AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಎರಡು ಸ್ಮಾರ್ಟ್​ಫೋನ್​ನಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ತೆರೆಯಬಹುದೇ?

WhatsApp Tricks: ಫೇಸ್​ಬುಕ್, ಇನ್​ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್​ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್​ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೆ ವಾಟ್ಸ್​ಆ್ಯಪ್ ಕಂಪ್ಯಾನಿಯನ್‌ ಮೋಡ್‌ ಆಯ್ಕೆ ನೀಡಲಾಗಿದೆ.

Tech Tips: ಎರಡು ಸ್ಮಾರ್ಟ್​ಫೋನ್​ನಲ್ಲಿ ಒಂದೇ ನಂಬರ್​ನ ವಾಟ್ಸ್​ಆ್ಯಪ್ ಖಾತೆ ತೆರೆಯಬಹುದೇ?
WhatsApp
Vinay Bhat
|

Updated on: Apr 22, 2023 | 6:55 AM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷ ಸಾಕಷ್ಟು ಬೆಳವಣಿಗೆ ಕಂಡಿದೆ. ಅತಿ ಹೆಚ್ಚು ನೂತನ ಫೀಚರ್​ಗಳನ್ನು 2022 ರಲ್ಲಿ ಬಿಡುಗಡೆ ಮಾಡಿದೆ. ಈ ವರ್ಷ ಕೂಡ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಅನೇಕ ಅಪ್ಡೇಟ್ ನೀಡುವಲ್ಲಿ ಕೆಲಸ ಮಾಡುತ್ತಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​​ಆ್ಯಪ್ (WhatsApp) ಬಳಕೆದಾರರ ಸಂಖ್ಯೆ 2 ಬಿಲಿಯನ್ ದಾಟಿದೆ. ಆಂಡ್ರಾಯ್ಡ್, ಐಒಎಸ್ (iOS), ವೆಬ್ ಬಳಕೆದಾರರಿಗೆ ನೂತನ ಆಯ್ಕೆಗಳನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ಪರೀಕ್ಷಾ ಹಂತದಲ್ಲಿದೆ. ಆದರೆ, ಫೇಸ್​ಬುಕ್, ಇನ್​ಸ್ಟಾಗ್ರಾಮ್ ರೀತಿಯಲ್ಲಿ ಒಂದು ವಾಟ್ಸ್​ಆ್ಯಪ್ ಅಕೌಂಟ್ ಅನ್ನು ಎರಡು ಮೊಬೈಲ್​ಗಳಲ್ಲಿ ಉಪಯೋಗಿಸಲು ಸಾಧ್ಯವಿಲ್ಲ. ಈ ಆಯ್ಕೆಯನ್ನು ಮೆಟಾ ಕಂಪನಿ ಇನ್ನೂ ನೀಡಿಲ್ಲ. ಆದರೆ ವಾಟ್ಸ್​ಆ್ಯಪ್​ನಲ್ಲಿ ಕಂಪ್ಯಾನಿಯನ್‌ ಮೋಡ್‌ ಆಯ್ಕೆ ನೀಡಲಾಗಿದೆ.

ವಾಟ್ಸ್​ಆ್ಯಪ್​ನ ಈ ಕಂಪ್ಯಾನಿಯನ್ ಮೋಡ್ ಎಂಬ ಫೀಚರ್ಸ್‌ ಮೂಲಕ ಬಳಕೆದಾರರು ಏಕಕಾಲದಲ್ಲಿ ಎರಡು ಅಥವಾ ಹೆಚ್ಚಿನ ಡಿವೈಸ್‌ಗಳಲ್ಲಿ ವಾಟ್ಸ್​ಆ್ಯಪ್​​ ಬಳಸಬಹುದು. ಅಂದರೆ ನಿಮ್ಮ ವಾಟ್ಸ್​ಆ್ಯಪ್​​ ಆಕೌಂಟ್ ಅನ್ನು ಎರಡು ಮೊಬೈಲ್‌ಗಳಲ್ಲಿ ಬಳಸಬಹುದು. ಇದು ಬಾರ್‌ಕೋಡ್‌ ಸ್ಕ್ಯಾನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಒಂದೇ ಸಮಯದಲ್ಲಿ ನಾಲ್ಕು ಡಿವೈಸ್‌ಗಳಲ್ಲಿ ಅಕೌಂಟ್‌ ಲಿಂಕ್‌ ಮಾಡಿದರೆ ಲಿಂಕ್ ಮಾಡಲಾದ ಎಲ್ಲಾ ಫೋನ್‌ಗಳಲ್ಲಿಯೂ ಚಾಟ್‌ಗಳು ಮತ್ತು ಡೇಟಾವನ್ನು ಬಳಕೆದಾರ ಸ್ವೀಕರಿಸುತ್ತಾನೆ.

APPLE Store: ದೇಶದ ಮೊದಲ ಮುಂಬೈ ಸ್ಟೋರ್​​ಗೆ ಆ್ಯಪಲ್ ಸಿಇಒ ಟಿಮ್ ಕುಕ್ ಚಾಲನೆ

ಇದನ್ನೂ ಓದಿ
Image
Honor X50i: ಬರೋಬ್ಬರಿ 100MP ಕ್ಯಾಮೆರಾ: ಮಾರುಕಟ್ಟೆಯನ್ನು ದಂಗಾಗಿಸಿದ ಹಾನರ್ ಕಂಪನಿಯ ಹೊಸ ಸ್ಮಾರ್ಟ್​ಫೋನ್
Image
WhatsApp: ಒಂದಲ್ಲ, ಎರಡಲ್ಲ … ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಸಾಲು ಸಾಲು ಹೊಸ ಫೀಚರ್​ಗಳು: ಇಲ್ಲಿದೆ ನೋಡಿ
Image
Galaxy M14 5G: ಅತಿ ಕಡಿಮೆ ಬೆಲೆಗೆ 5G ಫೋನ್ ಬೇಕೆ?: ಇಂದಿನಿಂದ ಮಾರಾಟ ಕಾಣುತ್ತಿದೆ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌
Image
Twitter Blue Tick: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಕ್ರಿಕೆಟಿಗರ ಟ್ವಿಟ್ಟರ್ ಖಾತೆಯಿಂದ ಬ್ಲೂ ಟಿಕ್ ಮಾಯ

ಕಂಪ್ಯಾನಿಯನ್ ಮೋಡ್ ಅನ್ನು ಆಂಡ್ರಾಯ್ಡ್‌ ಡಿವೈಸ್‌ಗಳಲ್ಲಿ v2.22.23.18 ಬೀಟಾ ಆವೃತ್ತಿಯಲ್ಲಿ ಪರೀಕ್ಷಿಸಲಾಗುತ್ತಿದೆ. ಈ ಆಯ್ಕೆ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಯನ್‌ ಮೂಲಕ ಕಾರ್ಯನಿರ್ವಹಿಸಲಿದೆ. ಸದ್ಯ ಈ ಹೊಸ ಆಂಡ್ರಾಯ್ಡ್‌ಗಾಗಿ ಬೀಟಾ ಬಿಲ್ಡ್‌ನಲ್ಲಿ ಮಾತ್ರ ಲಭ್ಯವಿದೆ. ಶೀಘ್ರದಲ್ಲೇ ಐಒಎಸ್ ಪ್ಲಾಟ್‌ಫಾರ್ಮ್‌ನಲ್ಲಿಯೂ ಪರೀಕ್ಷಿಸಲ್ಪಡುವ ನಿರೀಕ್ಷೆಯಿದೆ. ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ:

ವಾಟ್ಸ್​ಆ್ಯಪ್ ತನ್ನ ಸ್ಟೇಟಸ್ ವಿಭಾಗದಲ್ಲಿ ಬದಲಾವಣೆ ಮಾಡಿದೆ. ಅಂದರೆ ನೀವು ವಾಟ್ಸ್​ಆ್ಯಪ್​ನಲ್ಲಿ ಏನಾದರು ಸ್ಟೇಟಸ್ ಹಂಚಿಕೊಂಡರೆ ಅದು ನೇರವಾಗಿ ಫೇಸ್​ಬುಕ್​ ಸ್ಟೇಟಸ್​ನಲ್ಲೂ ಕಾಣಿಸಲಿದೆ. ಈ ಹಿಂದೆ ವಾಟ್ಸ್​ಆ್ಯಪ್​ನಲ್ಲಿ ಸ್ಟೇಟಸ್ ಹಂಚಿಕೊಂಡರೆ ಅದನ್ನು ಎಫ್​ಬಿಗೂ ಶೇರ್ ಮಾಡಬೇಕಿತ್ತು. ಆದರೀಗ ಹೊಸ ಫೀಚರ್ ಪ್ರಕಾರ ಅಟೋಮೆಟ್ ಆಗಿ ವಾಟ್ಸ್​ಆ್ಯಪ್​ನಲ್ಲಿ ಶೇರ್ ಮಾಡಿದ ಸ್ಟೇಟಸ್ ಫೇಸ್​ಬುಕ್​ ಸ್ಟೇಟಸ್​ಗೂ ಅಪ್​ಲೋಡ್ ಆಗಲಿದೆ. ಹಾಗಂತ ಇದು ಕಡ್ಡಾಯವಲ್ಲ. ವಾಟ್ಸ್​ಆ್ಯಪ್​ನಲ್ಲಿ ಹೊಸ ಆಯ್ಕೆಯೊಂದು ಕಾಣಿಸಲಿದ್ದು ಆನ್​-ಆಫ್ ಮಾಡುವ ಮೂಲಕ ಇದನ್ನು ಬಳಸಬಹುದು. ಈಗಾಗಲೇ ಈ ಫೀಚರ್ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಸಿಗಲಿದೆಯಂತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ