AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Book Uber via WhatsApp: ಇನ್ಮುಂದೆ ವಾಟ್ಸ್​ಆ್ಯಪ್​ ಮೂಲಕ ಉಬರ್ ಕ್ಯಾಬ್ ಬುಕ್ ಮಾಡಿ: ಹೇಗೆ ಗೊತ್ತಾ?

How to book Uber on WhatsApp: ವಾಟ್ಸ್​ಆ್ಯಪ್​​ ಚಾಟ್‌ನಲ್ಲೇ ನೋಂದಣಿ, ರೈಡ್‌ ಬುಕಿಂಗ್‌, ಹಾಗೂ ಪ್ರಯಾಣದ ರಸೀದಿಯನ್ನು ಪಡೆದುಕೊಳ್ಳಬಹುದಾಗಿದೆ. ಉಬರ್‌ ಅನ್ನು ಬುಕಿಂಗ್‌ಗಾಗಿ ಇಂಗ್ಲೀಷ್‌ ಬಳಕೆ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಭಾರತೀಯ ಭಾಷೆಗಳಲ್ಲೂ ಬುಕಿಂಗ್‌ ಸೌಲಭ್ಯ ಒದಗಿಸಲಾಗುವುದು.

Book Uber via WhatsApp: ಇನ್ಮುಂದೆ ವಾಟ್ಸ್​ಆ್ಯಪ್​ ಮೂಲಕ ಉಬರ್ ಕ್ಯಾಬ್ ಬುಕ್ ಮಾಡಿ: ಹೇಗೆ ಗೊತ್ತಾ?
Ubar and WhatsApp
Follow us
TV9 Web
| Updated By: Vinay Bhat

Updated on: Dec 03, 2021 | 12:51 PM

ಉಬರ್‌ (Ubar) ಹಾಗೂ ವಾಟ್ಸ್​ಆ್ಯಪ್​ (WhatsApp)​ ಸಹಭಾಗಿತ್ವವನ್ನು ಘೋಷಿಸಿಕೊಂಡಿದ್ದು,ಇನ್ನು ಗ್ರಾಹಕರು ಉಬರ್‌ ಆ್ಯಪ್‌ ಬದಲಾಗಿ ನೇರವಾಗಿ ವಾಟ್ಸ್​ಆ್ಯಪ್​​ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್‌ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್‌ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ (Meta) ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ಲಕ್ನೊದಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ. ವಾಟ್ಸ್ಆ್ಯಪ್ ಮೆಸೆಂಜರ್ ಸೇವೆಯು ಭಾರತದಲ್ಲಿ ಅರ್ಧ ಶತಕೋಟಿಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿದೆ. ಬಹುತೇಕ ಜನರು ವಾಟ್ಸ್ಆ್ಯಪ್ ಅನ್ನು ಬಳಸುತ್ತಿದ್ದಾರೆ. ಹಾಗಾಗಿ ಉಬರ್ ಕೂಡ ಇದನ್ನು ಗಮನಿಸಿ ಆ್ಯಪ್ ಸಹಾಯವಿಲ್ಲದೆ ಬಳಕೆದಾರರಿಗೆ ಸುಲಭ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ವಾಟ್ಸ್ಆ್ಯಪ್ ಜೊತೆಗೆ ಕೈ ಜೋಡಿಸಿದೆ.

ವಾಟ್ಸ್​ಆ್ಯಪ್​​ ಚಾಟ್‌ನಲ್ಲೇ ನೋಂದಣಿ, ರೈಡ್‌ ಬುಕಿಂಗ್‌, ಹಾಗೂ ಪ್ರಯಾಣದ ರಸೀದಿಯನ್ನು ಪಡೆದುಕೊಳ್ಳಬಹುದಾಗಿದೆ. ಉಬರ್‌ ಅನ್ನು ಬುಕಿಂಗ್‌ಗಾಗಿ ಇಂಗ್ಲೀಷ್‌ ಬಳಕೆ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಭಾರತೀಯ ಭಾಷೆಗಳಲ್ಲೂ ಬುಕಿಂಗ್‌ ಸೌಲಭ್ಯ ಒದಗಿಸಲಾಗುವುದು. ವಾಟ್ಸ್​ಆ್ಯಪ್​​ನಲ್ಲಿ ಉಬರ್ ಚಾಟ್‌ಬಾಟ್ ಮೂಲಕ ಒಮ್ಮೆ ರೈಡ್ ಬುಕ್ ಮಾಡಿದ ನಂತರ ಗ್ರಾಹಕರು ಚಾಲಕನ ಹೆಸರು, ವಾಹನದ ಲೈಸೆನ್ಸ್ ಪ್ಲೇಟ್ ಸಂಖ್ಯೆ ಮತ್ತು ಪಿಕಪ್ ಪಾಯಿಂಟ್‌ಗೆ ಹೋಗುವ ಸ್ಥಳ ಸೇರಿದಂತೆ ಎಲ್ಲಾ ವಿವರಗಳನ್ನು ವಾಟ್ಸ್​ಆ್ಯಪ್​​ ಸಂದೇಶದ ಮೂಲಕ ಪಡೆಯುತ್ತಾರೆ ಎಂದು ಉಬರ್ ಹೇಳಿದೆ.

“ಎಲ್ಲಾ ಭಾರತೀಯರಿಗೆ ಉಬರ್ ಸೇವೆ ಬಳಕೆಗೆ ಸಿಗುವಂತೆ ಮಾಡಲು ನಾವು ಬಯಸುತ್ತೇವೆ ಮತ್ತು ಅವರಿಗೆ ಅನುಕೂಲಕರವಾದ ವೇದಿಕೆಗಳಲ್ಲಿ ಸಿಗುವ ಮೂಲಕ ಸೇವೆಯನ್ನು ನೀಡಲಿದ್ದೇವೆ ” ಎಂದು ಉಬರ್​​ನ ವ್ಯಾಪಾರ ಅಭಿವೃದ್ಧಿಯ ಹಿರಿಯ ನಿರ್ದೇಶಕಿ ನಂದಿನಿ ಮಹೇಶ್ವರಿ ಹೇಳಿದರು.

ಹೇಗೆ ಕಾರ್ಯನಿರ್ವಹಿಸುತ್ತದೆ?:

ಉಬರ್ ಆ್ಯಪ್ ಅವಶ್ಯಕತೆಯಿಲ್ಲದೆಯೇ, ವಾಟ್ಸ್​ಆ್ಯಪ್​​ ಮೂಲಕ ಚಾಟ್ ಇಂಟರ್ಫೇಸ್​ನಲ್ಲಿ ನೋಂದಾಯಿಸಿಕೊಳ್ಳಬಹುದು ಮತ್ತು ರೈಡ್​ಗಳನ್ನು ಬುಕ್ ಮಾಡಬಹುದು ಮತ್ತು ಟ್ರಿಪ್ ರಸೀದಿಗಳನ್ನು ಪಡೆಯಬಹುದಾಗಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡುವುದು ಅಥವಾ ಉಬರ್ ವಾಟ್ಸ್​ಆ್ಯಪ್​​ ಚಾಟ್ ತೆರೆಯಲು ನೇರವಾಗಿ ಲಿಂಕ್ ಅನ್ನು ಕ್ಲಿಕ್ ಮಾಡುವುದು. ಚಾಟ್‌ಬಾಟ್ ನಂತರ ಪಿಕಪ್ ಮತ್ತು ಡ್ರಾಪ್ ಆಫ್ ಸ್ಥಳಗಳನ್ನು ನೀಡಲು ಬಳಕೆದಾರರನ್ನು ಕೇಳುತ್ತದೆ. ಅವರು ಬುಕ್ ಮಾಡಲು ಬಯಸುವ ರೀತಿಯ ರೈಡ್ ಅನ್ನು ಆಯ್ಕೆ ಮಾಡುತ್ತದೆ. ಚಾಟ್‌ಬಾಟ್ ಮುಂಗಡ ದರದ ಮಾಹಿತಿಯನ್ನು ನೀಡುತ್ತದೆ ಮತ್ತು ಚಾಲಕನ ಆಗಮನದ ನಿರೀಕ್ಷಿತ ಸಮಯವನ್ನು ಸಹ ನೀಡುತ್ತದೆ. ಉಬರ್​ನಲ್ಲಿ ಕೇವಲ ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಿದ ಹೊಸ ಮತ್ತು ಅಸ್ತಿತ್ವದಲ್ಲಿರುವ ಬಳಕೆದಾರರಿಗೆ ಸೇವೆಯು ಲಭ್ಯವಿದೆ ಎಂದು ವಾಟ್ಸ್​ಆ್ಯಪ್​​ ದೃಢಪಡಿಸುತ್ತದೆ. ಈ ಟೆಕ್ನಾಲಜಿಯಿಂದಾಗಿ ಇನ್ನು ಪ್ರಯಾಣಿಕರು ಉಬರ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಥವಾ ಬಳಸುವ ಅಗತ್ಯವಿಲ್ಲ.

WhatsApp Tips: ನಂಬರ್ ಸೇವ್ ಮಾಡದೇ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸುವ ಟ್ರಿಕ್ ನಿಮಗೆ ಗೊತ್ತಾ?

(Uber will soon allow users in India to book a cab via WhatsApp Here is how to book Uber on WhatsApp)

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!