AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ನಿಷೇಧವಾದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?

WhatsApp Tricks: ಫಾರ್ವರ್ಡ್ ಆಗಿ ಬಂದ ಸುಳ್ಳು ಸುದ್ದಿಗಳನ್ನು ಅರಿಯದೆ ಅದನ್ನು ಇತರರಿಗೆ ಫಾರ್ವರ್ಡ್ ಮಾಡುವುದು ಅಥವಾ ಬ್ರಾಡ್​ಕಾಸ್ಟ್ ಲಿಸ್ಟ್ ಅನ್ನು ಅತಿಯಾಗಿ ಉಪಯೋಗಿಸುವುದರಿಂದಲೂ ನಿಮ್ಮ ಖಾತೆ ನಿಷೇಧಕ್ಕೆ ಒಳಗಾಗುತ್ತದೆ.

WhatsApp Ban: ನಿಷೇಧವಾದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?
WhatsApp
Vinay Bhat
|

Updated on: Apr 03, 2023 | 6:58 AM

Share

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷಶನ್ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಬಳಸುತ್ತಿರುವವರ ಸಂಖ್ಯೆ ಕೋಟಿ ಗಟ್ಟಲೆಯಿದೆ. ತನ್ನ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಹೊಸ ಹೊಸ ಫೀಚರ್​ಗಳನ್ನು ಬಿಡುತ್ತಿರುವ ವಾಟ್ಸ್​ಆ್ಯಪ್ ಪ್ರೈವಸಿಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ವಹಿಸುತ್ತದೆ. 2021 ರಲ್ಲಿ ನೂತನ ಐಟಿ ನಿಯಮ (IT Rule 2021) ಬಂದ ಮೇಲಂತು ಸುರಕ್ಷತೆ ಬಗ್ಗೆ ಗಮನ ಹರಿಸುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಒಂದು ಚಿಕ್ಕ ತಪ್ಪಾದರು ನಿಮ್ಮ ಅಕೌಂಟ್ ನಿಷೇಧಕ್ಕೆ (WhatsApp Ban) ಒಳಗಾಗುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಪ್ರತಿ ತಿಂಗಳು ಮಿಲಿಯನ್ ವಾಟ್ಸ್​ಆ್ಯಪ್ ಅಕೌಂಟ್ ನಿಷೇಧವಾಗುತ್ತದೆ.

ನೀವು ತಿಳಿಯದೆ ಮಾಡುವ ಸಣ್ಣ ತಪ್ಪು ಕೂಡ ನಿಮ್ಮ ವಾಟ್ಸ್​ಆ್ಯಪ್ ಖಾತೆ ನಿಷೇಧಕ್ಕೆ ಗುರಿಯಾಗಬಹುದು. ಫಾರ್ವರ್ಡ್ ಆಗಿ ಬಂದ ಸುಳ್ಳು ಸುದ್ದಿಗಳನ್ನು ಅರಿಯದೆ ಅದನ್ನು ಇತರರಿಗೆ ಫಾರ್ವರ್ಡ್ ಮಾಡುವುದು ಅಥವಾ ಬ್ರಾಡ್​ಕಾಸ್ಟ್ ಲಿಸ್ಟ್ ಅನ್ನು ಅತಿಯಾಗಿ ಉಪಯೋಗಿಸುವುದರಿಂದಲೂ ನಿಮ್ಮ ಖಾತೆ ನಿಷೇಧಕ್ಕೆ ಒಳಗಾಗುತ್ತದೆ. ಗುಡ್​ ಮಾರ್ನಿಂಗ್ ಮೆಸೇಜ್ ಅನ್ನು ಬ್ರಾಡ್​ಕಾಸ್ಟ್ ಮೂಲಕ ಹೆಚ್ಚು ಹೆಚ್ಚು ಜನರಿಗೆ ಕಳುಹಿಸಿದರೆ ಅದು ಸ್ಪ್ಯಾಮ್ ಮೆಸೇಜ್ ಆಗಬಹುದು. ಇದರಿಂದ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ ಆಗುವ ಸಾಧ್ಯತೆ ಇರುತ್ತದೆ.

Tech Tips: ಮೊಬೈಲ್​ನಲ್ಲಿ ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌ ಸೆಂಡ್ ಮಾಡುವುದು ಹೇಗೆ?

ಇದನ್ನೂ ಓದಿ
Image
WhatsApp Ban: ಭಾರತದಲ್ಲಿ ಬರೋಬ್ಬರಿ 45 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ಎಚ್ಚರ ವಹಿಸಿ
Image
OnePlus 10R 5G: 150W SuperVOOC ಚಾರ್ಜರ್​ನ ಒನ್​ಪ್ಲಸ್‌ 10R ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಆಫರ್ ಮಿಸ್ ಮಾಡ್ಬೇಡಿ
Image
boAt Lunar Connect Pro: ಸ್ಟೈಲಿಶ್ ಜತೆಗೆ ಸ್ಮಾರ್ಟ್ ವಾಚ್ ಪ್ರಿಯರಿಗಾಗಿ ಹೊಸ ಬೋಟ್ ವಾಚ್
Image
Oppo A1x 5G: ಭರ್ಜರಿ 5,000mAh ಬ್ಯಾಟರಿಯ ಒಪ್ಪೊ ಸ್ಮಾರ್ಟ್​ಫೋನ್

ಕಳೆದ ಫೆಬ್ರವರಿ ತಿಂಗಳಲ್ಲಿ ಕೇವಲ ಭಾರತದಲ್ಲೇ 45 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ನಿಷೇಧಿಸಲಾಗಿತ್ತು. ಇದಕ್ಕೆ ಮುಖ್ಯ ಕಾರಣ ತಪ್ಪು ಮಾಹಿತಿಗಳನ್ನು ಶೇರ್ ಮಾಡಿರುವುದು, ಸ್ಕ್ಯಾಮ್ ಮೆಸೇಜ್​ಗಳನ್ನು ಫಾರ್ವರ್ಡ್ ಮಾಡಿರುವುದು. ಹೀಗೆ ಯಾವುದೇ ಅಹಿತಕರ ಚಟುವಟಿಕೆ ಕಂಡುಬಂದಲ್ಲಿ ನಿಮ್ಮ ಖಾತೆ ಬ್ಯಾನ್ ಆಗುತ್ತದೆ.

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, “ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್ಟುಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ. ವರ್ಷಗಳಲ್ಲಿ, ನಮ್ಮ ಬಳಕೆದಾರರನ್ನು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿ ಸುರಕ್ಷಿತವಾಗಿರಿಸಲು ನಾವು ಕೃತಕ ಬುದ್ಧಿಮತ್ತೆ ಮತ್ತು ಇತರ ಅತ್ಯಾಧುನಿಕ ತಂತ್ರಜ್ಞಾನ, ಡೇಟಾ ವಿಜ್ಞಾನಿಗಳು, ತಜ್ಞರು ಮತ್ತು ಇನ್ನಿತರ ಪ್ರಕ್ರಿಯೆಗಳಲ್ಲಿ ಸತತವಾಗಿ ಹೂಡಿಕೆ ಮಾಡಿದ್ದೇವೆ” ಎಂದಿದ್ದಾರೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.

ವಾಟ್ಸ್​ಆ್ಯಪ್​​ ಖಾತೆ ನಿಷೇಧವಾದರೆ ರಿಕವರಿ ಮಾಡುವುದು ಹೇಗೆ?:

  • ವಾಟ್ಸ್​ಆ್ಯಪ್​ ಅನ್ನು ಇಮೇಲ್ ಮಾಡಿ ಅಥವಾ ಆ್ಯಪ್​ನಲ್ಲಿ ರಿವ್ಯೂ ರಿಕ್ವೆಸ್ಟ್ ಆಯ್ಕೆಯನ್ನು ಟ್ಯಾಪ್ ಮಾಡಿ.
  • ರಿವ್ಯೂ ರಿಕ್ವೆಸ್ಟ್ ನೀಡಿದ ನಂತರ ಇದು ನಿಮ್ಮ ಸಮಸ್ಯೆಯನ್ನು ಪರಿಶೀಲಿಸಿ ಮತ್ತೆ ನಿಮಗೆ ಮುಂದಿನ ಹಂತದ ಮಾಹಿತಿಯನ್ನು ಒದಗಿಸುತ್ತದೆ.
  • ಈಗ ವಾಟ್ಸ್​ಆ್ಯಪ್​ ನಿಮ್ಮ ಬಗ್ಗೆ ಬಂದಿರುವ ದೂರುಗಳನ್ನು ಪರಿಶೀಲಿಸಿ ಬಳಿಕ ನಿಮ್ಮನ್ನು ಸಂಪರ್ಕಿಸುತ್ತದೆ.
  • ವಾಟ್ಸ್​ಆ್ಯಪ್​ನಲ್ಲಿ ರಿವ್ಯೂ ರಿಕ್ವೆಸ್ಟ್​ ನೀಡಿದಾಗ ನಿಮಗೆ SMS ಮೂಲಕ ಕಳುಹಿಸಲಾದ 6-ಅಂಕಿಯ ನೋಂದಣಿ ಕೋಡ್ ಅನ್ನು ನಮೂದಿಸಿ.
  • ಕೋಡ್ ನಮೂದಿಸಿದ ನಂತರ ನಿಮಗೆ ರಿವ್ಯೂ ಬರೆಯಲು ಅನುಮತಿ ಸಿಗುತ್ತದೆ ಜೊತೆಗೆ ನಿಮ್ಮ ಬಗ್ಗೆ ಬಂದ ದೂರಿನ ಬಗ್ಗೆ ಮಾತನಾಡಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್