AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ

Smartphone Tips: ಸ್ಮಾರ್ಟ್​ಫೋನ್ ಬಳಸುವ ಸಂದರ್ಭ ಒಂದಲ್ಲ ಒಂದು ದಿನ ಅದು ಹಾಳಾಗಿಯೇ ಆಗುತ್ತದೆ. ಆಗ ಫೋನ್ ಅನ್ನು ಸರ್ವೀಸ್ ಸೆಂಟರ್​ಗೆ ನೀಡುತ್ತಾರೆ. ಆದರೆ ಹೀಗೆ ಸ್ಮಾರ್ಟ್ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ಅವು ಯಾವುದು?, ಇಲ್ಲಿದೆ ನೋಡಿ ಮಾಹಿತಿ.

ಫೋನ್ ಹಾಳಾಗಿದೆಯೆಂದು ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ ಈ ಸ್ಟೋರಿ ಓದಿ
smartphone service center
Vinay Bhat
|

Updated on: Dec 05, 2023 | 1:43 PM

Share

ಇಂದಿನ ದಿನಗಳಲ್ಲಿ ಸ್ಮಾರ್ಟ್​ಫೋನ್ (Smartphone) ಬಳಕೆ ಅನಿವಾರ್ಯವಾಗಿದೆ. ಇದು ನಮ್ಮ ಅಗತ್ಯ ವಸ್ತುವಾಗಿ ಮಾರ್ಪಟ್ಟಿದೆ. ಸ್ಮಾರ್ಟ್​ಫೋನ್ ಕೇವಲ ಕರೆಗಳನ್ನು ಮಾಡಲು ಬಳಸಲಾಗುವ ಗ್ಯಾಜೆಟ್ ಮಾತ್ರವಲ್ಲದೆ, ಬ್ಯಾಂಕಿಂಗ್‌ನಿಂದ ಪ್ರಾರಂಭಿಸಿ ಅನೇಕ ಕಾರ್ಯಗಳಿಗೆ ಬಳಸಲಾಗುತ್ತದೆ. ವೈಯಕ್ತಿಕ ಫೋಟೋಗಳು, ಬ್ಯಾಂಕಿಂಗ್ ವಿವರಗಳು ಮತ್ತು ಇತರ ಹಲವು ವೈಯಕ್ತಿಕ ಡೇಟಾವು ಸ್ಮಾರ್ಟ್​ಫೋನ್‌ನಲ್ಲಿ ಇರುತ್ತದೆ. ಆದರೆ, ಈ ಫೋನ್ ಒಂದಲ್ಲ ಒಂದು ದಿನ ಹಾಳಾಗುವುದು ಖಂಡಿತ. ಆಗ ಫೋನ್ ಅನ್ನು ಸರ್ವಿಸ್ ಸೆಂಟರ್​ನಲ್ಲಿ ನೀಡಬೇಕಾಗುತ್ತದೆ. ಹೀಗೆ ಫೋನ್ ರಿಪೇರಿಗೆ ನೀಡುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎನ್ನುತ್ತಾರೆ ತಜ್ಞರು.

  • ನಿಮ್ಮ ಮೊಬೈಲ್‌ನಲ್ಲಿ ಯಾವುದೇ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳನ್ನು ಹೊಂದಿದ್ದರೆ, ನೀವು ಮೊದಲು ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಬೇಕು. ಅಪ್ಲಿಕೇಶನ್‌ಗಳನ್ನು ಡಿಲೀಟ್ ಮಾಡುವ ಮೊದಲು ಪಾಸ್‌ವರ್ಡ್ ಮತ್ತು ಯೂಸರ್ ನೇಮ್ ಅನ್ನು ಬರೆದಿಟ್ಟುಕೊಳ್ಳುವುದು ಉತ್ತಮ.
  • ಸ್ಮಾರ್ಟ್‌ಫೋನ್‌ನ ನೋಟ್ ಪ್ಯಾಡ್‌ನಲ್ಲಿ ಪಾಸ್‌ವರ್ಡ್ ಮತ್ತು ವೈಯಕ್ತಿಕ ವಿವರಗಳನ್ನು ಬರೆಯುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಫೋನ್ ಅನ್ನು ಯಾರಿಗಾದರೂ ನೀಡುವಾಗ ನೋಟ್ ಪ್ಯಾಡ್​ನಲ್ಲಿ ಇರುವುದನ್ನು ಅಳಿಸಲು ಮರೆಯಬೇಡಿ.
  • ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಬಳಸದವರೇ ಇಲ್ಲ. ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳದಿರಲು, ಎಲ್ಲಾ ಖಾತೆಗಳಿಂದ ಲಾಗ್ ಔಟ್ ಮಾಡಿದ ನಂತರವೇ ನೀವು ಫೋನ್ ಅನ್ನು ಸರ್ವಿಸ್​ಗೆ ನೀಡಬೇಕು.
  • ಜಿಮೇಲ್ ಖಾತೆಯೂ ಲಾಗ್ ಔಟ್ ಆದ ನಂತರವೇ ಫೋನ್ ಸರ್ವಿಸ್​ ಕೇಂದ್ರಕ್ಕೆ ನೀಡಬೇಕು. ಜಿಮೇಲ್ ಖಾತೆಗೆ ಸಂಬಂಧಿಸಿದ ಎಲ್ಲಾ ವಿವರಗಳಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ.
  • ಫೋನ್ ಗ್ಯಾಲರಿಯಲ್ಲಿ ಯಾವುದೇ ವೈಯಕ್ತಿಕ ಫೋಟೋಗಳಿದ್ದರೆ, ಅವುಗಳನ್ನು ಡಿಲೀಟ್ ಮಾಡಿ. ಫೋಟೋಗಳು ಬೇಕು ಎಂದಿದ್ದರೆ, ಅವುಗಳನ್ನು ಮೆಮೊರಿ ಕಾರ್ಡ್ ಅಥವಾ ಪೆನ್ ಡ್ರೈವ್‌ಗೆ ವರ್ಗಾಯಿಸಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು