AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್

ಟ್ವಿಟರ್ ತನ್ನ ಬಹು ನಿರೀಕ್ಷಿತ ಎಡಿಟ್ ಟ್ವೀಟ್ ವೈಶಿಷ್ಟ್ಯವನ್ನು ಸೆಪ್ಟೆಂಬರ್ 21 ರಂದು ಹೊರತರಲಿದೆ. ಈ ವೈಶಿಷ್ಟ್ಯವು ತಿಂಗಳಿಗೆ 4.99 ರೂ. ಪಾವತಿಸುವ ನೀಲಿ ಟಿಕ್ ಮಾರ್ಕ್​ ಚಂದಾದಾರರಿಗೆ ಮೊದಲು ಲಭ್ಯವಿರುತ್ತದೆ.

ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್
ಸೆ.21ರಿಂದ ಬ್ಲೂ ಟಿಕ್ ಚಂದಾದಾರರಿಗಾಗಿ ಎಡಿಟ್ ಟ್ವೀಟ್ ವೈಶಿಷ್ಟ್ಯ ಹೊರತರಲಿರುವ ಟ್ವಿಟರ್ (ಸಾಂದರ್ಭಿಕ ಚಿತ್ರ)
TV9 Web
| Updated By: Rakesh Nayak Manchi|

Updated on:Sep 19, 2022 | 11:55 AM

Share

ಟ್ವಿಟರ್ ತನ್ನ ಬಹು ನಿರೀಕ್ಷಿತ ಎಡಿಟ್ ಟ್ವೀಟ್ ವೈಶಿಷ್ಟ್ಯವನ್ನು ಸೆಪ್ಟೆಂಬರ್ 21 ರಂದು ಹೊರತರಲಿದೆ. ಎಡಿಟ್ ಟ್ವೀಟ್ ವೈಶಿಷ್ಟ್ಯವು ಪ್ರಕಟಿಸಿದ ನಂತರ ಜನರು ತಮ್ಮ ಟ್ವೀಟ್‌ಗಳಲ್ಲಿ ಬದಲಾವಣೆಗಳನ್ನು ಮಾಡಲು ಅನುಮತಿಸುತ್ತದೆ. ಈ ವೈಶಿಷ್ಟ್ಯವು ತಿಂಗಳಿಗೆ 4.99 ರೂ. ಪಾವತಿಸುವ ನೀಲಿ ಟಿಕ್ ಮಾರ್ಕ್​ ಚಂದಾದಾರರಿಗೆ ಮೊದಲು ಲಭ್ಯವಿರುತ್ತದೆ.

ಎಡಿಟ್ ಟ್ವೀಟ್​ಗಳು ಐಕಾನ್, ಟೈಮ್ ಸ್ಟ್ಯಾಂಪ್, ಮತ್ತು ಲೇಬಲ್​ನೊಂದಿಗೆ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಮೂಲ ಟ್ವೀಟ್ ಅನ್ನು ಮಾರ್ಪಡಿಸಲಾಗಿದೆ ಎಂಬುದು ಓದುಗರಿಗೆ ಸ್ಪಷ್ಟವಾಗುತ್ತದೆ. ಲೇಬಲ್ ಅನ್ನು ಟ್ಯಾಪ್ ಮಾಡುವುದರಿಂದ ವೀಕ್ಷಕರನ್ನು ಟ್ವೀಟ್​ನ ಎಡಿಟ್ ಹಿಸ್ಟರಿಗೆ ಕರೆದೊಯ್ಯುತ್ತದೆ.

ಮುಂದಿನ ವಾರದಿಂದ ಈ ವೈಶಿಷ್ಟ್ಯವನ್ನು ಸಾರ್ವಜನಿಕರಿಗೆ ಪರಿಚಯಿಸುವ ಸಾಧ್ಯತೆಯಿದೆ ಎಂದು ಪ್ಲಾಟ್ಫಾರ್ಮರ್​ನ​ ಕೇಸಿ ನ್ಯೂಟನ್ ಶುಕ್ರವಾರ ಟ್ವೀಟ್​ನಲ್ಲಿ ತಿಳಿಸಿದ್ದಾರೆ. “ಟ್ವಿಟರ್ ನನ್ನೊಂದಿಗೆ ಹಂಚಿಕೊಂಡ ಆಂತರಿಕ ದಾಖಲೆಗಳ ಪ್ರಕಾರ, ಬುಧವಾರ 9/21 ರಂದು ಟ್ವೀಟ್​ಗಳನ್ನು ಎಡಿಟ್ ಮಾಡುವ ಸಾರ್ವಜನಿಕ ಪರೀಕ್ಷೆಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ” ಎಂದು ಪೋಸ್ಟ್ ಮಾಡಿದ್ದಾರೆ.

ಟ್ವಿಟರ್ ಬಳಕೆದಾರರು ವ್ಯಾಕರಣ ದೋಷಗಳನ್ನು ಸರಿಪಡಿಸಲು ಎಡಿಟ್ ಆಯ್ಕೆಗಳನ್ನು ನೀಡುವಂತೆ ವರ್ಷಗಳಿಂದ ಕೇಳುತ್ತಿದ್ದಾರೆ. ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ವೈಶಿಷ್ಟ್ಯವನ್ನು ಹೊರತರುವ ಮೊದಲು ಆಂತರಿಕ ತಂಡದೊಂದಿಗೆ ಟ್ವಿಟರ್ ಎಡಿಟ್ ಟ್ವೀಟ್ ವೈಶಿಷ್ಟ್ಯಕ್ಕಾಗಿ ಒಂದು ಸಣ್ಣ ಪರೀಕ್ಷೆಯನ್ನು ಘೋಷಿಸಿತು. “ಜನರು ಟ್ವೀಟ್​ಗಳನ್ನು ಓದುವ, ಬರೆಯುವ ಮತ್ತು ತೊಡಗಿಸಿಕೊಳ್ಳುವ ವಿಧಾನದ ಮೇಲೆ ಈ ವೈಶಿಷ್ಟ್ಯವು ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆಯೂ ನಾವು ಹೆಚ್ಚು ಗಮನ ಹರಿಸಲಿದ್ದೇವೆ” ಎಂದು ಕಂಪನಿ ತಿಳಿಸಿದೆ.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Mon, 19 September 22

ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ