AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನೀವು ಸ್ಮಾರ್ಟ್​ಫೋನ್​ನಲ್ಲಿರುವ mAadhaar ಆ್ಯಪ್ ಬಳಸಿದ್ದೀರಾ?: ಇದರ ಪ್ರಯೋಜನವೇನು?

mAadhaar: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದವರು ಬಳಕೆದಾರರ ಅನುಕೂಲಕ್ಕಾಗಿ ಆಧಾರ್ ಆ್ಯಪ್‌ ಅನ್ನು ಉನ್ನತೀಕರಿಸಿದ್ದಾರೆ. ಈ ಆ್ಯಪ್‌ ಆಂಡ್ರಾಯ್ಡ್ (Android) ಮತ್ತು ಐಓಸ್ (iOS) ಅಧಿಕೃತ ಆ್ಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿದೆ.

Tech Tips: ನೀವು ಸ್ಮಾರ್ಟ್​ಫೋನ್​ನಲ್ಲಿರುವ mAadhaar ಆ್ಯಪ್ ಬಳಸಿದ್ದೀರಾ?: ಇದರ ಪ್ರಯೋಜನವೇನು?
m-aadhaar
Follow us
TV9 Web
| Updated By: Vinay Bhat

Updated on: Feb 04, 2023 | 6:49 AM

ಇಂದಿನ ಕಾಲದಲ್ಲಿ ಆಧಾರ್ ಕಾರ್ಡ್‌ (Aadhaar Card) ಎಂಬುದು ಒಂದು ಪ್ರಮುಖ ದಾಖಲೆ. ಆದರೆ ಆಧಾರ್ ಕಾರ್ಡ್ ಅನ್ನು ಎಲ್ಲೆಡೆ ಕೊಂಡೊಯ್ಯಲು ಸಾಧ್ಯವಿಲ್ಲ. ಇದಕ್ಕಾಗಿಯೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದವರು ಬಳಕೆದಾರರ ಅನುಕೂಲಕ್ಕಾಗಿ ಆಧಾರ್ ಆ್ಯಪ್‌ ಅನ್ನು ಉನ್ನತೀಕರಿಸಿದ್ದಾರೆ. ಈ ಆ್ಯಪ್‌ ಆಂಡ್ರಾಯ್ಡ್ (Android) ಮತ್ತು ಐಓಸ್ (iOS) ಅಧಿಕೃತ ಆ್ಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿದೆ. ಇದರಲ್ಲಿ ಆಧಾರ್ ಕಾರ್ಡಿನ ಸಾಫ್ಟ್ ಕಾಪಿ ಡೌನ್‌ಲೋಡ್ ಮಾಡುವುದರ ಜತೆಗೆ ಆಧಾರ್​ಗೆ ಸಂಬಂಧಿಸಿದ ಹಲವು ಸೇವೆಗಳು ಲಭ್ಯವಿದೆ. ಈ ಆ್ಯಪ್ ಮೂಲಕ ನಿಮ್ಮ ಮೊಬೈಲ್ ಫೋನ್‌ನಲ್ಲಿ ಆಧಾರ್‌ಗೆ ಸಂಬಂಧಿಸಿದ 35ಕ್ಕೂ ಹೆಚ್ಚು ಸೇವೆಗಳ ಲಾಭವನ್ನು ಪಡೆಯಬಹುದು. mAadhaar ಅಪ್ಲಿಕೇಶನ್ ಬಳಕೆದಾರರಿಗೆ ಅದರ ಆಧಾರ್ ಡೇಟಾವನ್ನು ಸಿಂಕ್ ಮಾಡಲು ಅನುಮತಿಸುತ್ತದೆ. ಈರೀತಿ ಮಾಡುವುದರಿಂದ ಯಾವುದೇ ಸಮಯದಲ್ಲಿ ಆಧಾರ್‌ಗೆ ಸಂಬಂಧಿಸಿದ ಮಾಹಿತಿಯನ್ನು ನೀವು ನಿಮ್ಮ ಬೆರಳ ತುದಿಯಲ್ಲಿ ಪಡೆಯಲು ಇದು ಸಹಾಯ ಮಾಡುತ್ತದೆ. ಹಾಗಾದ್ರೆ ಇದನ್ನು ಬಳಕೆ ಮಾಡುವುದು ಹೇಗೆ ಎಂಬುದನ್ನು ನೋಡೋಣ.

  • ನೀವು ಆಂಡ್ರಾಯ್ಡ್ ಬಳಕೆದಾರರಾಗಿದ್ದರೆ ಗೂಗಲ್ ಪ್ಲೇ ಸ್ಟೋರ್​ಗೆ ಬೇಟಿ ನೀಡಿ. ಐಒಎಸ್ ಬಳಕೆದಾರರಾಗಿದ್ದರೆ ಆ್ಯಪ್​ ಸ್ಟೋರ್ ಓಪನ್ ಮಾಡಿ.
  • ಸರ್ಚ್​ ಬಾರ್​ನಲ್ಲಿ mAadhaar ಎಂದು ಟೈಪ್ ಮಾಡಿ ಮತ್ತು ಡೌನ್​ಲೋಡ್ ಕೊಡಿ. ಅಥವಾ ಅಂಡ್ರಾಯ್ಡ್ ಬಳಕೆದಾರರು https://play.google.com/store/apps/details?id=in.gov.uidai.mAadhaarPlus&hl=en_IN ಐಒಎಸ್ ಅವರು https://apps.apple.com/in/app/maadhaar/id1435469474 ನಲ್ಲಿ ಡೌನ್​ಲೋಡ್ ಮಾಡಬಹುದು.
  • ಈಗ ನೀವು ಡೌನ್​ಲೋಡ್ ಮಾಡಿದ ಆ್ಯಪ್ ಸರಿಯಾಗಿದೆಯೇ ಎಂದು ಪರಶೀಲಿಸಿ. ಈ ಆ್ಯಪ್ ಅನ್ನು ಅಭಿವೃದ್ದಿ ಪಡಿಸಿದ ಬಗ್ಗೆ Unique Identification Authority of India ಎಂದು ಇದೆಯೇ ಎಂದು ನೋಡಿಕೊಳ್ಳಿ.
  • ಇನ್​ಸ್ಟಾಲ್ ಮಾಡಿ ಓಪನ್ ಮಾಡಿದ ತಕ್ಷಣ ಅಲ್ಲಿರುವ ವಿಷಯಗಳನ್ನು ಓದಿ ಮುಂದೆ ಕ್ಲಿಕ್ ಮಾಡಿ. ಇಲ್ಲಿ ನಿಮಗೆ ಭಾಷೆಯ ಆಯ್ಕೆ ಕೂಡ ಸಿಗುತ್ತದೆ.
  • ಇದರಲ್ಲಿ ಐದು ಜನರ ಪ್ರೊಫೈಲ್ ನೋಡಲು ಸಾಧ್ಯವಾಗುತ್ತದೆ. ಇದಕ್ಕಾಗಿ ಆ್ಯಡ್ ಪ್ರೊಫೈಲ್​ನಲ್ಲಿ ಓಟಿಪಿ ನಮೋದಿಸಬೇಕಾಗುತ್ತದೆ.

Budget 2023: ಬಿಎಸ್​ಎನ್​ಎಲ್ 5ಜಿ ನೆಟ್ವರ್ಕ್ ಅಭಿವೃದ್ಧಿಗೆ 53 ಸಾವಿರ ಕೋಟಿ ರೂ

mAadhaar ಅಪ್ಲಿಕೇಶನ್ ಅನ್ನು ಭಾರತದಲ್ಲಿ ಎಲ್ಲಿಯಾದರೂ ಯಾವಾಗ ಬೇಕಾದರೂ ಬಳಸಬಹುದು. ಇದು ವ್ಯಾಲೆಟ್ ನಲ್ಲಿರುವ ಆಧಾರ್ ಕಾರ್ಡ್ ಗಿಂತ ಹೆಚ್ಚು. ಒಂದೆಡೆ, ಎಂ-ಆಧಾರ್ ಪ್ರೊಫೈಲ್ ಅನ್ನು ವಿಮಾನ ನಿಲ್ದಾಣವು ಮಾನ್ಯ ಐಡಿ ಪ್ರೂಫ್ ಆಗಿ ಸ್ವೀಕರಿಸುತ್ತದೆ ಮತ್ತು ಮತ್ತೊಂದೆಡೆ, ರೈಲ್ವೆಗಳು ತಮ್ಮ ಇಕೆವೈಸಿ ಅಥವಾ ಕ್ಯೂಆರ್ ಕೋಡ್ ಅನ್ನು ಆಧಾರ್ ಸೇವೆಗಳನ್ನು ಒದಗಿಸಿದ ಸೇವಾ ಪೂರೈಕೆದಾರರೊಂದಿಗೆ ಹಂಚಿಕೊಳ್ಳಲು ಅಪ್ಲಿಕೇಶನ್‌ನಲ್ಲಿನ ವೈಶಿಷ್ಟ್ಯಗಳನ್ನು ಬಳಸಬಹುದು.

ಇದನ್ನೂ ಓದಿ
Image
Fake App: ಪ್ಲೇ ಸ್ಟೋರ್​ನಿಂದ ಅಪಾಯಕಾರಿ ಆ್ಯಪ್​ಗಳನ್ನು ಕಿತ್ತೆಸೆದ ಗೂಗಲ್: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ
Image
Coca-Cola Smartphone: ಫೆ. 10ಕ್ಕೆ ಕೋಕಾ-ಕೋಲಾ ಕಂಪನಿಯ ಚೊಚ್ಚಲ ಮೊಬೈಲ್ ರಿಲೀಸ್: ಏನು ಫೀಚರ್ಸ್?
Image
Cyber Crime: ಫಾಸ್ಟ್ಯಾಗ್ ರಿಚಾರ್ಜ್ ಮಾಡುವಾಗ ಒಂದು ಲಕ್ಷ ಕಳೆದುಕೊಂಡ ಉಡುಪಿಯ ವ್ಯಕ್ತಿ: ತಪ್ಪಿಯೂ ಹೀಗೆ ಮಾಡಬೇಡಿ
Image
WhatsApp Ban: ಭಾರತದಲ್ಲಿ 36 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಮೆಟಾ: ಯಾಕೆ?

mAadhaar ಅಪ್ಲಿಕೇಶನ್ ವಿಶಿಷ್ಟ ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿ ನಿಮ್ಮ ಬಯೋಮೆಟ್ರಿಕ್ ಲಾಕಿಂಗ್ / ಅನ್ಲಾಕಿಂಗ್ ಅನ್ನು ಮಾಡಬಹುದು. ಇದಕ್ಕಾಗಿ ನೀವು ಅಪ್ಲಿಕೇಶನ್‌ನಲ್ಲಿ ಸೆಟ್ಟಿಂಗ್ಸ್ ಸಕ್ರಿಯಗೊಳಿಸಬೇಕು. ಎಸ್​ಎಮ್​ಎಸ್​ ಆಧಾರಿತ ಓಟಿಪಿ ಬದಲಿಗೆ, mAadhaar ಸಮಯ ಆಧಾರಿತ ಒಂದು ಬಾರಿ ಪಾಸ್‌ವರ್ಡ್ (OTP) ಅನ್ನು ಉತ್ಪಾದಿಸುತ್ತದೆ. ಇದು ಬಹಳ ಕಡಿಮೆ ಸಮಯದವರೆಗೆ ಲೈವ್ ಒಟಿಪಿ ಆಗಿದೆ. ಇದು ಬಳಕೆದಾರರಿಗೆ ಹೆಚ್ಚಿನ ಸುರಕ್ಷತೆಯನ್ನು ಕೂಡ ನೀಡುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ