AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ

Parag Agrawal: ಟ್ವಿಟರ್ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕ ಆಗಿದ್ದಾರೆ. ನೂತನ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಪರಾಗ್ ಮಾಡಿದ್ದರು.

Twitter CEO: ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ; ನೂತನ ಸಿಇಒ ಆಗಿ ಪರಾಗ್ ಅಗರ್​ವಾಲ್ ನೇಮಕ
ಜ್ಯಾಕ್ ಡಾರ್ಸೆ
TV9 Web
| Edited By: |

Updated on:Nov 30, 2021 | 11:30 AM

Share

ದೆಹಲಿ: ಟ್ವಿಟರ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ಟ್ವಿಟರ್ ಸಂಸ್ಥೆಯ ಸಹ ಸಂಸ್ಥಾಪಕರಾಗಿದ್ದ ಜ್ಯಾಕ್ ಡಾರ್ಸೆ ಟ್ವಿಟರ್ ಸಂಸ್ಥೆಯಲ್ಲಿ 16 ವರ್ಷ ಕಾರ್ಯನಿರ್ವಹಿಸಿದ್ದರು. ಇದೀಗ, ಟ್ವಿಟರ್ ಹೊಸ ಸಿಇಒ ಆಗಿ ಪರಾಗ್ ಅಗರವಾಲ್ ನೇಮಕ ಆಗಿದ್ದಾರೆ. ನೂತನ ಸಿಇಒ ಆಗಿ ಭಾರತೀಯ ಪರಾಗ್ ಅಗರವಾಲ್ ಆಯ್ಕೆ ಆಗಿದ್ದಾರೆ. ಮುಂಬೈನ ಐಐಟಿಯಲ್ಲಿ ವ್ಯಾಸಂಗ ಪರಾಗ್ ಮಾಡಿದ್ದರು. ಪರಾಗ್, ಪ್ರಸ್ತುತ ಟ್ವಿಟರ್​ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಆಗಿದ್ದಾರೆ.

ಜ್ಯಾಕ್ ಡೋರ್ಸೆ ಸ್ಕ್ವೇರ್ ಐಎನ್​ಸಿ ಕಡೆಗೆ ಅಧಿಕ ಗಮನ ನೀಡುತ್ತಿದ್ದಾರೆ, ಟ್ವಿಟರ್ ಕಡೆಗೆ ಗಮನಹರಿಸುತ್ತಿಲ್ಲ ಎಂದು ಟ್ವಿಟರ್​ನ ಪಾಲುದಾರ ಸಂಸ್ಥೆ ಎಲಿಯಟ್ ಮ್ಯಾನೇಜ್​ಮೆಂಟ್ ಕಾರ್ಪ್ ಈ ಮೊದಲು ಆರೋಪ ಮಾಡಿತ್ತು. ಅಷ್ಟೇ ಅಲ್ಲದೆ, ಡೋರ್ಸೆ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದು 2020ರ ಆರಂಭದಲ್ಲಿ ಒತ್ತಾಯಿಸಿತ್ತು.

ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ ನೀಡಿರುವ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಟ್ವೀಟ್​ನಲ್ಲಿ ಲಗತ್ತಿಸಿದ್ದಾರೆ. ಇದನ್ನು ಯಾರಾದರೂ ಕೇಳಿಸಿಕೊಂಡಿರಾ ಎಂದು ಖಚಿತವಿಲ್ಲ. ಆದರೆ, ನಾನು ಟ್ವಿಟರ್​ಗೆ ರಾಜೀನಾಮೆ ನೀಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್

ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವವರು ಮತ್ತು ಹೋರಾಟಗಾರರ ಟ್ವಿಟರ್ ಖಾತೆ ಮೇಲೆ ತ್ರಿಪುರಾ ಪೊಲೀಸ್ ನಿಗಾ

Published On - 9:48 pm, Mon, 29 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್