Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​

ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

Twitter Down: ತಾಂತ್ರಿಕ ದೋಷಗಳನ್ನು ಸರಿಪಡಿಸಲಾಗುತ್ತಿದೆ; ಬಳಕೆದಾರರಿಗೆ ಉಂಟಾದ ಅಡಚಣೆಯನ್ನು ಸರಿಪಡಿಸಿದ ಟ್ವಿಟರ್​
ಟ್ವಿಟ್ಟರ್
Follow us
TV9 Web
| Updated By: Skanda

Updated on: Jul 01, 2021 | 10:45 AM

ಕಳೆದ ಕೆಲದಿನಗಳಿಂದ ಬೇರೆ ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್​ ಇಂದು ತಾಂತ್ರಿಕ ದೋಷಗಳಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ಆದರೆ, ಇದೀಗ ದೋಷಗಳನ್ನು ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ ಟ್ವಿಟರ್​ ಬಳಸುತ್ತಿದ್ದ ಬಳಕೆದಾರರಿಗೆ ಎದುರಾಗಿದ್ದ ಸಮಸ್ಯೆಗಳನ್ನು ಪತ್ತೆಹಚ್ಚಿ ಸರಿಮಾಡಿದ್ದೇವೆ ಎಂದು ತಿಳಿಸಿದೆ. ಇಂದು ಮುಂಜಾನೆಯಿಂದಲೇ ಕೆಲ ಭಾಗಗಳಲ್ಲಿ ಟ್ವಿಟರ್​ ವೆಬ್​ ಸರಿಯಾಗಿ ಕೆಲಸ ಮಾಡದ ಕಾರಣ ಬಳಕೆದಾರರು ಆ ಬಗ್ಗೆ ಮಾತನಾಡಿಕೊಳ್ಳಲಾರಂಭಿಸಿದ್ದರು.

ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಅಲ್ಲದೇ, ಸಮಸ್ಯೆಯ ಮೂಲವನ್ನು ಪತ್ತೆಹಚ್ಚುವ ಕೆಲಸ ಸಾಗಿದ್ದು, ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಸಮಸ್ಯೆ ಎದುರಾದ ನಂತರವೂ ತಾಳ್ಮೆಯಿಂದ ಕಾದು ನಮಗೆ ಸಹಕರಿಸಿದ್ದಕ್ಕೆ ಧನ್ಯವಾದಗಳು ಎಂದು ಟ್ವಿಟರ್ ಟ್ವೀಟ್ ಮಾಡಿದೆ.

ಇಂಥದ್ದೇ ಸಮಸ್ಯೆ ಕಳೆದ ಏಪ್ರಿಲ್​ ತಿಂಗಳಿನಲ್ಲೂ ಟ್ವಿಟರ್​ಗೆ ಎದುರಾಗಿತ್ತು. ಅಂತೆಯೇ, ಕೆಲ ತಿಂಗಳ ಹಿಂದೆ ಫೇಸ್​ಬುಕ್​ ಹಾಗೂ ಅದರ ಅಂಗ ಸಂಸ್ಥೆಗಳಾದ ಇನ್​ಸ್ಟಾಗ್ರಾಂ, ವಾಟ್ಸ್ಯಾಪ್​ ಎಲ್ಲವೂ ಕೆಲ ಕಾಲ ಸ್ಥಗಿತಗೊಂಡು ಬಳಕೆದಾರರಿಗೆ ಅಡಚಣೆ ಉಂಟಾಗಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಟ್ವಿಟರ್​​ ವಿರುದ್ಧ ಪೋಕ್ಸೋ, ಐಟಿ ಕಾಯ್ದೆಯಡಿ ದೂರು ದಾಖಲಿಸಿದ ದೆಹಲಿ ಪೊಲೀಸರು; ಎನ್​ಸಿಪಿಸಿಆರ್ ವರದಿ ಆಧರಿಸಿ ದೂರು 

India Map Twitter: ವೆಬ್​ಸೈಟ್​ನಿಂದ ಭಾರತದ ತಪ್ಪು ಭೂಪಟ ತೆಗೆದು ಪ್ರಮಾದ ತಿದ್ದಿಕೊಂಡ ಟ್ವಿಟರ್

ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ