AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ

Smartphone Tips: ಸ್ಮಾರ್ಟ್​ಫೋನ್ ಬಳಸುವ ಸಂದರ್ಭ ಒಂದಲ್ಲ ಒಂದು ದಿನ ಅದು ಹಾಳಾಗಿಯೇ ಆಗುತ್ತದೆ. ಆಗ ಫೋನ್ ಅನ್ನು ಸರ್ವೀಸ್ ಸೆಂಟರ್​ಗೆ ನೀಡುತ್ತಾರೆ. ಆದರೆ ಹೀಗೆ ಸ್ಮಾರ್ಟ್ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅವು ಯಾವುದು?, ಇಲ್ಲಿದೆ ನೋಡಿ ಮಾಹಿತಿ.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ
smartphone service center
Follow us
Vinay Bhat
|

Updated on: Dec 05, 2023 | 1:43 PM

ಇಂದಿನ ದಿನಗಳಲ್ಲಿ ಸ್ಮಾರ್ಟ್​ಫೋನ್ (Smartphone) ಬಳಕೆ ಅನಿವಾರ್ಯವಾಗಿದೆ. ಇದು ನಮ್ಮ ಅಗತ್ಯ ವಸ್ತುವಾಗಿ ಮಾರ್ಪಟ್ಟಿದೆ. ಸ್ಮಾರ್ಟ್​ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ. ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್​ಫೋನ್‌ನಲ್ಲಿ ಇರುತ್ತದೆ. ಆದರೆ, ಈ ಫೋನ್ ಒಂದಲ್ಲ ಒಂದು ದಿನ ಹಾಳಾಗುವುದು ಖಂಡಿತ. ಆಗ ಫೋನ್ ಅನ್ನು ಸರ್ವಿಸ್ ಸೆಂಟರ್​ನಲ್ಲಿ ನೀಡಬೇಕಾಗುತ್ತದೆ. ಹೀಗೆ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.

  • ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಹೊಂದಿದ್ದರೆ, ನೀವು ಮೊದಲು ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಬೇಕು. ಅಪ್ಲಿಕೇಶನ್‌ಗಳನ್ನು ಡಿಲೀಟ್ ಮಾಡುವ ಮೊದಲು ಪಾಸ್‌ವರ್ಡ್ ಮತ್ತು ಯೂಸರ್ ನೇಮ್ ಅನ್ನು ಬರೆದಿಟ್ಟುಕೊಳ್ಳುವುದು ಉತ್ತಮ.
  • ಸ್ಮಾರ್ಟ್‌ಫೋನ್‌ನ ನೋಟ್ ಪ್ಯಾಡ್‌ನಲ್ಲಿ ಪಾಸ್‌ವರ್ಡ್ ಮತ್ತು ವೈಯಕ್ತಿಕ ವಿವರಗಳನ್ನು ಬರೆಯುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಫೋನ್ ಅನ್ನು ಯಾರಿಗಾದರೂ ನೀಡುವಾಗ ನೋಟ್ ಪ್ಯಾಡ್​ನಲ್ಲಿ ಇರುವುದನ್ನು ಅಳಿಸಲು ಮರೆಯಬೇಡಿ.
  • ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಸದವರೇ ಇಲ್ಲ. ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳದಿರಲು, ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಿದ ನಂತರವೇ ನೀವು ಫೋನ್ ಅನ್ನು ಸರ್ವಿಸ್​ಗೆ ನೀಡಬೇಕು.
  • ಜಿಮೇಲ್ ಖಾತೆಯೂ ಲಾಗ್ ಔಟ್ ಆದ ನಂತರವೇ ಫೋನ್ ಸರ್ವಿಸ್​ ಕೇಂದ್ರಕ್ಕೆ ನೀಡಬೇಕು. ಜಿಮೇಲ್ ಖಾತೆಗೆ ಸಂಬಂಧಿಸಿದ ಎಲ್ಲಾ ವಿವರಗಳಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.
  • ಫೋನ್ ಗ್ಯಾಲರಿಯಲ್ಲಿ ಯಾವುದೇ ವೈಯಕ್ತಿಕ ಫೋಟೋಗಳಿದ್ದರೆ, ಅವುಗಳನ್ನು ಡಿಲೀಟ್ ಮಾಡಿ. ಫೋಟೋಗಳು ಬೇಕು ಎಂದಿದ್ದರೆ, ಅವುಗಳನ್ನು ಮೆಮೊರಿ ಕಾರ್ಡ್ ಅಥವಾ ಪೆನ್ ಡ್ರೈವ್‌ಗೆ ವರ್ಗಾಯಿಸಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ