AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಫೋನ್ ಪೇ, ಗೂಗಲ್ ಪೇ ಮೂಲಕ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು?: ಇಲ್ಲಿದೆ ಮಾಹಿತಿ

UPI: ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ, ಗೂಗಲ್‌ ಪೇ, ಪೇಟಿಎಂ ನಂತಹ ಆ್ಯಪ್‌ಗಳು ನೀಡುತ್ತಿವೆ. ಆದರೆ ಯುಪಿಐನಲ್ಲಿ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು ಎಂಬುದು ನಿಮಗೆ ಗೊತ್ತೇ?.

Tech Tips: ಫೋನ್ ಪೇ, ಗೂಗಲ್ ಪೇ ಮೂಲಕ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು?: ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 01, 2022 | 12:57 PM

Share

ಇಂದಿನ ವೇಗದ ಜಗತ್ತಿನಲ್ಲಿ ಡಿಜಿಟಲ್‌ ಪೇಮೆಂಟ್‌ ವ್ಯವಸ್ಥೆ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದು ಹೆಚ್ಚಿನವರು ಉಪಯೋಗಿಸುತ್ತಿದ್ದಾರೆ. ಕೊರೊನಾ ವೈರಸ್ (Corona Virus) ಬಂದ ಮೇಲಂತು ದೇಶದಲ್ಲಿ ಹೆಚ್ಚಿನ ವ್ಯವಹಾರಗಳು ಆನ್​ಲೈನ್ ಮೂಲಕವೇ ನಡೆಯುತ್ತಿದ್ದು ಈ ಮೂಲಕ ಯುಪಿಐ (UPI) ಅಥವಾ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಹೆಚ್ಚು ಬಳಕೆಯಾಗುತ್ತಿದೆ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ ಕೂಡ ಆನ್‌ಲೈನ್‌ ಪಾವತಿಯನ್ನು ಸ್ವೀಕರಿಸುತ್ತಾರೆ. ಯುಪಿಐ ಮೂಲಕ ಎಲ್ಲ ರೀತಿಯ ಹಣಕಾಸು ವ್ಯವಹಾರ, ಬ್ಯಾಂಕಿನ ವ್ಯವಹಾರ ತುಂಬಾ ಸುಲಭವಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ (PhonePe), ಗೂಗಲ್‌ ಪೇ, ಪೇಟಿಎಂ ನಂತಹ ಆ್ಯಪ್‌ಗಳು ನೀಡುತ್ತಿವೆ. ಆದರೆ ಯುಪಿಐನಲ್ಲಿ ದಿನಕ್ಕೆ ಎಷ್ಟು ಹಣ ಕಳುಹಿಸಬಹುದು ಎಂಬುದು ನಿಮಗೆ ಗೊತ್ತೇ?.

ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಎಂಬುದು ಆರ್‌ಬಿಐ ನಿಯಂತ್ರಿತ ಘಟಕವಾದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಅಭಿವೃದ್ಧಿಪಡಿಸಿದ ತ್ವರಿತ ಪಾವತಿ ವ್ಯವಸ್ಥೆಯಾಗಿದೆ. ಇದು ಯಾವುದೇ ಎರಡು ಬ್ಯಾಂಕ್‌ ಖಾತೆಗಳ ನಡುವೆ ತಕ್ಷಣವೇ ಹಣವನ್ನು ವರ್ಗಾವಣೆ ಮಾಡಲು ಈ ಪಾವತಿ ವ್ಯವಸ್ಥೆಯನ್ನು ಪ್ರಾರಂಭಿಸಲಾಯಿತು. ಯುಪಿಐ ವಹಿವಾಟು ಮಿತಿಯನ್ನು ಕಾಲಕಾಲಕ್ಕೆ ಬದಲಾವಣೆ ಮಾಡಲಾಗುತ್ತಿದೆ. ಸದ್ಯ ಯುಪಿಐ ಬಳಸಿ ಮಾಡುವ ವಹಿವಾಟು ಮಿತಿ ದಿನಕ್ಕೆ 1 ಲಕ್ಷ ರೂ. ಆಗಿದೆ. ಆದರೆ, ಇದು ಆಯ್ದ ಬ್ಯಾಂಕ್​ಗಳಿಗೆ ಮಾತ್ರ. ನಿಮ್ಮದು ಯಾವ ಬ್ಯಾಂಕ್ ಎಂಬ ಆಧಾರದ ಮೇಲೆ ಎಷ್ಟು ಹಣ ಕಳುಹಿಸಬಹುದು ಎಂಬ ನಿಯಮವಿದೆ.

Mobile Data: ಪಾಕಿಸ್ತಾನ, ಇಂಗ್ಲೆಂಡ್​​ನಲ್ಲಿ 1GB ಡೇಟಾದ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ: ಎಷ್ಟು ಗೊತ್ತೇ?

ಇದನ್ನೂ ಓದಿ
Image
Top Android Apps 2022: ಈ ವರ್ಷದ ಬೆಸ್ಟ್​​ ಗೇಮ್ಸ್, ಆ್ಯಪ್ಸ್ ಯಾವುದು?; ಗೂಗಲ್ ಪ್ಲೇಯಿಂದ ಪಟ್ಟಿ ಬಿಡುಗಡೆ
Image
WhatsApp Ban: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ಯಾಕೆ?
Image
Facebook: ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ತಪ್ಪಿಯೂ ಹೀಗೆ ಮಾಡಬೇಡಿ
Image
Twitter Character Limit: ಟ್ವಿಟರ್​ ಅಕ್ಷರ ಮಿತಿ 1,000ಕ್ಕೆ ಹೆಚ್ಚಳ; ಎಲಾನ್ ಮಸ್ಕ್ ಸುಳಿವು

ಇನ್ನು ಭೀಮ್ ಯುಪಿಐ ವಹಿವಾಟು ಮಿತಿ ಪ್ರತಿ ವಹಿವಾಟಿಗೆ 40 ಸಾವಿರ ರೂ. ಆಗಿದೆ. ಈ ವಹಿವಾಟು ಮಿತಿ ಭೀಮ್ ಯುಪಿಐಗೆ ಲಿಂಕ್ ಆಗಿರುವ ಖಾತೆಗಳಿಗೆ ಲಭ್ಯವಿರುತ್ತದೆ. ಅಂತೆಯೆ ವ್ಯಾಪಾರಿಗಳ ನಡೆಸುವ ವಹಿವಾಟಿನ ಗರಿಷ್ಠ ಮೊತ್ತ 24 ಗಂಟೆಯಲ್ಲಿ 2 ಲಕ್ಷ ರೂ. ಆಗಿದೆ. ಎಲ್ಲಾದರು ನೀವು ಪಾವತಿ ಮಾಡಿದ ಸಂದರ್ಭದಲ್ಲಿ ಹಣ ನಿಮ್ಮ ಖಾತೆಯಿಂದ ಕಡಿತವಾಗಿ ವರ್ಗಾವಣೆ ಮಾಡಿದ ಖಾತೆಗೆ ಜಮೆ ಆಗದಿದ್ದರೆ ಆ ಹಣವು ಮೂರು ದಿನಗಳ ಒಳಗೆ ರಿಫಂಡ್ ಆಗುತ್ತದೆ. ಅದು ರಿಫಂಡ್ ಆಗದಿದ್ದರೆ ನಿಮ್ಮ ಬ್ಯಾಂಕ್ ಖಾತೆಯನ್ನು ಸಂಪರ್ಕ ಮಾಡಬಹುದು.

ಈಗಾಗಲೇ ಹೇಳಿರುವಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಯುಪಿಐ ವಹಿವಾಟು ಮಿತಿ ವಿಭಿನ್ನವಾಗಿದೆ. ಈ ಕುರಿತ ಪಟ್ಟಿ ಇಲ್ಲಿದೆ.

ಐಸಿಐಸಿಐ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿಯಿದೆ. ಐಸಿಐಸಿಐ ಬ್ಯಾಂಕಿನ ಖಾತೆದಾರರು 24 ಗಂಟೆಗಳಲ್ಲಿ 20 ಬಾರಿ ಹಣ ವರ್ಗಾವಣೆ ಮಾಡಬಹುದು.

ಎಸ್‌ಬಿಐ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿ, 24 ಗಂಟೆಗಳಲ್ಲಿ ಗರಿಷ್ಠ 10 ವಹಿವಾಟು ಮಾಡಬಹುದು.

ಎಚ್‌ಡಿಎಫ್‌ಸಿ ಬ್ಯಾಂಕ್: ಪ್ರತಿ ವಹಿವಾಟಿಗೆ 1 ಲಕ್ಷ ರೂ. ಮಿತಿ.

ಬ್ಯಾಂಕ್ ಆಫ್ ಇಂಡಿಯಾ: ಪ್ರತಿ ವಹಿವಾಟಿಗೆ 10 ಸಾವಿರ ರೂ. ಮಿತಿ.

ಸೆಂಟ್ರಲ್ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ. ಮಿತಿ

ಐಡಿಎಫ್‌ಸಿ ಫಸ್ಟ್ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ. ಮಿತಿ.

ಕೊಟಕ್ ಮಹೀಂದ್ರಾ ಬ್ಯಾಂಕ್: ಪ್ರತಿ ವಹಿವಾಟಿಗೆ 25 ಸಾವಿರ ರೂ ಮಿತಿ. ದಿನಕ್ಕೆ 2 ವಹಿವಾಟು ಮಾಡಬಹುದು.

ಕೆನರಾ ಬ್ಯಾಂಕ್ 1 ಲಕ್ಷ ರೂ.

ಆಕ್ಸಿಸ್ ಬ್ಯಾಂಕ್ 1 ಲಕ್ಷ ರೂ.

Tech Tips: ಗೂಗಲ್​ನಲ್ಲಿ ನಿಮ್ಮ ಫೋಟೋ ಕಾಣಿಸಬೇಕೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

ಕಾರ್ಪೊರೇಶನ್ ಬ್ಯಾಂಕ್ 50 ಸಾವಿರ ರೂ.

ಆಂಧ್ರ ಬ್ಯಾಂಕ್ 1 ಲಕ್ಷ ರೂ.

ಸಿಟಿ ಬ್ಯಾಂಕ್ 1 ಲಕ್ಷ ರೂ.

ಬ್ಯಾಂಕ್ ಆಫ್ ಬರೋಡಾ 25 ಸಾವಿರ ರೂ.

ಬ್ಯಾಂಕ್ ಆಫ್ ಮಹಾರಾಷ್ಟ್ರ 1 ಲಕ್ಷ ರೂ.

ಸಿಟಿ ಯೂನಿಯನ್ ಬ್ಯಾಂಕ್ 1 ಲಕ್ಷ ರೂ.

ಗೂಗಲ್ ಪೇ, ಫೋನ್ ಪೇಗಳಂತೆ ಪೇಟಿಎಂನಲ್ಲಿ ಕೂಡ ಪ್ರತಿ ವಹಿವಾಟಿನಲ್ಲಿ 1 ಲಕ್ಷ ಹಣ ವರ್ಗಾವಣೆ ಮಾಡುವ ಆಯ್ಕೆ ನೀಡಲಾಗಿದೆ. ಆದರೆ 24 ಗಂಟೆಗಳಲ್ಲಿ ನೀವು 1 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ