AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!

ಟ್ರಿಪ್ ಅಶ್ಯೂರೆನ್ಸ್ ಅಥವಾ ಪ್ರಯಾಣದ ಖಾತರಿ ಎಂಬ ಹೊಸ ಆಯ್ಕೆಯನ್ನು ಟ್ರೈನ್​ಮ್ಯಾನ್ ಆ್ಯಪ್ ಗ್ರಾಹಕರಿಗೆ ಒದಗಿಸುತ್ತಿದೆ. ವೈಟಿಂಗ್​​ಲಿಸ್ಟ್​ನಲ್ಲಿರುವ ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಬಗ್ಗೆ ಈ ಆಯ್ಕೆಯ ಮೂಲಕ ಆ್ಯಪ್ ಖಾತರಿ ನೀಡುತ್ತದೆ.

ರೈಲು ಟಿಕೆಟ್ ಕನ್​ಫರ್ಮ್ ಆಗಿಲ್ಲವೇ? ಈ ಆ್ಯಪ್​ನಲ್ಲಿ ಉಚಿತವಾಗಿ ಸಿಗುತ್ತೆ ಫ್ಲೈಟ್ ಟಿಕೆಟ್!
ಸಾಂದರ್ಭಿಕ ಚಿತ್ರImage Credit source: PTI
TV9 Web
| Updated By: Ganapathi Sharma|

Updated on:Nov 25, 2022 | 6:15 PM

Share

ರೈಲು ಪ್ರಯಾಣಕ್ಕೆ ಕಾಯ್ದಿರಿಸಿದ ಟಿಕೆಟ್ (Train Ticket) ವೇಟಿಂಗ್ ಲಿಸ್ಟ್​ನಲ್ಲಿದ್ದರೆ (Waiting List) ಪ್ರಯಾಣಿಕರಿಗೆ ಆಗುವ ಆತಂಕ ಅಷ್ಟಿಷ್ಟಲ್ಲ. ವಾರಾಂತ್ಯದಲ್ಲಂತೂ ವೇಟಿಂಗ್ ಲಿಸ್ಟ್​ನಲ್ಲಿರುವ ಟಿಕೆಟ್ ಕನ್​ಫರ್ಮ್ ಆಗುತ್ತದೆ ಎಂಬ ಯಾವ ಖಾತರಿಯೂ ಇರುವುದಿಲ್ಲ. ದೂರ ಪ್ರಯಾಣಕ್ಕೆಂದು ಕಾಯ್ದಿರಿಸಿದ ಟಿಕೆಟ್ ಕೊನೆಯ ಕ್ಷಣದಲ್ಲಿ ರದ್ದಾದರೋ? ಎಲ್ಲ ಲೆಕ್ಕಾಚಾರಗಳು, ಯೋಜನೆಗಳು ತಲೆಕೆಳಗಾಗುತ್ತವೆ. ಕೊನೆಯ ಕ್ಷಣದಲ್ಲಿ ಆಗುವ ಈ ತೊಂದರೆಗೆ ಪರಿಹಾರವಾಗಿ ಉಚಿತವಾಗಿ ವಿಮಾನ ಪ್ರಯಾಣದ ಟಿಕೆಟ್ (Flight Ticket) ನೀಡುತ್ತಿದೆ ಟಿಕೆಟ್ ಬುಕಿಂಗ್ ಆ್ಯಪ್ ಟ್ರೈನ್​ಮ್ಯಾನ್ (Trainman). ಈ ಆ್ಯಪ್​ನ ಮೂಲಕ ಕಾಯ್ದಿರಿಸಿದ ರೈಲು ಟಿಕೆಟ್​ ವೇಟಿಂಗ್​ ಲಿಸ್ಟ್​ನಲ್ಲಿದ್ದು ಕನ್​ಫರ್ಮ್ ಆಗದಿದ್ದರೆ ಅಂಥ ಪ್ರಯಾಣಿಕರು ಉಚಿತವಾಗಿ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ.

ಟ್ರೈನ್​ಮ್ಯಾನ್ ಆ್ಯಪ್​ನಿಂದ ಟ್ರಿಪ್ ಅಶ್ಯೂರೆನ್ಸ್

ಟ್ರಿಪ್ ಅಶ್ಯೂರೆನ್ಸ್ ಅಥವಾ ಪ್ರಯಾಣದ ಖಾತರಿ ಎಂಬ ಹೊಸ ಆಯ್ಕೆಯನ್ನು ಟ್ರೈನ್​ಮ್ಯಾನ್ ಆ್ಯಪ್ ಗ್ರಾಹಕರಿಗೆ ಒದಗಿಸುತ್ತಿದೆ. ವೈಟಿಂಗ್​​ಲಿಸ್ಟ್​ನಲ್ಲಿರುವ ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಬಗ್ಗೆ ಈ ಆಯ್ಕೆಯ ಮೂಲಕ ಆ್ಯಪ್ ಖಾತರಿ ನೀಡುತ್ತದೆ. ಕಾಯ್ದಿರಿಸಿದ ಟಿಕೆಟ್​ನ ಸ್ಥಿತಿಗತಿ ಏನಿದೆ ಎಂಬುದನ್ನು ಪರಿಶೀಲಿಸುವ ಆಯ್ಕೆಯೂ ಈ ಆ್ಯಪ್​ನಲ್ಲಿದೆ. ವೈಟಿಂಗ್ ಲಿಸ್ಟ್​ನಲ್ಲಿರುವ ಟಿಕೆಟ್ ಸಿಗುವ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ತೋರಿಸುವ ‘ಪ್ರೆಡಿಕ್ಷನ್ ಮೀಟರ್’ ಆ್ಯಪ್​ನಲ್ಲಿದೆ. ಚಾರ್ಟ್ ಸಿದ್ಧಪಡಿಸಿದ ಬಳಿಕವೂ ಟಿಕೆಟ್ ಕನ್​ಫರ್ಮ್ ಆಗಿಲ್ಲವೆಂದಾದರೆ ಆಗ ‘ಟ್ರಿಪ್ ಅಶ್ಯೂರೆನ್ಸ್’ ಆಯ್ಕೆಯು ಪ್ರಯಾಣಿಕರ ನೆರವಿಗೆ ಬರುತ್ತದೆ. ಕೊನೆಯ ಕ್ಷಣದ ಪರ್ಯಾಯ ಪ್ರಯಾಣದ ಆಯ್ಕೆಯನ್ನು ಪ್ರಯಾಣಿಕರಿಗೆ ಅದು ನೀಡುತ್ತದೆ.

ಪ್ರಯಾಣಿಕರ ಟಿಕೆಟ್​ ಕನ್​ಫರ್ಮ್ ಆಗುವ ಬಗ್ಗೆ ‘ಪ್ರೆಡಿಕ್ಷನ್ ಮೀಟರ್’ ಶೇಕಡಾ 90 ಅಥವಾ ಅದಕ್ಕಿಂತ ಹೆಚ್ಚಿನ ಸಾಧ್ಯತೆ ತೋರಿಸುತ್ತಿದ್ದರೆ ‘ಟ್ರಿಪ್ ಅಶ್ಯೂರೆನ್ಸ್ ಶುಲ್ಕ’ವೆಂದು 1 ರೂಪಾಯಿಯನ್ನು ಪ್ರಯಾಣಿಕರು ಪಾವತಿಸಬೇಕಾಗುತ್ತದೆ. ಟಿಕೆಟ್ ಕನ್​ಫರ್ಮ್ ಆಗುವ ಸಾಧ್ಯತೆ ಶೇಕಡಾ 90ಕ್ಕಿಂತ ಕಡಿಮೆ ಇದ್ದರೆ ಟಿಕೆಟ್​ನ ಶ್ರೇಣಿಗೆ ಅನುಗುಣವಾಗಿ ಸಾಮಾನ್ಯ ಶುಲ್ಕ ಪಾವತಿಸಬೇಕಾಗುತ್ತದೆ. ಚಾರ್ಟ್ ಸಿದ್ಧವಾಗುವ ವೇಳೆಗೆ ಟಿಕೆಟ್ ಕನ್​ಫರ್ಮ್ ಆದರೆ ಈ ಶುಲ್ಕ ಪ್ರಯಾಣಿಕರ ಖಾತೆಗೆ ರಿಫಂಡ್ ಆಗುತ್ತದೆ. ಒಂದು ವೇಳೆ ಟಿಕೆಟ್ ಕನ್​ಫರ್ಮ್ ಆಗದಿದ್ದರೆ ‘ಟ್ರೈನ್​ಮ್ಯಾನ್’ ಉಚಿತವಾಗಿ ವಿಮಾನ ಪ್ರಯಾಣದ ಟಿಕೆಟ್ ನೀಡುತ್ತದೆ.

ಯಾವೆಲ್ಲ ರೈಲುಗಳ ಟಿಕೆಟ್ ಕಾಯ್ದಿರಿಸುವಿಕೆಗೆ ಅನ್ವಯ?

ಸದ್ಯ ರಾಜಧಾನಿ ರೈಲುಗಳು ಮತ್ತು ಇತರ 130 ರೈಲುಗಳ ಟಿಕೆಟ್ ಕಾಯ್ದಿರಿಸುವಿಕೆಗೆ ‘ಟ್ರೈನ್​ಮ್ಯಾನ್’ ಉಚಿತ ವಿಮಾನ ಪ್ರಯಾಣದ ಟಿಕೆಟ್ ಆಫರ್ ನೀಡುತ್ತಿದೆ. ಭಾರತೀಯ ರೈಲ್ವೆಯ ಅಧಿಕೃತ ಆ್ಯಪ್ ಐಆರ್​ಸಿಟಿಸಿಯಂತೆಯೇ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಯಾಣಿಕರಿಗೆ ಪ್ರಯಾಸರಹಿತ ಪ್ರಯಾಣದ ಅನುಭವವನ್ನು ನೀಡುವುದೇ ಸದ್ಯದ ಗುರಿಯಾಗಿದೆ ಎಂದು ‘ಟ್ರೈನ್​ಮ್ಯಾನ್’ ಹೇಳಿದೆ. ‘ಪ್ರೆಡಿಕ್ಷನ್ ಮೀಟರ್’ ಶೇಕಡಾ 94ರಷ್ಟು ನಿಖರ ಮತ್ತು ಕರಾರುವಕ್ಕಾದ ಮಾಹಿತಿ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇಷ್ಟಾಗಿಯೂ ಟಿಕೆಟ್ ಕನ್​ಫರ್ಮ್ ಆಗದಿದ್ದರೆ ‘ಟ್ರಿಪ್ ಅಶ್ಯೂರೆನ್ಸ್’ ಸೇವೆ ಪ್ರಯಾಣಿಕರಿಗೆ ಸದಾ ಸಿದ್ಧವಿದೆ.

ವಿಮಾನ ನಿಲ್ದಾಣ ಇರುವ ನಗರಗಳಿಗೆ ಮಾತ್ರ ಅನ್ವಯ

ವಿಮಾನ ನಿಲ್ದಾಣ ಇರುವ ನಗರಗಳಿಗೆ ಮಾತ್ರ ‘ಟ್ರಿಪ್ ಅಶ್ಯೂರೆನ್ಸ್’ ಸೇವೆಯಡಿ ಉಚಿತ ವಿಮಾನ ಪ್ರಯಾಣದ ಟಿಕೆಟ್ ದೊರೆಯುತ್ತದೆ. ದೇಶದಾದ್ಯಂತ ಇತರ ನಗರಗಳಿಗೆ ಪರ್ಯಾಯ ಪ್ರಯಾಣದ ವ್ಯವಸ್ಥೆ ಒದಗಿಸಲು ಕಂಪನಿ ಪ್ರಯತ್ನಿಸುತ್ತಿದೆ. ಆ ಮೂಲಕ ಪ್ರಯಾಸರಹಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಮುಂದಾಗುತ್ತಿದೆ ಎಂದು ‘ಟ್ರೈನ್​ಮ್ಯಾನ್’ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೀತ್ ಚಿರಾನಿಯಾ ತಿಳಿಸಿದ್ದಾರೆ.

Published On - 6:09 pm, Fri, 25 November 22

ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ