AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ

ಕೇಂದ್ರ ಸರ್ಕಾರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಒಂದು ವೇಳೆ ಈ ಭದ್ರತಾ ತಂತ್ರವನ್ನು ಬಳಸದಿದ್ದರೆ ಖಂಡಿತ ದೊಡ್ಡ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಹೇಳಿದೆ. ಅಷ್ಟಕ್ಕೂ ಕೇಂದ್ರ ಯಾಕಾಗಿ ಈ ಎಚ್ಚರಿಕೆ ವಹಿಸಲು ಹೇಳಿದೆ. ಸೈಬರ್​​ ಕಳ್ಳರು ಪತ್ತೆ ಮಾಡಿದ ಮೋಸದ ಯಂತ್ರ ಯಾವುದು? ಒಂದು ವೇಳೆ ಈ ಮೋಸಕ್ಕೆ ಬಲಿಯಾದರೆ, ಏನು ಮಾಡುವುದು, ಕೇಂದ್ರ ನೀಡಿದ ಭದ್ರತಾ ತಂತ್ರ ಏನು? 

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
| Edited By: |

Updated on: Jul 13, 2024 | 3:10 PM

Share

ಕೇಂದ್ರ ಸರ್ಕಾರವು ಇತ್ತಿಚೇಗೆ ಎಲ್ಲ ಆಂಡ್ರಾಯ್ಡ್​​​​ ಬಳಕೆದಾರರಿಗೆ ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (CERT-In) ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಹೊಸ ಭದ್ರತಾ ಎಚ್ಚರಿಕೆಯನ್ನು ನೀಡಿದೆ. ಅಷ್ಟಕ್ಕೂ ಭಾರತ ಸರ್ಕಾರ ನೀಡಿದ ಎಚ್ಚರಿಕೆ ಏನು? ನಿಮ್ಮ ಸೂಕ್ಷ್ಮ ಮಾಹಿತಿಯನ್ನು ಪಡೆಯಲು ಮತ್ತು ನಿಮ್ಮ ಫೋನ್‌ನಲ್ಲಿ ಅನಿಯಂತ್ರಿತ ಕೋಡ್​​ಗಳನ್ನು ತರುವ ಮೂಲಕ ಸೈಬರ್​​​ ಕಳ್ಳರು ನಿಮ್ಮ ವೈಯಕ್ತಿಕ ಡೇಟಾಗಳನ್ನು ಪಡೆಯಲು ಹೊಸ ಯಂತ್ರವನ್ನು ಹುಡುಕ್ಕಿದ್ದಾರೆ.

CERT-In ನಿಂದ ನೀಡಿದ ಭದ್ರತಾ ಬುಲೆಟಿನ್ ಪ್ರಕಾರ, ಸೈಬರ್​​​ ಕಳ್ಳರು ಫ್ರೇಮ್‌ವರ್ಕ್, ಸಿಸ್ಟಮ್, Google Play ಸಿಸ್ಟಮ್, RM ಘಟಕಗಳು, MediaTek ಘಟಕಗಳು, ಇಮ್ಯಾಜಿನೇಶನ್ ಘಟಕಗಳು, Qualcomm ಕಾಂಪೊನೆಂಟ್‌ಗಳು ಮತ್ತು Qualcomm ಕ್ಲೋಸ್-ಸೋರ್ಸ್ಡ್ ಕಾಂಪೊನೆಂಟ್‌ಗಳಲ್ಲಿ ಇದನ್ನು ಅಳವಡಿಸಿದ್ದಾರೆ. ಇದು Android ಆವೃತ್ತಿ 12, 12L, 13, ಮತ್ತು 14 ರ ಮೇಲೆ ಪರಿಣಾಮ ಬೀರುತ್ತವೆ.

ಇನ್ನು ನಮ್ಮ ಭಾರತದಲ್ಲಿ ಈ ಆವೃತ್ತಿ ಫೋನ್​​​ಗಳನ್ನು ಬಳಕೆ ಮಾಡುವವರ ಸಂಖ್ಯೆ 10 ಮಿಲಿಯನ್‌ಗಿಂತಲೂ ಹೆಚ್ಚಿದೆ ಎಂದು ಹೇಳಲಾಗಿದೆ. Samsung, Realme, OnePlus, Xiaomi ಮತ್ತು Vivo ನಂತಹ ಬ್ರ್ಯಾಂಡ್‌ಗಳು ಈ ಸಮಸ್ಯೆ ಬಗ್ಗೆ ಕಾಳಜಿಯನ್ನು ವಹಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಒಂದು ವೇಳೆ ಇಂತಹ ಸಮಸ್ಯೆಗಳು ಕಂಡು ಬಂದರೆ ತಕ್ಷಣ ಅದರ ಬಗ್ಗೆ ಎಚ್ಚರಿಕೆಯನ್ನು ವಹಿಸಿ ಎಂದು ಕೇಂದ್ರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಸಿಮ್ ಬದಲಾಯಿಸಲು, ನಂಬರ್ ಪೋರ್ಟ್ ಮಾಡಲು ಜುಲೈ 1ರಿಂದ ಹೊಸ ನಿಯಮ

ಇಂತಹ ಸೈಬರ್​​ ಕಳ್ಳಾಟದಿಂದ ಕಾಪಾಡಲು ಈಗಾಗಲೇ ಭದ್ರತಾ ಪ್ಯಾಚ್ ಬಿಡುಗಡೆ ಮಾಡಲಾಗಿದೆ. ಇದು ಇಂತಹ ಸಮಸ್ಯೆಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತದೆ. ಇದರ ಜತೆಗೆ ಹೆಚ್ಚಿನ ಫೋನ್ ಬ್ರ್ಯಾಂಡ್‌ಗಳಿಗೆ ಈ ಸಮಸ್ಯೆಗಳ ಕುರಿತು ಸೂಚನೆ ನೀಡುತ್ತದೆ. ಈ ತಂತ್ರದ ಬಗ್ಗೆ ಸೆಟ್ಟಿಂಗ್‌ಗಳು, ಸಿಸ್ಟಮ್ ಅಪ್‌ಡೇಟ್, ಸಾಫ್ಟ್‌ವೇರ್​​ಗಳಲ್ಲಿ ನವೀಕರಣದ ಮಾಡಲಾಗಿದೆ. ಈ ಬಗ್ಗೆ ನೀವು ಒಮ್ಮೆ ಪರಿಶೀಲನೆ ಮಾಡಬಹುದು. ಹಾಗೂ ಈ ಭದ್ರತಾ ಪ್ಯಾಚ್ ಅಕ್ರಮ ವೆಬ್‌ಸೈಟ್‌, ಲಿಂಕ್​​ಗಳನ್ನು ಓಪನ್​​ ಮಾಡದಂತೆ ಎಚ್ಚರಿಕೆಯನ್ನು ನೀಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!