Twitter Down: ಭಾರತದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ

ಟೆಸ್ಲಾ ಸಿಎಒ ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter) ಭಾರತದ ಕೆಲ ಭಾಗಗಳಲ್ಲಿ ಡೌನ್ ಆಗಿದೆ. ಬಳಕೆದಾರರು ಎಷ್ಟೇ ಪ್ರಯತ್ನಿಸಿದರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡೌನ್​ಡಿಟೆಕ್ಟರ್ ಮಾಹಿತಿ ನೀಡಿದೆ.

Twitter Down: ಭಾರತದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
ಟ್ವಿಟರ್
Follow us
| Updated By: Vinay Bhat

Updated on:Nov 04, 2022 | 9:35 AM

ಕಳೆದ ಕೆಲವು ವಾರಗಳಿಂದ ಪ್ರಸಿದ್ಧ ಸಾಮಾಜಿಕ ಜಾಲತಾಣಗಳು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದೆ. ಇತ್ತೀಚೆಗಷ್ಟೆ ವಾಟ್ಸ್​ಆ್ಯಪ್ (WhatsApp), ಇನ್​ಸ್ಟಾಗ್ರಾಮ್ ದಿಢೀರ್ ಕಾರ್ಯನಿರ್ವಹಿಸದೆ ತೊಂದರೆಗೆ ಒಳಗಾಗಿತ್ತು. ಇದೀಗ ಟ್ವಿಟರ್ ಸರದಿ. ಟೆಸ್ಲಾ ಸಿಎಒ ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter) ಭಾರತದ ಕೆಲ ಭಾಗಗಳಲ್ಲಿ ಡೌನ್ ಆಗಿದೆ. ಬಳಕೆದಾರರು ಎಷ್ಟೇ ಪ್ರಯತ್ನಿಸಿದರು ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡೌನ್​ಡಿಟೆಕ್ಟರ್ ಮಾಹಿತಿ ನೀಡಿದ್ದು, ಡೆಸ್ಕ್​ಟಾಪ್ (Desktop) ಬಳಕೆದಾರರಿಗೆ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡಿದೆಯಂತೆ. ಭಾರತೀಯ ಕಾಲಮಾನದ ಪ್ರಕಾರ ಮುಂಜಾನೆ 3 ಗಂಟೆ ಸುಮಾರಿಗೆ ಈ ಸಮಸ್ಯೆ ಕಂಡುಬಂದಿದೆ.

ಅನೇಕ ಭಾಗದಲ್ಲಿ ಟ್ವಿಟರ್ ಡೌನ್ ಆಗಿದ್ದರ ಕುರಿತು ಅಲ್ಲಿನ ಬಳಕೆದಾರರು ಮಾಹಿತಿ ಹಂಚಿಕೊಂಡಿದ್ದರು. ಟ್ವಿಟರ್​ನಲ್ಲಿ ಪ್ರಸ್ತುತ ಟ್ವಿಟರ್ ಡೌನ್ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ. ಬಳಕೆದಾರರು ಮೀಮ್​ಗಳನ್ನು ಹರಿಬಿಡುತ್ತಿದ್ದು, ಟ್ವಿಟರ್ ಡೌನ್ ಆಗಿರುವುದೋ, ನಮ್ಮ ಇಂಟರ್​ನೆಟ್ಟೋ ತಿಳಿಯುತ್ತಿಲ್ಲ ಎಂದು ಟ್ವೀಟ್ ಮಾಡುತ್ತಿದ್ದಾರೆ.

ಇನ್​ಸ್ಟಾಗ್ರಾಮ್- ವಾಟ್ಸ್​ಆ್ಯಪ್ ಕೂಡ ಡೌನ್ ಆಗಿತ್ತು:

ಮೊನ್ನೆಯಷ್ಟೆ ಇನ್‌ಸ್ಟಾಗ್ರಾಮ್‌ ಅಪ್ಲಿಕೇಶನ್‌ ಕೂಡ ತಾಂತ್ರಿಕ ದೋಷವನ್ನು ಎದುರಿಸಿತ್ತು. ಇದರಿಂದ ಯಾವುದೇ ಸೂಚನೆಯಿಲ್ಲದೆ ಬಳಕೆದಾರರ ಇನ್‌ಸ್ಟಾಗ್ರಾಮ್‌ ಖಾತೆಗಳು ಏಕಾಏಕಿ ಬ್ಲಾಕ್‌ ಆಗಿದ್ದವು. ಇದರಿಂದ ಬಳಕೆದಾರರು ವರದಿ ಮಾಡಿದ್ದರು. ಈ ಸಮಸ್ಯೆ ಭಾರತ ಮತ್ತು ಪ್ರಪಂಚದ ಇತರ ಭಾಗಗಳಲ್ಲಿನ ಬಳಕೆದಾರರ ಮೇಲೂ ಪರಿಣಾಮ ಬೀರಿದೆ. ಇದಾದ ನಂತರ ಎಚ್ಚೆತ್ತ ಮೆಟಾ ಒಡೆತನದ ಕಂಪೆನಿ ಸಮಸ್ಯೆಯನ್ನು ಬಗೆಹರಿಸಿತು. ಮೆಟಾ ಒಡೆತನದ ಪ್ಲಾಟ್‌ಫಾರ್ಮ್‌ಗಳಲ್ಲಿ ಎದುರಾಗಿರುವ ತಾಂತ್ರಿಕ ದೋಷ ಇದೇ ಮೊದಲನೇಲ್ಲ. ಕಳೆದ ವಾರ ವಾಟ್ಸ್​ಆ್ಯಪ್ ಅಪ್ಲಿಕೇಶನ್‌ ಕೂಡ ತಾಂತ್ರಿಕ ದೋಷವನ್ನು ಎದುರಿಸಿತ್ತು. ಇದರಿಂದ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌, ವಾಯ್ಸ್‌ ಕಾಲ್‌, ವಿಡಿಯೋ ಕಾಲ್‌ ಮಾಡುವುದಕ್ಕೆ ಕೂಡ ಸಾಧ್ಯವಾಗಿರಲಿಲ್ಲ. ಹೆಚ್ಚು ಕಡಿಮೆ ಎರಡು ಗಂಟೆಗಳ ಕಾಲ ಈ ಸಮಸ್ಯೆ ಉಂಟಾಗಿತ್ತು.

Published On - 9:22 am, Fri, 4 November 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ