Tech Tips: ವಾಟ್ಸ್​ಆ್ಯಪ್ ಚಾಟ್ ಓಪನ್ ಮಾಡದೇ ಮೆಸೇಜ್ ಓದುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್

WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಆ್ಯಪ್ ತೆರೆಯದೆ ಚಾಟ್ ಅನ್ನು ಓದಬಹುದು. ಇದಕ್ಕೆ ಕೆಲವೊಂದು ಟ್ರಿಕ್​ಗಳಿವೆ. ಇದಕ್ಕಾಗಿ ನೀವು ಯಾವುದೇ ಥರ್ಡ್ ಪಾರ್ಟಿ ಆ್ಯಪ್ ಇನ್​ಸ್ಟಾಲ್ ಮಾಡಿಕೊಳ್ಳಬೇಕಾಗಿಲ್ಲ.

Tech Tips: ವಾಟ್ಸ್​ಆ್ಯಪ್ ಚಾಟ್ ಓಪನ್ ಮಾಡದೇ ಮೆಸೇಜ್ ಓದುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್
WhatsApp
Follow us
|

Updated on:Feb 09, 2023 | 11:47 AM

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ (WhatsApp) ಅನ್ನು ಇಂದು ಉಪಯೋಗಿಸುವವರ ಸಂಖ್ಯೆ 2 ಬಿಲಿಯನ್ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಬಳಕೆದಾರರನ್ನು ಹೊಂದಿದೆ. ವಾರಕ್ಕೊಂದು ಹೊಸ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಇನ್ನೂ ಅನೇಕ ಆಯ್ಕೆಗಳು ಸದ್ಯದಲ್ಲೇ ಬರಲಿದೆ. ವಾಟ್ಸ್​ಆ್ಯಪ್ ಹೊಸ ಅಪ್ಡೇಟ್​​ಗಳನ್ನು ಬಿಡುಗಡೆ ಮಾಡುತ್ತಿದ್ದಂತೆ ಅದಕ್ಕೆ ಸಂಬಂಧಿಸಿದಂತೆ ಇತರೆ ಥರ್ಡ್ ಪಾರ್ಟಿ ಆ್ಯಪ್​ಗಳು (Third Party App) ಹುಟ್ಟಿಗೊಳ್ಳುತ್ತವೆ. ಈಗಾಗಲೇ ಡಿಲೀಟ್ ಆಗಿರುವ ಮೆಸೇಜ್ ಅನ್ನು ನೋಡುವಂತಹ ಆಯ್ಕೆ, ಡಿಪಿ ಯಾರು ನೋಡಿದ್ದಾರೆಂದು ತಿಳಿಯಲು ಆ್ಯಪ್ ಹೀಗೆ ಕೆಲ ಥರ್ಡ್ ಪಾರ್ಟಿ ಆ್ಯಪ್ ಮೂಲ ವಾಟ್ಸ್​ಆ್ಯಪ್​ನ ಕೆಲ ಟ್ರಿಕ್ ತಿಳಿದುಕೊಳ್ಳಬಹುದು. ಅದರಂತೆ ವಾಟ್ಸ್​ಆ್ಯಪ್​ನಲ್ಲಿ ಚಾಟ್ ಓಪನ್ ಮಾಡದೇ ಮೆಸೇಜ್ ಓದುವುದು ಹೇಗೆ ಎಂಬುದಕ್ಕೂ ಒಂದು ಟ್ರಿಕ್ (Tricks) ಇದೆ.

ವಾಟ್ಸ್​ಆ್ಯಪ್​ನಲ್ಲಿ ಆ್ಯಪ್ ತೆರೆಯದೆ ಚಾಟ್ ಅನ್ನು ಓದಬಹುದು. ಇದಕ್ಕೆ ಕೆಲವೊಂದು ಟ್ರಿಕ್​ಗಳಿವೆ. ಇದಕ್ಕಾಗಿ ನೀವು ಯಾವುದೇ ಥರ್ಡ್ ಪಾರ್ಟಿ ಆ್ಯಪ್ ಇನ್​ಸ್ಟಾಲ್ ಮಾಡಿಕೊಳ್ಳಬೇಕಾಗಿಲ್ಲ. ಸಾಮಾನ್ಯವಾಗಿ ನೋಟಿಫಿಕೇಶನ್ ಪ್ಯಾನೆಲ್​ನಲ್ಲಿ ಈ ಮೆಸೇಜ್ ಒದಬಹುದು. ಆದರೆ, ಇಲ್ಲಿ ತೀರಾ ಉದ್ದವಿದ್ದ ಮೆಸೇಜ್ ಓದಲು ಸಾಧ್ಯವಿಲ್ಲ. ಬದಲಾಗಿ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಕೆಲವೊಂದು ಸೆಟ್ಟಿಂಗ್​ಗಳನ್ನು ಬದಲಾವಣೆ ಮಾಡಿಕೊಳ್ಳುವ ಮೂಲಕ ವಾಟ್ಸ್​ಆ್ಯಪ್ ಚಾಟ್ ಅನ್ನು ತೆರೆಯದೆ ಓದಬಹುದು. ಅದು ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಹೇಗೆ ಎಂಬುದಕ್ಕೆ ಇಲ್ಲಿದೆ ನೋಡಿ ಟ್ರಿಕ್.

Poco X5 Pro: ಭಾರತಕ್ಕೆ ಬಂತು 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಇದನ್ನೂ ಓದಿ
Image
Server Down: ಏಕಕಾಲದಲ್ಲಿ ಫೇಸ್​ಬುಕ್, ಯೂಟ್ಯೂಬ್, ಟ್ವಿಟ್ಟರ್, ಇನ್​ಸ್ಟಾಗ್ರಾಮ್ ಡೌನ್
Image
Moto E13: ಇಂದು ಮೋಟೋರೊಲಾದಿಂದ ಮೋಟೋ E13 ಬಿಡುಗಡೆ: ಇದರ ಬೆಲೆ 7,000 ರೂ. ಗಿಂತ ಕಡಿಮೆ
Image
Safer Internet Day 2023: ಇಂದು ವಿಶ್ವ ಸುರಕ್ಷಿತ ಅಂತರ್ಜಾಲ ದಿನ: ಮಕ್ಕಳನ್ನು ಆನ್‌ಲೈನ್​ನಿಂದ ಸುರಕ್ಷಿತವಾಗಿಡಲು ಇಲ್ಲಿದೆ ಟಿಪ್ಸ್
Image
WhatsApp: ವಾಟ್ಸ್​ಆ್ಯಪ್​ನ ಈ ಹೊಸ ಫೀಚರ್​ಗಾಗಿ ಕಾದು ಕುಳಿತ ಬಳಕೆದಾರರು: ಬರುತ್ತಿದೆ ಬಹುಬೇಡಿಕೆಯ ಆಯ್ಕೆ
  • ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ ಮೈನ್ ಸ್ಕ್ರೀನ್​ನಲ್ಲಿರುವ ಹೋಮ್ ಪೇಜ್ ಅನ್ನು ಲಾಂಗ್ ಪ್ರೆಸ್ ಮಾಡಿ
  • ಈಗ ಅಲ್ಲಿ ಕಾಣಿಸುವ Widgets ಆಯ್ಕೆ ಮೇಲೆ ಒತ್ತಿರಿ
  • ನಂತರ ಮೈನ್ ಸ್ಕ್ರೀನ್​ನಲ್ಲಿ ಎಲ್ಲ Widgets ಕಾಣಿಸುತ್ತದೆ. ಇದರಲ್ಲಿ ವಾಟ್ಸ್​ಆ್ಯಪ್ ಆಯ್ಕೆ ಮಾಡಿ
  • ವಾಟ್ಸ್​ಆ್ಯಪ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಮೈನ್ ಸ್ಕ್ರೀನ್​ನಲ್ಲಿ ಕಾಣಿಸುತ್ತದೆ
  • ನಂತರ ಡನ್ ಆಯ್ಕೆಯನ್ನು ಒತ್ತಿರಿ. ಈ ಸಂದರ್ಭ ಬೇಕಾದಲ್ಲಿ ಫುಲ್ ಸ್ಕ್ರೀನ್ ವರೆಗೂ ಸೆಲೆಕ್ಟ್ ಮಾಡಬಹುದು.
  • ಈ ಸೆಟ್ಟಿಂಗ್ ನಂತರ ಸ್ಕ್ರಾಲ್ ಮಾಡುವ ಮೂಲಕ ವಾಟ್ಸ್​ಆ್ಯಪ್ ತೆರೆಯದೆ ಮೆಸೇಜ್ ಓದಬಹುದು
  • ಯಾವುದೇ ಕಾರಣಕ್ಕೂ ಮೆಸೇಜ್ ಮೇಲೆ ಕ್ಲಿಕ್ ಮಾಡಬೇಡಿ, ಮಾಡಿದರೆ ವಾಟ್ಸ್​ಆ್ಯಪ್ ಓಪನ್ ಆಗಿ ನೇರವಾಗಿ ಚಾಟ್​ಗೆ ಪ್ರವೇಶಿಸುತ್ತದೆ.

ಒರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸಿ:

ವಾಟ್ಸ್​ಆ್ಯಪ್ ಸದ್ಯದಲ್ಲೇ ತನ್ನ ಬಳಕೆದಾರರಿಗೆ ನೂತನ ಫೀಚರ್ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ವಾಟ್ಸ್​ಆ್ಯಪ್​ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿ ಸಿಗುವುದಿಲ್ಲ. ತನ್ನ ನೈಜ್ಯ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಇದಕ್ಕಾಗಿ ವಾಟ್ಸ್​ಆ್ಯಪ್​ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲ ಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ.

ವಾಟ್ಸ್​ಆ್ಯಪ್​ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು. ಇದರಿಂದ ನಿಮ್ಮ ಫೋಟೋದ ಒರಿಜಿನಲ್ ಕ್ವಾಲಿಟಿಯಲ್ಲಿ ಯಾವುದೇ ಬದಲಾವಣೆ ಇಲ್ಲದಂತೆ ಸೆಂಡ್‌ ಮಾಡುತ್ತದೆ. ಸದ್ಯ ಆಂಡ್ರಾಯ್ಡ್‌ ಬೇಟಾ ವರ್ಷನ್​ನಲ್ಲಿ ಈ ಆಯ್ಕೆ ಕಾಣಿಸಿದ್ದು ಆದಷ್ಟು ಬೇಗ ಎಲ್ಲ ಬಳಕೆದಾರರಿಗೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Thu, 9 February 23

ತಾಜಾ ಸುದ್ದಿ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​