AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಆಧಾರ್ ಕಾರ್ಡ್ ಮೂಲಕ ಯಾರಾದರು ಸಿಮ್ ಖರೀದಿಸಿದ್ದಾರ?: ಹೇಗೆ ಕಂಡುಹಿಡಿಯುವುದು?

Aadhaar Card: ಇಸರ್ಕಾರದ ಯೋಜನೆಗಳು ಮಾತ್ರವಲ್ಲದೆ ಇತರೆ ಸಣ್ಣಪುಟ್ಟ ಅಗತ್ಯಗಳಿಗೂ ಆಧಾರ್ ಕಾರ್ಡ್ ಜೆರಾಕ್ಸ್ ಅಗತ್ಯವಿದೆ. ಹೀಗಿರುವಾಗ ಆಧಾರ್ ಕಾರ್ಡ್ ದುರ್ಬಳಕೆಯಾಗುವ ಸಾಧ್ಯತೆ ಕೂಡ ಜಾಸ್ತಿ ಇರುತ್ತದೆ.

Tech Tips: ನಿಮ್ಮ ಆಧಾರ್ ಕಾರ್ಡ್ ಮೂಲಕ ಯಾರಾದರು ಸಿಮ್ ಖರೀದಿಸಿದ್ದಾರ?: ಹೇಗೆ ಕಂಡುಹಿಡಿಯುವುದು?
Sim card and aadhaar card
Follow us
Vinay Bhat
|

Updated on: Apr 25, 2023 | 6:55 AM

ಆಧಾರ್ ಕಾರ್ಡ್ (Aadhaar Card) ಎಂಬುದು ಪ್ರತಿಯೊಬ್ಬ ಭಾರತೀಯನ ಅತಿ ಅಗತ್ಯವಾದ ಗುರುತು. 2009 ರಲ್ಲಿ ಜಾಗತಿಕ ಗುರುತಿನ ಮನ್ನಣೆಗಾಗಿ ಪ್ರಾರಂಭಿಸಲಾದ ಆಧಾರ್ ಇಲ್ಲವಾದಲ್ಲಿ ಸರ್ಕಾರದ ಅತ್ಯಮೂಲ್ಯ ಸೌಲಭ್ಯದಿಂದ ವಂಚಿತರಾಗುತ್ತಾರೆ. ಬ್ಯಾಂಕ್ (Bank) ಖಾತೆಯಿಂದ ಹಿಡಿದು ಒಂದು ಸಿಮ್ ಕಾರ್ಡ್ (Sim Card) ಖರೀದಿಸಲು ಕೂಡ ಆಧಾರ್ ಕಡ್ಡಾಯವಾಗಿದೆ. ಇದೇ ಕಾರಣಕ್ಕೆ ನಮಗೆ ಗೊತ್ತಿಲ್ಲದೆ ಅನೇಕ ಕಡೆಗಳಲ್ಲಿ ಆಧಾರ್ ಸಂಖ್ಯೆಗಳನ್ನು ನಮೂದಿಸುತ್ತಲೇ ಇರುತ್ತೇವೆ. ಸರ್ಕಾರದ ಯೋಜನೆಗಳು ಮಾತ್ರವಲ್ಲದೆ ಇತರೆ ಸಣ್ಣಪುಟ್ಟ ಅಗತ್ಯಗಳಿಗೂ ಆಧಾರ್ ಕಾರ್ಡ್ ಜೆರಾಕ್ಸ್ ಅಗತ್ಯವಿದೆ. ಹೀಗಿರುವಾಗ ಆಧಾರ್ ಕಾರ್ಡ್ ದುರ್ಬಳಕೆಯಾಗುವ ಸಾಧ್ಯತೆ ಕೂಡ ಜಾಸ್ತಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ನಕಲಿ ಆಧಾರ್ ಕಾರ್ಡ್‌ ಬಳಸಿ ಸಿಮ್ ಖರೀದಿಸುತ್ತಿರುವ ಪ್ರಕರಣ ಕೂಡ ಹೆಚ್ಚಾಗುತ್ತಿದೆ.

ಕೆಲ ಜನರು ಅಮಾಯಕರ ಆಧಾರ್ ಕಾರ್ಡ್‌ ಬಳಸಿ ಅಕ್ರಮವಾಗಿ ಸಿಮ್ ಕಾರ್ಡ್‌ಗಳನ್ನು ತೆಗೆದುಕೊಂಡು ಅನೈತಿಕ ಚಟುವಟಿಕೆ ನಡೆಸುತ್ತಿರುವುದು ಕಂಡುಬರುತ್ತಿದೆ. ಇದಕ್ಕಾಗಿಯೇ ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಯಾವುದಾದರು ಸಿಮ್ ಕಾರ್ಡ್‌ಗಳನ್ನು ತೆಗೆದುಕೊಳ್ಳಲಾಗಿದೆಯೇ ಎಂದು ಪರಿಶೀಲಿಸಲು ಸರ್ಕಾರವು ಆಯ್ಕೆಯನ್ನು ಒದಗಿಸಿದೆ. ಟಾಫ್-ಕಾಪ್ ಹೆಸರಿನ ವೆಬ್‌ಸೈಟ್ ಮೂಲಕ ನಿಮ್ಮ ಆಧಾರ್ ಕಾರ್ಡ್ ಮೂಲಕ ಎಷ್ಟು ಸಿಮ್ ಆ್ಯಕ್ಟಿವ್ ಆಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಪ್ರಸ್ತುತ ಈ ಸೌಲಭ್ಯವು ತೆಲಂಗಾಣ, ಆಂಧ್ರಪ್ರದೇಶ, ಕೇರಳ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಮೆಘಾಲಯ, ತ್ರಿಪುರ, ಅರುಣಾಚಲ ಪ್ರದೇಶ ಮತ್ತು ನಾಗಲೆಂಡ್ ನಾಗರಿಕರಿಗೆ ಮಾತ್ರ ಲಭ್ಯವಿದೆ.

Google Pixel 6 Pro 5G: ಕೇವಲ 46,910 ರೂ. ಗೆ ಸೇಲ್ ಆಗುತ್ತಿದೆ 1 ಲಕ್ಷದ ಈ ಸ್ಮಾರ್ಟ್​ಫೋನ್: ಆಫರ್ ಮಿಸ್ ಮಾಡ್ಬೇಡಿ

ಇದನ್ನೂ ಓದಿ
Image
Tech Tips: ಇನ್​​ಸ್ಟಾಗ್ರಾಮ್ ಬಯೋದಲ್ಲಿ ಐದು ಲಿಂಕ್​ಗಳನ್ನು ಸೇರಿಸುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ
Image
Tech Tips: ವಾಟ್ಸ್​ಆ್ಯಪ್​ ಅನ್ನು​ ಕನ್ನಡ ಭಾಷೆಯಲ್ಲೂ ಬಳಸಿ: ಹೇಗೆ ಗೊತ್ತೇ?
Image
OnePlus Nord 3: ರೋಚಕತೆ ಸೃಷ್ಟಿಸಿದ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ
Image
Tech Tips: ಗೂಗಲ್ ಪೇ ಕೈಕೊಟ್ರೆ ಟೆನ್ಶನ್ ಬೇಡ: ಈ ಆ್ಯಪ್ ಇನ್​ಸ್ಟಾಲ್ ಮಾಡಿಕೊಳ್ಳಿ

ಪರಿಶೀಲಿಸುವುದು ಹೇಗೆ?:

  • ಮೊದಲು https://tafcop.dgtelecom.gov.in/ ವೆಬ್‌ಸೈಟ್‌ಗೆ ಹೋಗಿ.
  • ಇಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೋದಿಸಲು ಕೇಳುತ್ತದೆ.
  • ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ‘ಓಟಿಪಿ ರಿಕ್ವೆಸ್ಟ್’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಬಳಿಕ OTP ನಮೂದಿಸಿ ಮತ್ತು ‘ವ್ಯಾಲಿಡೇಟ್’ ಮೇಲೆ ಕ್ಲಿಕ್ ಮಾಡಿ.
  • ಈಗ ನಿಮ್ಮ ಆಧಾರ್​ನಿಂದ ತೆಗೆದುಕೊಂಡ ಮೊಬೈಲ್ ಸಂಖ್ಯೆಗಳು/ಸಿಮ್‌ಗಳ ಎಲ್ಲಾ ವಿವರಗಳನ್ನು ಕಾಣಬಹುದು.
  • ಇಲ್ಲಿ ನಿಮಗೆ ಸಂಬಂಧಿಸಿದ ಯಾವುದೇ ಮೊಬೈಲ್ ಸಂಖ್ಯೆಗಳಿದ್ದಲ್ಲಿ ವರದಿ ಮಾಡಬಹುದು.

ಸಿಮ್​ ಕಾರ್ಡ್ ಸಂಖ್ಯೆ​ಗೆ ಸರ್ಕಾರದಿಂದ ಮಿತಿ:

ಇತ್ತೀಚೆಗಷ್ಟೆ ಕೇಂದ್ರ ಸರ್ಕಾರವು ಒಂಬತ್ತಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿರುವವರ ಫೋನ್ ಸಂಪರ್ಕವನ್ನು ಕಡಿತ ಮಾಡುವಂತೆ ಆದೇಶವನ್ನು ಹೊರಡಿಸಿದೆ. ಒಬ್ಬ ವೈಯಕ್ತಿಕ ಚಂದಾದಾರರು ಎಲ್ಲಾ TSPಗಳಲ್ಲಿ (ಟೆಲಿಕಾಂ ಸೇವಾ ಪೂರೈಕೆದಾರರು) ಒಂಬತ್ತಕ್ಕಿಂತ ಹೆಚ್ಚು ಮೊಬೈಲ್ ಸಂಪರ್ಕಗಳನ್ನು (ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳು ಮತ್ತು ಅಸ್ಸಾಂ LSAಗಳ ಸಂದರ್ಭದಲ್ಲಿ ಆರು) ಹೊಂದಿರುವುದು ಕಂಡುಬಂದರೆ ಎಲ್ಲ ಮರು-ಪರಿಶೀಲನೆಗಾಗಿ ಮೊಬೈಲ್ ಸಂಪರ್ಕಗಳನ್ನು ಕಡಿತ ಮಾಡಲಾಗುತ್ತದೆ. ಹಣಕಾಸಿನ ಅಪರಾಧಗಳು, ತೊಂದರೆ ನೀಡುವಂಥ ಕರೆಗಳು, ಸ್ವಯಂಚಾಲಿತ ಕರೆಗಳು ಮತ್ತು ಮೋಸದ ಚಟುವಟಿಕೆಗಳ ಘಟನೆಗಳನ್ನು ಪರಿಶೀಲಿಸಲು ಈ ಕ್ರಮ ಬಂದಿದೆ. ನಿಯಮದ ಪ್ರಕಾರ, ಬಳಕೆಯಲ್ಲಿ ಇಲ್ಲದ- ಎಲ್ಲಾ ಫ್ಲ್ಯಾಗ್ ಮಾಡಲಾದ ಮೊಬೈಲ್ ಸಂಪರ್ಕಗಳನ್ನು ಡೇಟಾಬೇಸ್‌ನಿಂದ ತೆಗೆದುಹಾಕಲು ಟೆಲಿಕಾಂ ಆಪರೇಟರ್‌ಗಳಿಗೆ ದೂರಸಂಪರ್ಕ ಇಲಾಖೆ ಕೇಳಿದೆ.

ಹೆಚ್ಚಿನ ಟೆಕ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ