ಮಾಡುತ್ತದೆ.

ಇಲ್ಲಿ ಚಾಟ್‌ಬಾಟ್ ನಿಮಗೆ ಮುಂಗಡ ದರದ ಮಾಹಿತಿಯನ್ನು ನೀಡುತ್ತದೆ ಮತ್ತು ಚಾಲಕನ ಆಗಮನದ ನಿರೀಕ್ಷಿತ ಸಮಯವನ್ನು ಸಹ ನೀಡುತ್ತದೆ. ಉಬರ್​ನಲ್ಲಿ ಕೇವಲ ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಿದ ಹೊಸ ಮತ್ತು ಅಸ್ತಿತ್ವದಲ್ಲಿರುವ ಬಳಕೆದಾರರಿಗೆ ಸೇವೆಯು ಲಭ್ಯವಿದೆ ಎಂದು ವಾಟ್ಸ್​ಆ್ಯಪ್​​ ದೃಢಪಡಿಸುತ್ತದೆ. ಈ ಟೆಕ್ನಾಲಜಿಯಿಂದಾಗಿ ಇನ್ನು ಪ್ರಯಾಣಿಕರು ಉಬರ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಥವಾ ಬಳಸುವ ಅಗತ್ಯವಿಲ್ಲ.

  • ವಾಟ್ಸ್​ಆ್ಯಪ್ ಅನ್ನು ತೆರೆದು +917292000002 ಗೆ ಸಂದೇಶವನ್ನು ಕಳುಹಿಸಬಹುದು.
  • ಚಾಟ್ ಬಾಕ್ಸ್ ಮೂಲಕ ಮೆಸೇಜ್ ಮಾಡಿ.
  • ನಿಮ್ಮ ಪಿಕ್ ಅಪ್ ಮತ್ತು ಡ್ರಾಪ್ ಸ್ಥಳಗಳನ್ನು ನಮೋದಿಸಿ.
  • ಆಗ ಚಾಲಕನ ಆಗಮನದ ಸಮಯ ಮತ್ತು ದರದ ಮಾಹಿತಿಯನ್ನು ಪಡೆಯುತ್ತೀರಿ.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ