AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಸ್ಮಾರ್ಟ್​ಫೋನ್​ಗೂ ಇದೆ ಎಕ್ಸ್​ಪೈರಿ ಡೇಟ್: ಎಷ್ಟು ವರ್ಷಗಳ ನಂತರ ಮೊಬೈಲ್ ಅನ್ನು ಬದಲಾಯಿಸಬೇಕು?

ನಿಮ್ಮ ಫೋನ್ ಕಂಪನಿಯಿಂದ ನವೀಕರಣಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದರೆ, ಅದು ಹಳೆಯದಾಗಿದೆ ಎಂದರ್ಥ. ಅಂತಹ ಪರಿಸ್ಥಿತಿಯಲ್ಲಿ, ಫೋನ್ ಭದ್ರತಾ ಅಪಾಯಗಳು ಸಮಸ್ಯೆಗಳನ್ನು ಎದುರಿಸಬಹುದು. ನೀವು ಈ ಸಮಸ್ಯೆಯನ್ನು ತಪ್ಪಿಸಲು ಬಯಸಿದರೆ, ಫೋನ್ ಅನ್ನು ಬದಲಾಯಿಸುವುದು ಉತ್ತಮ.

Tech Tips: ಸ್ಮಾರ್ಟ್​ಫೋನ್​ಗೂ ಇದೆ ಎಕ್ಸ್​ಪೈರಿ ಡೇಟ್: ಎಷ್ಟು ವರ್ಷಗಳ ನಂತರ ಮೊಬೈಲ್ ಅನ್ನು ಬದಲಾಯಿಸಬೇಕು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 18, 2024 | 4:42 PM

Share

ಮೊಬೈಲ್ ಇಂದು ಕೇವಲ ಕರೆ ಮಾಡಲು ಸೀಮಿತವಾಗಿಲ್ಲ. ಸ್ಮಾರ್ಟ್‌ಫೋನ್‌ಗಳು ಈಗ ಅದ್ಭುತ ಉಪಯುಕ್ತ ವೈಶಿಷ್ಟ್ಯಗಳನ್ನು ಹೊಂದಿದ್ದು, ಇದರ ಸಹಾಯದಿಂದ ನಮ್ಮ ಅನೇಕ ಕಾರ್ಯಗಳನ್ನು ಕ್ಷಣಾರ್ಧದಲ್ಲಿ ಪೂರ್ಣಗೊಳಿಸಬಹುದು. ಇದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಆದರೆ, ನೀವು ಬಳಸುತ್ತಿರುವ ಮೊಬೈಲ್‌ನ ಜೀವಿತಾವಧಿ ಎಷ್ಟು ಎಂದು ಎಂದಾದರೂ ಯೋಚಿಸಿದ್ದೀರಾ?. ಫೋನ್ ಹಾಳಾಗುವವರೆಗೂ ಕೆಲಸ ಮಾಡುತ್ತಿರುತ್ತದೆ ಎಂಬುದು ನಿಮ್ಮ ಉತ್ತರ ಆಗಿರಬಹುದು. ಆದರೆ, ನಿಮ್ಮ ಯೋಚನೆ ತಪ್ಪು. ಹಾಗಾದರೆ ಸ್ಮಾರ್ಟ್​ಫೋನ್ ಅನ್ನು ಎಷ್ಟು ವರ್ಷಗಳ ಕಾಲ ಬಳಸಬಹುದು?.

ಆ್ಯಪಲ್ ತನ್ನ ಹಳೆಯ ಮಾದರಿಗಳನ್ನು ಬೇಗನೆ ಕೊನೆಗೊಳಿಸುತ್ತದೆ. ಕಂಪನಿಯ ಪ್ರಕಾರ, ಫೋನ್ ಮಾರಾಟವಾಗಿ 5 ಅಥವಾ 7 ವರ್ಷಗಳಿಗಿಂತ ಕಡಿಮೆಯಿರುವಾಗ, ಆ ಫೋನ್ ಅನ್ನು ವಿಂಟೇಜ್ ವರ್ಗಕ್ಕೆ ಸೇರಿಸಲಾಗುತ್ತದೆ. ಆದರೆ, ಆಂಡ್ರಾಯ್ಡ್ ಫೋನ್ ಉತ್ಪಾದನಾ ಕಂಪನಿಯು ಫೋನ್ ಅನ್ನು ಎಷ್ಟು ಬಾರಿ ಬದಲಾಯಿಸಬೇಕು ಎಂದು ಉಲ್ಲೇಖಿಸಿಲ್ಲ. ಆದರೆ ಇದು ಅನೇಕ ವಿಷಯಗಳನ್ನು ಅವಲಂಬಿಸಿರುತ್ತದೆ.

ಮಾರುಕಟ್ಟೆಗೆ ಪ್ರತಿದಿನ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿವೆ. ಹೆಚ್ಚಿನ ಕಂಪನಿಗಳು ಹೊಸ ಫೋನ್‌ನೊಂದಿಗೆ ಮೂರು ವರ್ಷಗಳವರೆಗೆ ಓಎಸ್ (ಆಪರೇಟಿಂಗ್ ಸಿಸ್ಟಮ್) ಅಪ್‌ಗ್ರೇಡ್ ಮಾಡುವುದಾಗಿ ಗ್ರಾಹಕರಿಗೆ ಭರವಸೆ ನೀಡುತ್ತವೆ. ಇಷ್ಟೇ ಅಲ್ಲ, ಓಎಸ್ ಅಪ್‌ಗ್ರೇಡ್‌ಗಳ ಹೊರತಾಗಿ, ಕೆಲವು ಕಂಪನಿಗಳು ಗ್ರಾಹಕರ ಸುರಕ್ಷತೆಗಾಗಿ ಐದು ವರ್ಷಗಳವರೆಗೆ ಭದ್ರತಾ ನವೀಕರಣಗಳನ್ನು ಕೂಡ ನೀಡುತ್ತಿವೆ.

ನಿಮ್ಮ ಫೋನ್‌ಗೆ ನವೀಕರಣಗಳು ಅಂದರೆ ಅಪ್ಡೇಟ್ ಬರುವುದು ನಿಂತಾಗ, ಫೋನ್ ಬದಲಾಯಿಸುವ ಸಮಯ ಬಂದಿದೆ ಎಂದು ಅರ್ಥಮಾಡಿಕೊಳ್ಳಿ. ಕಂಪನಿಗಳು ಅಪ್ಡೇಟ್ ನೀಡುವುದು ಏಕೆಂದರೆ ನಿಮ್ಮ ಸ್ಮಾರ್ಟ್​ಫೋನ್​ಗಳಿಗೆ ಯಾವುದೇ ತೊಂದರೆ ಅಥವಾ ವೈರಸ್ ಅಟ್ಯಾಕ್ ಆಗದಿರಲಿ ಮತ್ತು ಸುರಕ್ಷತೆಗಾಗಿ ನವೀಕರಣಗಳನ್ನು ನೀಡಲಾಗುತ್ತದೆ. ಈ ಅಪ್ಡೇಟ್ ನೀಡುವುದನ್ನು ಕಂಪನಿ ನಿಲ್ಲಿಸಿದಾಗ ಫೋನ್ ಬದಲಾವಣೆ ಮಾಡುವುದು ಉತ್ತಮ.

ಇದನ್ನೂ ಓದಿ: ನಿಮ್ಮ ಇನ್​ಸ್ಟಾಗ್ರಾಮ್ ರೀಲ್ ವೈರಲ್ ಆಗದಿರಲು ಇದೇ ಕಾರಣ: ಸೆಟ್ಟಿಂಗ್ಸ್​ನಲ್ಲಿ ಜಸ್ಟ್ ಹೀಗೆ ಮಾಡಿ

ಇದರಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್ ಅಥವಾ ದುಬಾರಿ ಬೆಲೆಯ ಫೋನ್ ಎಂಬ ಬೇಧಭಾವ ಬರುವುದಿಲ್ಲ. ಯಾವುದೇ ಫೋನಾಗಿದ್ದರೂ ಸಾಫ್ಟ್‌ವೇರ್ ಅಪ್ಡೇಟ್ ನೀಡುವುದು ನಿಲ್ಲಿಸಿದರೆ ಅದರ ಆಯುಷ್ಯ ಮುಗಿಯಿತು ಎಂದರ್ಥ. 10,000 ರೂ. ಮೌಲ್ಯದ ಅಗ್ಗದ ಬಜೆಟ್ ಸ್ಮಾರ್ಟ್‌ಫೋನ್‌ಗಳ ಉತ್ಪಾದನಾ ಕಂಪನಿಗಳು ಸಾಮಾನ್ಯವಾಗಿ ಹೆಚ್ಚು ಸಮಯ ಗ್ರಾಹಕರಿಗೆ ಓಎಸ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಒದಗಿಸುವ ಭರವಸೆ ನೀಡುವುದಿಲ್ಲ.

ಆದರೆ ಮತ್ತೊಂದೆಡೆ, ಫ್ಲ್ಯಾಗ್‌ಶಿಪ್ ವೈಶಿಷ್ಟ್ಯಗಳೊಂದಿಗೆ ಬರುವ ದುಬಾರಿ ಮೊಬೈಲ್‌ಗಳ ಕಂಪನಿಗಳು ಗ್ರಾಹಕರಿಗೆ OS ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಹೆಚ್ಚು ಸಮಯ ನೀಡುತ್ತವೆ. ಇದರಿಂದಾಗಿ ಈ ಮಾದರಿಗಳು ಸುರಕ್ಷಿತವಾಗಿ ಉಳಿಯುತ್ತವೆ ಮತ್ತು ದೀರ್ಘಾವಧಿಯ ವರೆಗೆ ಉಪಯೋಗಿಸಬಹುದು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ