AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು

ರವಿವಾರ ಸಂಜೆ 7 ಗಂಟೆ ಸುಮಾರಿಗೆ ಭಾರತದಾದ್ಯಂತ ಟ್ವಿಟರ್​ನ ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ.

Twitter down: ದೇಶಾದ್ಯಂತ ಟ್ವಿಟರ್ ಸರ್ವರ್ ಡೌನ್: ಪೇಜ್​ ಎರರ್ ಸಮಸ್ಯೆ ಎದುರಿಸಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 11, 2022 | 8:51 PM

Share

ನಿನ್ನೆ (ಡಿ.10) ವಿಶ್ವಾದ್ಯಂತ ಒಂದು ಗಂಟೆಗಳ ಕಾಲ ಜಿಮೇಲ್​ ಸರ್ವರ್​ ಡೌನ ಆಗಿ ಬಳೆಕೆದಾರರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಇಂದು (ಡಿ.11) ಸಂಜೆ 7 ಗಂಟೆ ಸುಮಾರಿಗೆ ಟ್ವಿಟರ್​ನ (Twitter) ಸರ್ವರ್​ ಡೌನ್​ ಆಗಿ, ಪೇಜ್​ ಎರರ್​​ ಕಂಡು ಬಂದಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ್​​​ ಟೈಮ್ಸ್​ ವರದಿ ಮಾಡಿದೆ. Downdetector ವರದಿ ಪ್ರಕಾರ ದೇಶದಲ್ಲಿ 2,838 ಬಳಕೆದಾರರು ಪೇಜ್​ ಎರರ್ ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಸಾಯಂಕಾಲ ಹಲವು ಬಳಕೆದಾರರು ಟ್ವಿಟರ್​ ಓಪನ್​ ಮಾಡಿದಾಗ ಪೇಜ್​ ಎರರ್​​ ಎಂದು ಬಂದಿದೆ. ಆಗ ಬಳಕೆದಾರ ರಿಫ್ರೆಶ್​​ ಮಾಡಿದರೂ ಟೈಮ್​ಲೈನ್​ ರಿಫ್ರೆಶ್​​ ಆಗಲಿಲ್ಲ. ಹೀಗಾಗಿ ಅನೇಕ ಖಾತೆಗಳು ಅಸ್ತಿತ್ವದಲ್ಲಿಲ್ಲ ಎಂದು ತೋರಿಸಿದೆ. ಇದರಿಂದ ಬಳಕೆದಾರರು ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.

ಟ್ವಿಟರ್​ ಕೆಲವು ಸರ್ವರ್​ಗಳಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಸರ್ವರ್​ಗಳಲ್ಲಿ ಸಮಸ್ಯೆ ಕಂಡು ಬಂದಿದೆ. ಇನ್ನು ಈ ಸಮಸ್ಯೆ ಅಂಡ್ರಾಯಡ್​ ಮೊಬೈಲ್​ಗಳಲ್ಲಿ ಮಾತ್ರ ಕಂಡುಬಂದಿದೆ ಎಂದು ಬಳಕೆದಾರರು ಕಾಮೆಂಟ್​​ ಮಾಡಿದ್ದಾರೆ. ಅಲ್ಲದೇ ವಿಪಿಎನ್​ ಸಂಪರ್ಕದೊಂದಿಗೆ ಟ್ವಿಟರ್​​ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ.

ಟ್ವಿಟರ್​ ಸರ್ವರ್​ ಡೌನ್​​ ಕುರಿತು ಕೆಲವರು ವ್ಯಂಗ್ಯವಾಗಿ ಟ್ವೀಟ್​ ಮಾಡಿದ್ದು, ಎಲನ್​ ಮಾಸ್ಕ್​​ ಈ ಸಮ್ಯಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದಾರೆಂದು  ಕಾಲೆಳೆದಿದ್ದಾರೆ.

ಮತ್ತೆ ಕೆಲವು ಬಳಕೆದಾರರು ಟ್ವಿಟರ್​ ಡೌನ್​ನಿಂದ ನಾವು ಇನ್​ಸ್ಟಾಗ್ರಮ್​ ರೀಲ್ಸ್​​ ​ವೀಕ್ಷಿಸುತ್ತಿದ್ದೇವೆ ಎಂದು ಟ್ವಿಟ್​ ಮಾಡಿದ್ದಾರೆ.

Published On - 8:26 pm, Sun, 11 December 22

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ