AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ಭಾರತದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ

ಟೆಸ್ಲಾ ಸಿಎಒ ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter) ಭಾರತದ ಕೆಲ ಭಾಗಗಳಲ್ಲಿ ಡೌನ್ ಆಗಿದೆ. ಬಳಕೆದಾರರು ಎಷ್ಟೇ ಪ್ರಯತ್ನಿಸಿದರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡೌನ್​ಡಿಟೆಕ್ಟರ್ ಮಾಹಿತಿ ನೀಡಿದೆ.

Twitter Down: ಭಾರತದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
ಟ್ವಿಟರ್
TV9 Web
| Updated By: Vinay Bhat|

Updated on:Nov 04, 2022 | 9:35 AM

Share

ಕಳೆದ ಕೆಲವು ವಾರಗಳಿಂದ ಪ್ರಸಿದ್ಧ ಸಾಮಾಜಿಕ ಜಾಲತಾಣಗಳು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದೆ. ಇತ್ತೀಚೆಗಷ್ಟೆ ವಾಟ್ಸ್​ಆ್ಯಪ್ (WhatsApp), ಇನ್​ಸ್ಟಾಗ್ರಾಮ್ ದಿಢೀರ್ ಕಾರ್ಯನಿರ್ವಹಿಸದೆ ತೊಂದರೆಗೆ ಒಳಗಾಗಿತ್ತು. ಇದೀಗ ಟ್ವಿಟರ್ ಸರದಿ. ಟೆಸ್ಲಾ ಸಿಎಒ ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter) ಭಾರತದ ಕೆಲ ಭಾಗಗಳಲ್ಲಿ ಡೌನ್ ಆಗಿದೆ. ಬಳಕೆದಾರರು ಎಷ್ಟೇ ಪ್ರಯತ್ನಿಸಿದರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡೌನ್​ಡಿಟೆಕ್ಟರ್ ಮಾಹಿತಿ ನೀಡಿದ್ದು, ಡೆಸ್ಕ್​ಟಾಪ್ (Desktop) ಬಳಕೆದಾರರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡಿದೆಯಂತೆ. ಭಾರತೀಯ ಕಾಲಮಾನದ ಪ್ರಕಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಸಮಸ್ಯೆ ಕಂಡುಬಂದಿದೆ.

ಅನೇಕ ಭಾಗದಲ್ಲಿ ಟ್ವಿಟರ್ ಡೌನ್ ಆಗಿದ್ದರ ಕುರಿತು ಅಲ್ಲಿನ ಬಳಕೆದಾರರು ಮಾಹಿತಿ ಹಂಚಿಕೊಂಡಿದ್ದರು. ಟ್ವಿಟರ್​ನಲ್ಲಿ ಪ್ರಸ್ತುತ ಟ್ವಿಟರ್ ಡೌನ್ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ. ಬಳಕೆದಾರರು ಮೀಮ್​ಗಳನ್ನು ಹರಿಬಿಡುತ್ತಿದ್ದು, ಟ್ವಿಟರ್ ಡೌನ್ ಆಗಿರುವುದೋ, ನಮ್ಮ ಇಂಟರ್​ನೆಟ್ಟೋ ತಿಳಿಯುತ್ತಿಲ್ಲ ಎಂದು ಟ್ವೀಟ್ ಮಾಡುತ್ತಿದ್ದಾರೆ.

ಇನ್​ಸ್ಟಾಗ್ರಾಮ್- ವಾಟ್ಸ್​ಆ್ಯಪ್ ಕೂಡ ಡೌನ್ ಆಗಿತ್ತು:

ಮೊನ್ನೆಯಷ್ಟೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ ಕೂಡ ತಾಂತ್ರಿಕ ದೋಷವನ್ನು ಎದುರಿಸಿತ್ತು. ಇದರಿಂದ ಯಾವುದೇ ಸೂಚನೆಯಿಲ್ಲದೆ ಬಳಕೆದಾರರ ಇನ್‌ಸ್ಟಾಗ್ರಾಮ್‌ ಖಾತೆಗಳು ಏಕಾಏಕಿ ಬ್ಲಾಕ್‌ ಆಗಿದ್ದವು. ಇದರಿಂದ ಬಳಕೆದಾರರು ವರದಿ ಮಾಡಿದ್ದರು. ಈ ಸಮಸ್ಯೆ ಭಾರತ ಮತ್ತು ಪ್ರಪಂಚದ ಇತರ ಭಾಗಗಳಲ್ಲಿನ ಬಳಕೆದಾರರ ಮೇಲೂ ಪರಿಣಾಮ ಬೀರಿದೆ. ಇದಾದ ನಂತರ ಎಚ್ಚೆತ್ತ ಮೆಟಾ ಒಡೆತನದ ಕಂಪೆನಿ ಸಮಸ್ಯೆಯನ್ನು ಬಗೆಹರಿಸಿತು. ಮೆಟಾ ಒಡೆತನದ ಪ್ಲಾಟ್‌ಫಾರ್ಮ್‌ಗಳಲ್ಲಿ ಎದುರಾಗಿರುವ ತಾಂತ್ರಿಕ ದೋಷ ಇದೇ ಮೊದಲನೇಲ್ಲ. ಕಳೆದ ವಾರ ವಾಟ್ಸ್​ಆ್ಯಪ್ ಅಪ್ಲಿಕೇಶನ್‌ ಕೂಡ ತಾಂತ್ರಿಕ ದೋಷವನ್ನು ಎದುರಿಸಿತ್ತು. ಇದರಿಂದ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌, ವಾಯ್ಸ್‌ ಕಾಲ್‌, ವಿಡಿಯೋ ಕಾಲ್‌ ಮಾಡುವುದಕ್ಕೆ ಕೂಡ ಸಾಧ್ಯವಾಗಿರಲಿಲ್ಲ. ಹೆಚ್ಚು ಕಡಿಮೆ ಎರಡು ಗಂಟೆಗಳ ಕಾಲ ಈ ಸಮಸ್ಯೆ ಉಂಟಾಗಿತ್ತು.

Published On - 9:22 am, Fri, 4 November 22

ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ