AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಫೇಸ್​ಬುಕ್​ನಲ್ಲಿರುವ ಫೋಟೋ, ವಿಡಿಯೋಗಳನ್ನು ಗೂಗಲ್ ಫೋಟೋಸ್​ಗೆ ವರ್ಗಾಹಿಸಬೇಕೇ?: ಇಲ್ಲಿದೆ ಟ್ರಿಕ್

Facebook: ಫೇಸ್​ಬುಕ್​ನಲ್ಲಿ ಹಂಚಿಕೊಳ್ಳುವ ಫೋಟೋ, ವಿಡಿಯೋ ಅಥವಾ ಯಾವುದೇ ಡಾಟಾವನ್ನು ಇತರೆ ಮಾಧ್ಯಮಕ್ಕೆ ವರ್ಗಾವಣೆ ಮಾಡಬಹುದು. ಹಾಗಾದರೆ ನೀವು ಫೇಸ್​ಬುಕ್​ನಲ್ಲಿ ಶೇರ್ ಮಾಡಿದ ಫೋಟೋ, ವಿಡಿಯೋವನ್ನು ಗೂಗಲ್ ಫೋಟೋಸ್​​ಗೆ (Google Photos) ವರ್ಗಾವಣೆ ಮಾಡುವುದು ಹೇಗೆ ಎಂಬುದನ್ನು ನೋಡೋಣ.

Tech Tips: ನಿಮ್ಮ ಫೇಸ್​ಬುಕ್​ನಲ್ಲಿರುವ ಫೋಟೋ, ವಿಡಿಯೋಗಳನ್ನು ಗೂಗಲ್ ಫೋಟೋಸ್​ಗೆ ವರ್ಗಾಹಿಸಬೇಕೇ?: ಇಲ್ಲಿದೆ ಟ್ರಿಕ್
Facebook
Vinay Bhat
|

Updated on:Feb 27, 2023 | 12:31 PM

Share

ಸೋಷಿಯಲ್ ಮೀಡಿಯಾ ಎಂಬುದು ಇಂದು ಮಾಂತ್ರಿಕ ಜಗತ್ತು ಎಂಬಂತಾಗಿದೆ. ಇದರಲ್ಲಿ ಅತ್ಯಂತ ಜನಪ್ರಿಯ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಾಗರುವ ಫೇಸ್‌ಬುಕ್ (Facebook) ಅನ್ನು ಎಲ್ಲಾ ವಯಸ್ಸಿನ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿದಿನ ಸುಮಾರು ಕೋಟಿಗಟ್ಟಲೆ ಜನರು ಇದರಲ್ಲಿ ಸಕ್ರಿಯರಾಗಿದ್ದಾರೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಮೆಟಾ (Meta) ಒಡೆತನದ ಕಂಪನಿ ಅನೇಕ ಫೀಚರ್​ಗಳನ್ನು, ನೂತನ ಅಪ್ಡೇಟ್​ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಹಾಗೆಯೆ ಎಫ್​ಬಿಯಲ್ಲಿ ಹಂಚಿಕೊಳ್ಳುವ ಫೋಟೋ, ವಿಡಿಯೋ ಅಥವಾ ಯಾವುದೇ ಡಾಟಾವನ್ನು ಇತರೆ ಮಾಧ್ಯಮಕ್ಕೆ ವರ್ಗಾವಣೆ ಮಾಡಬಹುದು. ಹಾಗಾದರೆ ನೀವು ಫೇಸ್​ಬುಕ್​ನಲ್ಲಿ ಶೇರ್ ಮಾಡಿದ ಫೋಟೋ, ವಿಡಿಯೋವನ್ನು ಗೂಗಲ್ ಫೋಟೋಸ್​​ಗೆ (Google Photos) ವರ್ಗಾವಣೆ ಮಾಡುವುದು ಹೇಗೆ ಎಂಬುದನ್ನು ನೋಡೋಣ.

  • ಮೊದಲಿಗೆ ಕಂಪ್ಯೂಟರ್​​ನಲ್ಲಿ ನಿಮ್ಮ ಫೇಸ್​ಬುಕ್ ಖಾತೆಯಿಂದ ಲಾಗಿನ್ ಆಗಿ
  • ಬಲ ತುದಿಯಲ್ಲಿರುವ ನಿಮ್ಮ ಪ್ರೊಫೂಲ್ ಐಕಾನ್ ಮೇಲೆ ಕ್ಲಿಕ್ ಮಾಡಿ ಸೆಟ್ಟಿಂಗ್ಸ್​ಗೆ ಹೋಗಿ
  • ಈಗ ಎಡ ಬದಿಯಲ್ಲಿರುವ ಫೇಸ್​ಬುಕ್ ಇನ್​ಫಾರ್ಮೇಷನ್ ಆಯ್ಕೆ ಮೇಲೆ ಕ್ಲಿಕ್ ಮಾಡಿ
  • ನಂತರ ಟ್ರಾನ್ಫರ್ ಕಾಪಿ ಎಂಬ ಆಯ್ಕೆಯಲ್ಲಿರುವ ವೀವ್ ಬಟನ್ ಮೇಲೆ ಒತ್ತಿರಿ
  • ಇದರಲ್ಲಿ ಗೂಗಲ್ ಫೋಟೋಸ್ ಆಯ್ಕೆ ಮಾಡಿ
  • ಈಗ ನಿಮಗೆ ಯಾವ ಫೈಲ್ ಟ್ರಾನ್ಫರ್ ಮಾಡಬೇಕು ಅದನ್ನು ಆಯ್ಕೆ ಮಾಡಿ ಒಕೆ ಒತ್ತಿರಿ
  • ನಂತರ ಕನೆಕ್ಟ್ ಬಟಲ್ ಒತ್ತಿ ಗೂಗಲ್ ಅಕೌಂಟ್​ಗೆ ಲಾಗಿನ್ ಆಗಿ, ಟ್ರಾನ್ಫರ್ ಬಟಲ್ ಕ್ಲಿಕ್ ಮಾಡಿದರೆ ಆಯಿತು

iQOO Z7: ಕೇವಲ ಫೋಟೋದಿಂದಲೇ ರೋಚಕತೆ ಸೃಷ್ಟಿಸಿದ ಐಕ್ಯೂ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಯಾವುದು?

ಹಣ ಕೊಟ್ಟು ಫೇಸ್​ಬುಕ್ ಬ್ಲೂ ಟಿಕ್ ಪಡೆದುಕೊಳ್ಳಿ:

ಬ್ಲೂ ಟಿಕ್ ವಿಚಾರ ಟ್ವಿಟ್ಟರ್ ಬಳಿಕ ಇದೀಗ ಮೆಟಾ ಕಂಪನಿಯಲ್ಲೂ ಸದ್ದು ಮಾಡುತ್ತಿದೆ. ಟ್ವಿಟರ್​ ಅನ್ನೇ ಅನುಸರಿಸಿರುವ ಮೆಟಾ ಈಗ ಹಣ ಪಾವತಿ ಮಾಡಿದರೆ ಬ್ಲೂ ಟಿಕ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಫೇಸ್‌ಬುಕ್​ನ ಮಾತೃ ಸಂಸ್ಥೆ ಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್, ಮೆಟಾ ವೆರಿಫೈಡ್ ಅನ್ನು ಶುರು ಮಾಡಲಿದ್ದದೇವೆ ಎಂದು ಹೇಳಿದ್ದಾರೆ. ಇದು ಒಬ್ಬರ ಖಾತೆಯನ್ನು ದೃಢೀಕರಿಸಲು ತಿಂಗಳಿಗೆ $11.99 ರಿಂದ ಪ್ರಾರಂಭವಾಗುವ ಸೇವೆಯಾಗಿದೆ. ಅಂದರೆ ಭಾರತೀಯ ಮೌಲ್ಯದ ಪ್ರಕಾರ ಸುಮಾರು 900 ರೂ. ಎನ್ನಬಹುದು.

ಇದನ್ನೂ ಓದಿ
Image
Xiaomi 13: ಬಹುನಿರೀಕ್ಷಿತ ಶವೋಮಿ 13 ಸರಣಿ ಬಿಡುಗಡೆ: ಫೀಚರ್ಸ್ ಕಂಡು ದಂಗಾದ ಟೆಕ್ ಪ್ರಿಯರು
Image
Nokia Logo: ನೂತನ ಬದಲಾವಣೆಗೆ ಮುಂದಾದ ನೋಕಿಯಾ: 60 ವರ್ಷಗಳ ಬಳಿಕ ಮೊದಲ ಬಾರಿ ಲೋಗೋ ಬದಲಾವಣೆ
Image
Infinix Smart 7: 6000mAh ಬ್ಯಾಟರಿ, 7,299 ರೂ.: ಇಂದಿನಿಂದ ಇನ್ಫಿನಿಕ್ಸ್‌ ಸ್ಮಾರ್ಟ್‌ 7 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ
Image
Tech Tips: ವಾಟ್ಸ್​ಆ್ಯಪ್​ನಲ್ಲಿ ಚಾಟ್ ಹೈಡ್ ಮಾಡುವುದು ಹೇಗೆ ಗೊತ್ತೇ?: ಇಲ್ಲಿದೆ ನೋಡಿ ಟ್ರಿಕ್

“ಈ ಹೊಸ ಫೀಚರ್​ನಿಂದ ನಮ್ಮ ಸೇವೆಗಳನ್ನು ನೀಡುತ್ತೇವೆ. ಜೊತೆಗೆ ಸುರಕ್ಷತೆಯನ್ನು ಹೆಚ್ಚಿಸುತ್ತೇವೆ,” ಎಂದು ಜುಕರ್‌ಬರ್ಗ್ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗೆ ಪೋಸ್ಟ್ ಮಾಡಿದ್ದಾರೆ. ಫೆಸ್​ಬುಕ್ ಹಾಗೂ ಇನ್‌ಸ್ಟಾಗ್ರಾಮ್​​ನಲ್ಲಿ ಸದ್ಯಕ್ಕೆ ಪ್ರಸಿದ್ಧ ವ್ಯಕ್ತಿಗಳಿಗೆ ಮಾತ್ರ ಬ್ಲೂ ಬ್ಯಾಡ್ಜ್ ಇರುವ ವೆರಿಫೈಡ್‌ ಅಕೌಂಟ್‌ ನೀಡಲಾಗುತ್ತಿದ್ದು, ಇನ್ನು ಮುಂದೆ ಟ್ವಿಟ್ವರ್‌ನಂತೆಯೇ ಹಣ ಪಾವತಿಸಿದ ಖಾತೆದಾರರಿಗೆ ಬ್ಲೂ ಟಿಕ್‌ ನೀಡಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Mon, 27 February 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್