AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್

ಟ್ವಿಟ್ಟರ್ ಹೊಸ ಆಯ್ಕೆಯೊಂದನ್ನು ಬಳಕೆದಾರರಿಗೆ ಪರಿಚಯಿಸಿದ್ದು ಈ ಮೂಲಕ ನೀವು ಒಂದೇ ಮೆಸೇಜ್ ಅನ್ನು ಒಂದು ಬಾರಿಗೆ 20 ಬೇರೆ ಬೇರೆ ಅಕೌಂಟ್​ಗೆ ಕಳುಹಿಸಬಹುದಾಗಿದೆ.

Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 20, 2021 | 11:43 AM

Share

ಇತ್ತೀಚಿನ ದಿನಗಳಲ್ಲಿ ಯಾವುದೇ ವಿಚಾರವಾದರೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಬಿಡುತ್ತೆ. ಅದರಲ್ಲೂ ಹೆಚ್ಚಿನ ಜನರು ಮೈಕ್ರೋಬ್ಲಾಗಿಂಗ್‌ ತಾಣ ಟ್ವಿಟ್ಟರ್‌ನಲ್ಲಿ (Twitter) ತಮ್ಮ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ. ಇದೇ ಕಾರಣಕ್ಕೆ ಟ್ವಿಟ್ಟರ್​ ಕೂಡ ಹೊಸ ಮಾದರಿಯ ಫೀಚರ್ಸ್‌ಗಳನ್ನು ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ಟ್ವಿಟ್ಟರ್​ ಹೊಸ ಅಪ್ಡೇಟ್ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಬಳಕೆದಾರರು ಏಕಕಾಲದಲ್ಲಿ ಅನೇಕ ಖಾತೆಗಳಿಗೆ ನೇರ ಸಂದೇಶಗಳನ್ನು ಕಳುಹಿಸಬಹುದಾಗಿದೆ.

ಹೌದು, ಟ್ವಿಟ್ಟರ್ ಹೊಸ ಆಯ್ಕೆಯೊಂದನ್ನು ಬಳಕೆದಾರರಿಗೆ ಪರಿಚಯಿಸಿದ್ದು ಈ ಮೂಲಕ ನೀವು ಒಂದೇ ಮೆಸೇಜ್ ಅನ್ನು ಒಂದು ಬಾರಿಗೆ 20 ಬೇರೆ ಬೇರೆ ಅಕೌಂಟ್​ಗೆ ಕಳುಹಿಸಬಹುದಾಗಿದೆ. ಈ ಬಗ್ಗೆ ಟ್ವಿಟ್ಟರ್ ಸಪೋರ್ಟ್ ಹ್ಯಾಂಡಲ್ ಮಾಹಿತಿ ನೀಡಿದೆ. ಇದರ ಜೊತೆಗೆ ಮತ್ತೊಂದು ಹೊಸ ಆಯ್ಕೆನ್ನು ನೀಡಿದ್ದು, ಬಳಕೆದಾರರು ಮೆಸೇಜ್ ಅನ್ನು ಲಾಂಗ್ ಪ್ರೆಸ್ ಮಾಡಿದರೆ ಆ ಮೆಸೇಜ್​ಗೆ ರಿಯಾಕ್ಟ್ ಮಾಡೋ ಆಯ್ಕೆಯನ್ನು ನೀಡಿದೆ. ಟ್ವಿಟ್ಟರ್​ನ ಈ ಹೊಸ ಆಯ್ಕೆ ಸದ್ಯಕ್ಕೆ ಐಓಎಸ್ ಬಳಕೆದಾರರಿಗೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೂ ಪರಿಚಯಿಸಲಿದೆ.

ಇನ್ನೂ ಇತ್ತೀಚೆಗಷ್ಟೆ ಟ್ವಿಟ್ಟರ್​ಗೆ ಲಾಗಿನ್ ಆಗಲು ಹೊಸ ನಿಯಮವನ್ನು ತಂದಿತ್ತು . ಇದರ ಪ್ರಕಾರ, ಸ್ಮಾರ್ಟ್‌ಫೋನ್‌ನಲ್ಲಿ ಕನೆಕ್ಟ್ ಆಗಿರುವ ಗೂಗಲ್ ಖಾತೆಯೊಂದಿಗೆ ಹೊಸ ಟ್ವಿಟ್ಟರ್​​ ಬೀಟಾ ಅಪ್ಡೇಟ್​ಗೆ ಲಾಗ್ ಇನ್ ಮಾಡಲು ಸಾಧ್ಯವಾಗುತ್ತದೆ. ಹೊಸ ಏಕೀಕರಣವು ಬಳಕೆದಾರರಿಗೆ ಲಾಗ್ ಇನ್ ಮಾಡಲು ಅಥವಾ ಅಸ್ತಿತ್ವದಲ್ಲಿರುವ ವಿವರಗಳೊಂದಿಗೆ ಖಾತೆಯನ್ನು ತೆರೆಯಲು ಅನುಮತಿಸುತ್ತದೆ. ಹೆಸರು ಮತ್ತು ಇಮೇಲ್ ವಿಳಾಸದಂತಹ ಮುಖ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಆದರೆ, ಇಲ್ಲಿ ಪಾಸ್‌ವರ್ಡ್ ಹಾಕುವ ಅಗತ್ಯ ಇರುವುದಿಲ್ಲ.

ಬಳಕೆದಾರರು ಈಗಾಗಲೇ ಟ್ವಿಟ್ಟರ್​​ ಖಾತೆಯನ್ನು ಹೊಂದಿದ್ದು, ಗೂಗಲ್ ಅಕೌಂಟ್ ಇಮೇಲ್ ಅನ್ನು ಬಳಸುತ್ತಿದ್ದರೆ, ಪಾಸ್ವರ್ಡ್ ಇಲ್ಲದೆ ಲಾಗಿನ್ ಮಾಡಬಹುದಾಗಿದೆ.

Android 12: ಇನ್ಮುಂದೆ ಮುಖಭಾವದಲ್ಲೇ ನಿಮ್ಮ ಮೊಬೈಲ್ ಅನ್ನು ನಿಯಂತ್ರಿಸಬಹುದು..!

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿ 15 ಸಾವಿರ ರೂ. ಗೆಲ್ಲಿರಿ

(Twitter Update Now Users Can Send Twitter DMs To Multiple People At Once)

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್