Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್

Make Electricity Bill Payment Online: ಅನೇಕರಿಗೆ ಆನ್​ಲೈನ್​ ಮೂಲಕ ಬಿಲ್​ ಪಾವತಿ ಮಾಡಬಹುದು ಎಂಬ ವಿಚಾರ ಗೊತ್ತಿಲ್ಲ. ಹಾಗಾದರೆ ಸುಲಭವಾಗಿ ಮತ್ತು ಕೆಲವೇ ನಿಮಿಷಗಳಲ್ಲಿ ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ ಎಂಬುದನ್ನು ನೋಡೋಣ.

Tech Tips: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ?: ಇಲ್ಲಿದೆ ಟಿಪ್ಸ್
Electricity Bill
Follow us
|

Updated on: Mar 11, 2023 | 8:10 PM

ಕೋವಿಡ್ (COVID) ಆರಂಭಗೊಂಡ ನಂತರ ಜಗತ್ತಿನಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಬಳಕೆಗೆ ಬಂದಿವೆ. ಇಂದು ಜೇಬಿನಲ್ಲಿ ಹಣ ಇಟ್ಟುಕೊಳ್ಳುವವರು ಬೆರಳಣಿಕೆಯಷ್ಟು ಮಂದಿ ಮಾತ್ರ. ಬ್ಯಾಂಕಿಂಗ್ ಚಟುವಟಿಕೆ ಸೇರಿದಂತೆ ಹಲವಾರು ಕೆಲಸಗಳು ಅಪ್ಲಿಕೇಶನ್​ಗಳ ಮುಖಾಂತರವೇ ನಡೆಯುತ್ತಿದೆ. ಗ್ಯಾಸ್ ಬಿಲ್ ಕಟ್ಟಲು, ಮೊಬೈಲ್ ರೀಚಾರ್ಜ್ (Mobile Reacharg), ಡಿಟಿಎಚ್ ರೀಚಾರ್ಜ್ ಎಲ್ಲದಕ್ಕೂ ಪ್ರತ್ಯೇಕವಾದ ಆ್ಯಪ್ ಗಳಿವೆ. ಅದೇ ರೀತಿ ಮನೆಯ ವಿದ್ಯುತ್ ಬಿಲ್ (Electricity Bill) ಕಟ್ಟಲು ಕೂಡಾ ಹಲವು ಆ್ಯಪ್ ಗಳು ಲಭ್ಯವಿದೆ. ಅನೇಕರಿಗೆ ಆನ್​ಲೈನ್​ ಮೂಲಕ ಬಿಲ್​ ಪಾವತಿ ಮಾಡಬಹುದು ಎಂಬ ವಿಚಾರ ಗೊತ್ತಿಲ್ಲ. ಹಾಗಾದರೆ ಸುಲಭವಾಗಿ ಮತ್ತು ಕೆಲವೇ ನಿಮಿಷಗಳಲ್ಲಿ ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಹೇಗೆ ಎಂಬುದನ್ನು ನೋಡೋಣ.

ಫೋನ್‌ ಪೇ ಆ್ಯಪ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಈ ಕ್ರಮ ಅನುಸರಿಸಿ:

  • ಫೋನ್‌ಪೇ ಅಪ್ಲಿಕೇಶನ್ ತೆರೆಯಿರಿ.
  • ‘ರೀಚಾರ್ಜ್ ಮತ್ತು ಪಾವತಿ ಬಿಲ್‌ಗಳು’ ವಿಭಾಗದ ಅಡಿಯಲ್ಲಿ ವಿದ್ಯುತ್’ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ವಿದ್ಯುತ್ ಮಂಡಳಿಯನ್ನು ಆಯ್ಕೆ ಮಾಡಿ.
  • ನಿಮ್ಮ ಬಿಲ್ ವಿವರಗಳನ್ನು ನಮೂದಿಸಿ.
  • ನಿಮ್ಮ ಬಿಲ್ ಅನ್ನು UPI/ಡೆಬಿಟ್ ಕಾರ್ಡ್‌ಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಪಾವತಿಸಿ.

iQOO Z7 5G: ಬಹುನಿರೀಕ್ಷಿತ ಐಕ್ಯೂ Z7 5G ಆಗಮನಕ್ಕೆ ದಿನಾಂಕ ಫಿಕ್ಸ್: ಏನಿದರ ವಿಶೇಷತೆ ನೋಡಿ

ಇದನ್ನೂ ಓದಿ
Image
Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಶುರುವಾಯಿತು ಬಿಗ್ ಸೇವಿಂಗ್ ಡೇಸ್: ಈ ಬಾರಿಯ ಆಫರ್ ಕೇಳಿದ್ರೆ ದಂಗಾಗ್ತೀರ
Image
Oppo Reno 7 Pro 5G: ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಒಪ್ಪೋ ರೆನೋ 7 ಪ್ರೊ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಅತಿ ಕಡಿಮೆ ಬೆಲೆಗೆ ಲಭ್ಯ
Image
Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್‌ ಬಿಡುಗಡೆ: ಎಷ್ಟು ರೂ. ಗೊತ್ತೇ?
Image
Mobile Data: ಅತಿ ಕಡಿಮೆ ಬೆಲೆಗೆ ಇಂಟರ್ನೆಟ್ ಸೇವೆ ನೀಡುತ್ತಿರುವ ದೇಶ ಯಾವುದು ಗೊತ್ತೇ?

ಗೂಗಲ್ ಪೇ ಆ್ಯಪ್‌ನಲ್ಲಿ ವಿದ್ಯುತ್ ಬಿಲ್ ಪಾವತಿಸಲು ಈ ಕ್ರಮ ಅನುಸರಿಸಿ:

  • ನಿಮ್ಮ ಫೋನ್‌ನಲ್ಲಿ ಗೂಗಲ್ ಪೇ ಆ್ಯಪ್ ತೆರೆಯಿರಿ.
  • ಪರದೆಯ ಕೆಳಭಾಗಕ್ಕೆ ಸ್ಕ್ರಾಲ್ ಮಾಡಿ, “+ ಹೊಸ ಪಾವತಿ” ಆಯ್ಕೆಯನ್ನು ಪತ್ತೆ ಮಾಡಿ ಮತ್ತು ಟ್ಯಾಪ್ ಮಾಡಿ.
  • ಈಗ ಮುಂದಿನದರಲ್ಲಿ “ಬಿಲ್ ಪಾವತಿಗಳು” ಆಯ್ಕೆಯನ್ನು ಆರಿಸಿ.
  • ವಿವಿಧ ಬಿಲ್ ಪಾವತಿ ಆಯ್ಕೆಗಳಿಂದ ‘ವಿದ್ಯುತ್’ ಟ್ಯಾಬ್ ಆಯ್ಕೆಮಾಡಿ ನಂತರ ನೀವು ಪಾವತಿ ಮಾಡಲು ಬಯಸುವ ಏಜೆನ್ಸಿಯನ್ನು ಆಯ್ಕೆ ಮಾಡಿ.
  • ನೀವು ಬಯಸಿದ ಕಂಪನಿಯನ್ನು ಆಯ್ಕೆ ಮಾಡಿದ ನಂತರ, ಪಾವತಿ ಪ್ರಕ್ರಿಯೆಯನ್ನು ಮುಗಿಸಲು ನಿಮ್ಮ ಗ್ರಾಹಕ ಖಾತೆಯನ್ನು ನೀವು ಲಿಂಕ್ ಮಾಡಬೇಕಾಗುತ್ತದೆ.
  • ನೀವು ಬಿಲ್ ಪಾವತಿಸಲು ಬಯಸುವ ಮೊತ್ತವನ್ನು ನಮೂದಿಸಿ ಮತ್ತು UPI ಪಿನ್ ಬಳಸಿ ಬಿಲ್ ಪಾವತಿಸಿ.

ಇನ್ನು ಕರೆಂಟ್ ಬಿಲ್​ಗಳನ್ನು ಸುಲಭವಾಗಿ ಪಾವತಿ ಮಾಡಲು ಮೊಬಿಕ್ವಿಕ್ ಬೆಸ್ಟ್ ಆ್ಯಪ್ ಆಗಿದೆ. ಮೊಬಿಕ್ವಿಕ್ ಖಾತೆಯಲ್ಲಿ ಹಣ ಕ್ರೆಡಿಟ್ ಮಾಡುವ ಮೂಲಕ ವಿದ್ಯುತ್ ಬಿಲ್ ಪಾವತಿಸಬಹುದಾಗಿದೆ. ಆ್ಯಪ್ ತೆರೆದು ಸ್ಕ್ರಾಲ್ ಮಾಡಿದಂತೆ ವಿದ್ಯುತ್ ಪಾವತಿ ಆಯ್ಕೆ ಕಾಣಿಸುತ್ತದೆ. ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಗ್ರಾಹಕ ಸಂಖ್ಯೆಯನ್ನು ನಮೂದಿಸಿದ ಬೇಕು. ಆಗ ಸ್ಕ್ರೀನ್ ಮೇಲೆ ಎಲೆಕ್ಟ್ರಿಕ್ ಮೊತ್ತ ತೋರಿಸುತ್ತದೆ. ನಂತರ ಪೇಮೆಂಟ್ ವಿಭಾಗಕ್ಕೆ ತೆರಳಿ ವಿದ್ಯುತ್ ಬಿಲ್ ಪಾವತಿಸಬಹುದು.

ಅಂತೆಯೆ ಪೇಟಿಯಂ ಆ್ಯಪ್​​ನಲ್ಲಿ ವಿದ್ಯುತ್ ಬಿಲ್, ಮೊಬೈಲ್ ರೀಚಾರ್ಜ್, ಟಿವಿ ರೀಚಾರ್ಜ್, ಗ್ಯಾಸ್ ಬಿಲ್ ಹೀಗೆ ಆಯ್ಕೆಗಳಿರುತ್ತವೆ. ಆ್ಯಂಡ್ರಾಯ್ಡ್ ಬಳಕೆದಾರರು ಗೂಗಲ್ ಪ್ಲೇಸ್ಟೋರ್​ನಲ್ಲಿ ದೊರಕುವ ಪೇಟಿಯಂ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಲಾಗಿನ್ ಆದ ನಂತರ ಸ್ಟೇ ಎಟ್ ಹೋಂ ಎಸೆಸ್ಸೆಂಶಿಯಲ್ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ಎಲೆಕ್ಟ್ರಿಸಿಟಿ ಆಯ್ಕೆ ಕಾಣಸಿಗುತ್ತದೆ. ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಆನ್​ಲೈನ್​ ಮೂಲಕ ಹಣ ಪಾವತಿಸಬಹುದಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ