AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​

ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​
ಟ್ವಿಟ್ಟರ್
TV9 Web
| Edited By: |

Updated on: Jul 01, 2021 | 10:45 AM

Share

ಕಳೆದ ಕೆಲದಿನಗಳಿಂದ ಬೇರೆ ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್​ ಇಂದು ತಾಂತ್ರಿಕ ದೋಷಗಳಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ಆದರೆ, ಇದೀಗ ದೋಷಗಳನ್ನು ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ ಟ್ವಿಟರ್​ ಬಳಸುತ್ತಿದ್ದ ಬಳಕೆದಾರರಿಗೆ ಎದುರಾಗಿದ್ದ ಸಮಸ್ಯೆಗಳನ್ನು ಪತ್ತೆಹಚ್ಚಿ ಸರಿಮಾಡಿದ್ದೇವೆ ಎಂದು ತಿಳಿಸಿದೆ. ಇಂದು ಮುಂಜಾನೆಯಿಂದಲೇ ಕೆಲ ಭಾಗಗಳಲ್ಲಿ ಟ್ವಿಟರ್​ ವೆಬ್​ ಸರಿಯಾಗಿ ಕೆಲಸ ಮಾಡದ ಕಾರಣ ಬಳಕೆದಾರರು ಆ ಬಗ್ಗೆ ಮಾತನಾಡಿಕೊಳ್ಳಲಾರಂಭಿಸಿದ್ದರು.

ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಅಲ್ಲದೇ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

ಇಂಥದ್ದೇ ಸಮಸ್ಯೆ ಕಳೆದ ಏಪ್ರಿಲ್​ ತಿಂಗಳಿನಲ್ಲೂ ಟ್ವಿಟರ್​ಗೆ ಎದುರಾಗಿತ್ತು. ಅಂತೆಯೇ, ಕೆಲ ತಿಂಗಳ ಹಿಂದೆ ಫೇಸ್​ಬುಕ್​ ಹಾಗೂ ಅದರ ಅಂಗ ಸಂಸ್ಥೆಗಳಾದ ಇನ್​ಸ್ಟಾಗ್ರಾಂ, ವಾಟ್ಸ್ಯಾಪ್​ ಎಲ್ಲವೂ ಕೆಲ ಕಾಲ ಸ್ಥಗಿತಗೊಂಡು ಬಳಕೆದಾರರಿಗೆ ಅಡಚಣೆ ಉಂಟಾಗಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಟ್ವಿಟರ್​​ ವಿರುದ್ಧ ಪೋಕ್ಸೋ, ಐಟಿ ಕಾಯ್ದೆಯಡಿ ದೂರು ದಾಖಲಿಸಿದ ದೆಹಲಿ ಪೊಲೀಸರು; ಎನ್​ಸಿಪಿಸಿಆರ್ ವರದಿ ಆಧರಿಸಿ ದೂರು 

India Map Twitter: ವೆಬ್​ಸೈಟ್​ನಿಂದ ಭಾರತದ ತಪ್ಪು ಭೂಪಟ ತೆಗೆದು ಪ್ರಮಾದ ತಿದ್ದಿಕೊಂಡ ಟ್ವಿಟರ್

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು