AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು

ರವಿವಾರ ಸಂಜೆ 7 ಗಂಟೆ ಸುಮಾರಿಗೆ ಭಾರತದಾದ್ಯಂತ ಟ್ವಿಟರ್​ನ ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2022 | 8:51 PM

ನಿನ್ನೆ (ಡಿ.10) ವಿಶ್ವಾದ್ಯಂತ ಒಂದು ಗಂಟೆಗಳ ಕಾಲ ಜಿಮೇಲ್​ ಸರ್ವರ್​ ಡೌನ ಆಗಿ ಬಳೆಕೆದಾರರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂದು (ಡಿ.11) ಸಂಜೆ 7 ಗಂಟೆ ಸುಮಾರಿಗೆ ಟ್ವಿಟರ್​ನ (Twitter) ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ್​​​ ಟೈಮ್ಸ್​ ವರದಿ ಮಾಡಿದೆ. Downdetector ವರದಿ ಪ್ರಕಾರ ದೇಶದಲ್ಲಿ 2,838 ಬಳಕೆದಾರರು ಪೇಜ್​ ಎರರ್ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಸಾಯಂಕಾಲ ಹಲವು ಬಳಕೆದಾರರು ಟ್ವಿಟರ್​ ಓಪನ್​ ಮಾಡಿದಾಗ ಪೇಜ್​ ಎರರ್​​ ಎಂದು ಬಂದಿದೆ. ಆಗ ಬಳಕೆದಾರ ರಿಫ್ರೆಶ್​​ ಮಾಡಿದರೂ ಟೈಮ್​ಲೈನ್​ ರಿಫ್ರೆಶ್​​ ಆಗಲಿಲ್ಲ. ಹೀಗಾಗಿ ಅನೇಕ ಖಾತೆಗಳು ಅಸ್ತಿತ್ವದಲ್ಲಿಲ್ಲ ಎಂದು ತೋರಿಸಿದೆ. ಇದರಿಂದ ಬಳಕೆದಾರರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.

ಟ್ವಿಟರ್​ ಕೆಲವು ಸರ್ವರ್​ಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಸರ್ವರ್​ಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಇನ್ನು ಈ ಸಮಸ್ಯೆ ಅಂಡ್ರಾಯಡ್​ ಮೊಬೈಲ್​ಗಳಲ್ಲಿ ಮಾತ್ರ ಕಂಡುಬಂದಿದೆ ಎಂದು ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅಲ್ಲದೇ ವಿಪಿಎನ್​ ಸಂಪರ್ಕದೊಂದಿಗೆ ಟ್ವಿಟರ್​​ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಟ್ವಿಟರ್​ ಸರ್ವರ್​ ಡೌನ್​​ ಕುರಿತು ಕೆಲವರು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದು, ಎಲನ್​ ಮಾಸ್ಕ್​​ ಈ ಸಮ್ಯಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆಂದು  ಕಾಲೆಳೆದಿದ್ದಾರೆ.

ಮತ್ತೆ ಕೆಲವು ಬಳಕೆದಾರರು ಟ್ವಿಟರ್​ ಡೌನ್​ನಿಂದ ನಾವು ಇನ್​ಸ್ಟಾಗ್ರಮ್​ ರೀಲ್ಸ್​​ ​ವೀಕ್ಷಿಸುತ್ತಿದ್ದೇವೆ ಎಂದು ಟ್ವಿಟ್​ ಮಾಡಿದ್ದಾರೆ.

Published On - 8:26 pm, Sun, 11 December 22

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ