AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್

ಟ್ವಿಟ್ಟರ್ ಹೊಸ ಆಯ್ಕೆಯೊಂದನ್ನು ಬಳಕೆದಾರರಿಗೆ ಪರಿಚಯಿಸಿದ್ದು ಈ ಮೂಲಕ ನೀವು ಒಂದೇ ಮೆಸೇಜ್ ಅನ್ನು ಒಂದು ಬಾರಿಗೆ 20 ಬೇರೆ ಬೇರೆ ಅಕೌಂಟ್​ಗೆ ಕಳುಹಿಸಬಹುದಾಗಿದೆ.

Twitter DM: ಟ್ವಿಟ್ಟರ್‌ ಬಳಕೆದಾರರು ಫುಲ್ ಖುಷ್: ಬಂದಿದೆ ಹೊಸ ಅಪ್ಡೇಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Vinay Bhat

Updated on: Aug 20, 2021 | 11:43 AM

ಇತ್ತೀಚಿನ ದಿನಗಳಲ್ಲಿ ಯಾವುದೇ ವಿಚಾರವಾದರೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ ಬಿಡುತ್ತೆ. ಅದರಲ್ಲೂ ಹೆಚ್ಚಿನ ಜನರು ಮೈಕ್ರೋಬ್ಲಾಗಿಂಗ್‌ ತಾಣ ಟ್ವಿಟ್ಟರ್‌ನಲ್ಲಿ (Twitter) ತಮ್ಮ ಭಾವನೆಗಳನ್ನು ಹಂಚಿಕೊಳ್ಳುತ್ತಾರೆ. ಇದೇ ಕಾರಣಕ್ಕೆ ಟ್ವಿಟ್ಟರ್​ ಕೂಡ ಹೊಸ ಮಾದರಿಯ ಫೀಚರ್ಸ್‌ಗಳನ್ನು ಪರಿಚಯಿಸುತ್ತಲೇ ಬಂದಿದೆ. ಸದ್ಯ ಇದೀಗ ಟ್ವಿಟ್ಟರ್​ ಹೊಸ ಅಪ್ಡೇಟ್ ಬಿಡುಗಡೆ ಮಾಡಿದ್ದು, ಇದರ ಪ್ರಕಾರ ಬಳಕೆದಾರರು ಏಕಕಾಲದಲ್ಲಿ ಅನೇಕ ಖಾತೆಗಳಿಗೆ ನೇರ ಸಂದೇಶಗಳನ್ನು ಕಳುಹಿಸಬಹುದಾಗಿದೆ.

ಹೌದು, ಟ್ವಿಟ್ಟರ್ ಹೊಸ ಆಯ್ಕೆಯೊಂದನ್ನು ಬಳಕೆದಾರರಿಗೆ ಪರಿಚಯಿಸಿದ್ದು ಈ ಮೂಲಕ ನೀವು ಒಂದೇ ಮೆಸೇಜ್ ಅನ್ನು ಒಂದು ಬಾರಿಗೆ 20 ಬೇರೆ ಬೇರೆ ಅಕೌಂಟ್​ಗೆ ಕಳುಹಿಸಬಹುದಾಗಿದೆ. ಈ ಬಗ್ಗೆ ಟ್ವಿಟ್ಟರ್ ಸಪೋರ್ಟ್ ಹ್ಯಾಂಡಲ್ ಮಾಹಿತಿ ನೀಡಿದೆ. ಇದರ ಜೊತೆಗೆ ಮತ್ತೊಂದು ಹೊಸ ಆಯ್ಕೆನ್ನು ನೀಡಿದ್ದು, ಬಳಕೆದಾರರು ಮೆಸೇಜ್ ಅನ್ನು ಲಾಂಗ್ ಪ್ರೆಸ್ ಮಾಡಿದರೆ ಆ ಮೆಸೇಜ್​ಗೆ ರಿಯಾಕ್ಟ್ ಮಾಡೋ ಆಯ್ಕೆಯನ್ನು ನೀಡಿದೆ. ಟ್ವಿಟ್ಟರ್​ನ ಈ ಹೊಸ ಆಯ್ಕೆ ಸದ್ಯಕ್ಕೆ ಐಓಎಸ್ ಬಳಕೆದಾರರಿಗೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೂ ಪರಿಚಯಿಸಲಿದೆ.

ಇನ್ನೂ ಇತ್ತೀಚೆಗಷ್ಟೆ ಟ್ವಿಟ್ಟರ್​ಗೆ ಲಾಗಿನ್ ಆಗಲು ಹೊಸ ನಿಯಮವನ್ನು ತಂದಿತ್ತು . ಇದರ ಪ್ರಕಾರ, ಸ್ಮಾರ್ಟ್‌ಫೋನ್‌ನಲ್ಲಿ ಕನೆಕ್ಟ್ ಆಗಿರುವ ಗೂಗಲ್ ಖಾತೆಯೊಂದಿಗೆ ಹೊಸ ಟ್ವಿಟ್ಟರ್​​ ಬೀಟಾ ಅಪ್ಡೇಟ್​ಗೆ ಲಾಗ್ ಇನ್ ಮಾಡಲು ಸಾಧ್ಯವಾಗುತ್ತದೆ. ಹೊಸ ಏಕೀಕರಣವು ಬಳಕೆದಾರರಿಗೆ ಲಾಗ್ ಇನ್ ಮಾಡಲು ಅಥವಾ ಅಸ್ತಿತ್ವದಲ್ಲಿರುವ ವಿವರಗಳೊಂದಿಗೆ ಖಾತೆಯನ್ನು ತೆರೆಯಲು ಅನುಮತಿಸುತ್ತದೆ. ಹೆಸರು ಮತ್ತು ಇಮೇಲ್ ವಿಳಾಸದಂತಹ ಮುಖ್ಯ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ಆದರೆ, ಇಲ್ಲಿ ಪಾಸ್‌ವರ್ಡ್ ಹಾಕುವ ಅಗತ್ಯ ಇರುವುದಿಲ್ಲ.

ಬಳಕೆದಾರರು ಈಗಾಗಲೇ ಟ್ವಿಟ್ಟರ್​​ ಖಾತೆಯನ್ನು ಹೊಂದಿದ್ದು, ಗೂಗಲ್ ಅಕೌಂಟ್ ಇಮೇಲ್ ಅನ್ನು ಬಳಸುತ್ತಿದ್ದರೆ, ಪಾಸ್ವರ್ಡ್ ಇಲ್ಲದೆ ಲಾಗಿನ್ ಮಾಡಬಹುದಾಗಿದೆ.

Android 12: ಇನ್ಮುಂದೆ ಮುಖಭಾವದಲ್ಲೇ ನಿಮ್ಮ ಮೊಬೈಲ್ ಅನ್ನು ನಿಯಂತ್ರಿಸಬಹುದು..!

Amazon app quiz: ಅಮೆಜಾನ್​ನ ಈ ಐದು ಪ್ರಶ್ನೆಗಳಿಗೆ ಉತ್ತರಿಸಿ 15 ಸಾವಿರ ರೂ. ಗೆಲ್ಲಿರಿ

(Twitter Update Now Users Can Send Twitter DMs To Multiple People At Once)

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್