AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Character Limit: ಟ್ವಿಟರ್​ ಅಕ್ಷರ ಮಿತಿ 1,000ಕ್ಕೆ ಹೆಚ್ಚಳ; ಎಲಾನ್ ಮಸ್ಕ್ ಸುಳಿವು

ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಮಾಲೀಕತ್ವವನ್ನು ಉದ್ಯಮಿ ಎಲಾನ್ ಮಸ್ಕ್ ವಹಿಸಿಕೊಂಡ ಬೆನ್ನಲ್ಲೇ ಕಂಪನಿಯು ಹಲವು ಬದಲಾವಣೆಗಳನ್ನು ಕಾಣುತ್ತಿದೆ.

Twitter Character Limit: ಟ್ವಿಟರ್​ ಅಕ್ಷರ ಮಿತಿ 1,000ಕ್ಕೆ ಹೆಚ್ಚಳ; ಎಲಾನ್ ಮಸ್ಕ್ ಸುಳಿವು
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Nov 29, 2022 | 6:33 PM

Share

ಕ್ಯಾಲಿಫೊರ್ನಿಯಾ: ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ (Twitter) ಮಾಲೀಕತ್ವವನ್ನು ಉದ್ಯಮಿ ಎಲಾನ್ ಮಸ್ಕ್ (Elon Musk) ವಹಿಸಿಕೊಂಡ ಬೆನ್ನಲ್ಲೇ ಕಂಪನಿಯು ಹಲವು ಬದಲಾವಣೆಗಳನ್ನು ಕಾಣುತ್ತಿದೆ. ಅಕ್ಷರ ಮಿತಿ (Character Limit) ಬದಲಾವಣೆ ವಿಚಾರವೂ ಇದರಲ್ಲಿ ಪ್ರಮುಖವಾದದ್ದಾಗಿದೆ. ಅಕ್ಷರ ಮಿತಿಯನ್ನು ಈಗಿರುವ 280ರ ಬದಲಾಗಿ 1,000ಕ್ಕೆ ಹೆಚ್ಚಿಸುವ ಕುರಿತು ಖುದ್ದು ಎಲಾನ್ ಮಸ್ಕ್ ಟ್ವೀಟ್ ಮೂಲಕ ಸುಳಿವು ನೀಡಿದ್ದಾರೆ. ಟ್ವಿಟರ್​ನ ಅಕ್ಷರ ಮಿತಿ 1,000ಕ್ಕೆ ಹೆಚ್ಚಿಸುವಂತೆ ಬಳಕೆದಾರರೊಬ್ಬರು ಟ್ವೀಟ್ ಮೂಲಕ ಸಲಹೆ ನೀಡಿದ್ದರು. ಇದಕ್ಕೆ ಉತ್ತರಿಸಿದ ಮಸ್ಕ್, ಈ ವಿಚಾರ ನಮ್ಮ ಪರಿಗಣನೆಯಲ್ಲಿದೆ ಎಂದು ಉಲ್ಲೇಖಿಸಿದ್ದಾರೆ.

ಈ ಹಿಂದೆ ಟ್ವಿಟರ್​ನಲ್ಲಿ ಗರಿಷ್ಠ 140 ಅಕ್ಷರ ಬರೆಯುವುದಕ್ಕಷ್ಟೇ ಅವಕಾಶವಿತ್ತು. 2017ರಲ್ಲಿ ಇದನ್ನು 280ಕ್ಕೆ ಹೆಚ್ಚಿಸಲಾಗಿತ್ತು. ಅಕ್ಷರ ಮಿತಿಯೇ ಟ್ವಿಟರ್​ ಮತ್ತು ಇತರ ಸಮಾಜಿಕ ಜಾಲತಾಣಗಳ ನಡುವಣ ಪ್ರಮುಖ ವ್ಯತ್ಯಾಸವಾಗಿದೆ. ಇದೀಗ ಅಕ್ಷರ ಮಿತಿಯನ್ನು ಹೆಚ್ಚಿಸಲು ಮಸ್ಕ್ ಆಸಕ್ತಿ ವಹಿಸಿದ್ದಾರೆ ಎಂದು ‘ಮ್ಯಾಶಬಲ್’ ತಾಣ ವರದಿ ಮಾಡಿದೆ. ನವೆಂಬರ್ 27ರಂದು ಟ್ವಿಟರ್ ಬಳಕೆದಾರರೊಬ್ಬರು ಅಕ್ಷರ ಮಿತಿಯನ್ನು 280ರಿಂದ 420ಕ್ಕೆ ಹೆಚ್ಚಿಸುವಂತೆ ಸಲಹೆ ನೀಡಿದ್ದರು. ಅದಕ್ಕೂ ಪ್ರತಿಕ್ರಿಯಿಸಿದ್ದ ಮಸ್ಕ್, ಉತ್ತಮ ಸಲಹೆ ಎಂದು ಉತ್ತರಿಸಿದ್ದರು. ಅದಕ್ಕೂ ಮುನ್ನ ಮತ್ತೊಬ್ಬ ಬಳಕೆದಾರ, ಅಕ್ಷರ ಮಿತಿಯನ್ನು ತೊಡೆದುಹಾಕುವಂತೆ ಸಲಹೆ ನೀಡಿದ್ದರು. ಇದಕ್ಕೂ ಮಸ್ಕ್ ಸಹಮತ ವ್ಯಕ್ತಪಡಿಸಿದ್ದರು.

ಮಸ್ಕ್ ಕಾರ್ಯಭಾರದ ಬೆನ್ನಲ್ಲೇ ಹಲವು ಬದಲಾವಣೆ

ಮಸ್ಕ್ ಅವರು ಟ್ವಿಟರ್ ಮಾಲೀಕತ್ವ ವಹಿಸಿಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್​ವಾಲ್ ಸೇರಿದಂತೆ 3,500ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ್ದರು. ಬಳಿಕ ಟ್ವಿಟರ್​ನ ಬ್ಲೂಟಿಕ್​ಗೆ ಶುಲ್ಕ ವಿಧಿಸುವ ನೀತಿ ರೂಪಿಸಿದ್ದರು. ಆದರೆ, ನಕಲಿ ಖಾತೆಗಳ ಹಾವಳಿ ತಡೆಯುವಲ್ಲಿ ವಿಫಲವಾದ ಕಾರಣ ಅದನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದರು. ಶೇಕಡಾ 75ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ಬಳಿಕ, ವಜಾ ಪ್ರಕ್ರಿಯೆ ಮುಗಿದಿದೆ. ಇನ್ನು ನೇಮಕಾತಿ ಆರಂಭಿಸಲಾಗುವುದು ಎಂದು ಮಸ್ಕ್ ಕಳೆದ ವಾರ ಹೇಳಿದ್ದರು. ಆದರೆ ಮತ್ತೆ ಕೆಲವರನ್ನು ವಜಾಗೊಳಿಸಿ ಸುದ್ದಿಯಾಗಿದ್ದರು. ಇದೀಗ ಅಕ್ಷರ ಮಿತಿ ಹೆಚ್ಚಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಸುಳಿವು ನೀಡಿದ್ದಾರೆ.

ಹೆಚ್ಚಿನ ಟೆಕ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ