AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ

Smartphone Tips: ಸ್ಮಾರ್ಟ್​ಫೋನ್ ಬಳಸುವ ಸಂದರ್ಭ ಒಂದಲ್ಲ ಒಂದು ದಿನ ಅದು ಹಾಳಾಗಿಯೇ ಆಗುತ್ತದೆ. ಆಗ ಫೋನ್ ಅನ್ನು ಸರ್ವೀಸ್ ಸೆಂಟರ್​ಗೆ ನೀಡುತ್ತಾರೆ. ಆದರೆ ಹೀಗೆ ಸ್ಮಾರ್ಟ್ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅವು ಯಾವುದು?, ಇಲ್ಲಿದೆ ನೋಡಿ ಮಾಹಿತಿ.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ
smartphone service center
Follow us
Vinay Bhat
|

Updated on: Dec 05, 2023 | 1:43 PM

ಇಂದಿನ ದಿನಗಳಲ್ಲಿ ಸ್ಮಾರ್ಟ್​ಫೋನ್ (Smartphone) ಬಳಕೆ ಅನಿವಾರ್ಯವಾಗಿದೆ. ಇದು ನಮ್ಮ ಅಗತ್ಯ ವಸ್ತುವಾಗಿ ಮಾರ್ಪಟ್ಟಿದೆ. ಸ್ಮಾರ್ಟ್​ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ. ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್​ಫೋನ್‌ನಲ್ಲಿ ಇರುತ್ತದೆ. ಆದರೆ, ಈ ಫೋನ್ ಒಂದಲ್ಲ ಒಂದು ದಿನ ಹಾಳಾಗುವುದು ಖಂಡಿತ. ಆಗ ಫೋನ್ ಅನ್ನು ಸರ್ವಿಸ್ ಸೆಂಟರ್​ನಲ್ಲಿ ನೀಡಬೇಕಾಗುತ್ತದೆ. ಹೀಗೆ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.

  • ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಹೊಂದಿದ್ದರೆ, ನೀವು ಮೊದಲು ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಬೇಕು. ಅಪ್ಲಿಕೇಶನ್‌ಗಳನ್ನು ಡಿಲೀಟ್ ಮಾಡುವ ಮೊದಲು ಪಾಸ್‌ವರ್ಡ್ ಮತ್ತು ಯೂಸರ್ ನೇಮ್ ಅನ್ನು ಬರೆದಿಟ್ಟುಕೊಳ್ಳುವುದು ಉತ್ತಮ.
  • ಸ್ಮಾರ್ಟ್‌ಫೋನ್‌ನ ನೋಟ್ ಪ್ಯಾಡ್‌ನಲ್ಲಿ ಪಾಸ್‌ವರ್ಡ್ ಮತ್ತು ವೈಯಕ್ತಿಕ ವಿವರಗಳನ್ನು ಬರೆಯುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಫೋನ್ ಅನ್ನು ಯಾರಿಗಾದರೂ ನೀಡುವಾಗ ನೋಟ್ ಪ್ಯಾಡ್​ನಲ್ಲಿ ಇರುವುದನ್ನು ಅಳಿಸಲು ಮರೆಯಬೇಡಿ.
  • ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಸದವರೇ ಇಲ್ಲ. ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳದಿರಲು, ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಿದ ನಂತರವೇ ನೀವು ಫೋನ್ ಅನ್ನು ಸರ್ವಿಸ್​ಗೆ ನೀಡಬೇಕು.
  • ಜಿಮೇಲ್ ಖಾತೆಯೂ ಲಾಗ್ ಔಟ್ ಆದ ನಂತರವೇ ಫೋನ್ ಸರ್ವಿಸ್​ ಕೇಂದ್ರಕ್ಕೆ ನೀಡಬೇಕು. ಜಿಮೇಲ್ ಖಾತೆಗೆ ಸಂಬಂಧಿಸಿದ ಎಲ್ಲಾ ವಿವರಗಳಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.
  • ಫೋನ್ ಗ್ಯಾಲರಿಯಲ್ಲಿ ಯಾವುದೇ ವೈಯಕ್ತಿಕ ಫೋಟೋಗಳಿದ್ದರೆ, ಅವುಗಳನ್ನು ಡಿಲೀಟ್ ಮಾಡಿ. ಫೋಟೋಗಳು ಬೇಕು ಎಂದಿದ್ದರೆ, ಅವುಗಳನ್ನು ಮೆಮೊರಿ ಕಾರ್ಡ್ ಅಥವಾ ಪೆನ್ ಡ್ರೈವ್‌ಗೆ ವರ್ಗಾಯಿಸಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ