Vivo Y100: ಇದು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ವಿವೋದಿಂದ ಭಾರತದಲ್ಲಿ ವಿಶಿಷ್ಠ ಮೊಬೈಲ್ ರಿಲೀಸ್: ಬೆಲೆ ಎಷ್ಟು?

ಭಾರತದಲ್ಲಿ ವಿವೋ ತನ್ನ ಹೊಸ ವಿವೋ ವೈ100 (Vivo Y100) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೊನಿನ ಪ್ರಮುಖ ವಿಶೇಷತೆ ಡಿಸೈನ್. ಈ ಫೋನಿನ ಹಿಂಭಾಗದ ಪ್ಯಾನೆಲ್​ನ ಬಣ್ಣ ಬದಲಾಗುತ್ತಾ ಇರುತ್ತದೆ.

Vivo Y100: ಇದು ಬಣ್ಣ ಬದಲಾಯಿಸುವ ಸ್ಮಾರ್ಟ್​ಫೋನ್: ವಿವೋದಿಂದ ಭಾರತದಲ್ಲಿ ವಿಶಿಷ್ಠ ಮೊಬೈಲ್ ರಿಲೀಸ್: ಬೆಲೆ ಎಷ್ಟು?
Vivo Y100
Follow us
| Updated By: Vinay Bhat

Updated on: Feb 16, 2023 | 3:05 PM

ಜಾಗತಿಕ ಮಾರುಕಟ್ಟೆಯಲ್ಲಿ ಇಂದು ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​ಫೋನುಗಳು (Smartphone) ಬಿಡುಗಡೆ ಆಗುತ್ತಿದೆ. ಸಾಧಾರಣ ಕ್ಯಾಮೆರಾ (Camera), ಬ್ಯಾಟರಿ, ಪ್ರೊಸೆಸರ್ ಇರುವ ಮೊಬೈಲ್​ಗಳು ಹೇಳ ಹೆಸರಿಲ್ಲದಂತೆ ಹೋದರೆ ಹೊಸ ತನದಿಂದ ಕೂಡಿರುವ ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಈಗ ಕೇವಲ ಡಿಸೈನ್​ಗೆ ಮನಸೋತು ಸ್ಮಾರ್ಟ್​ಫೋನ್ ಕೊಂಡುಕೊಳ್ಳುವವರು ಕೂಡ ಇದ್ದಾರೆ. ಇದನ್ನೇ ಗಮನದಲ್ಲಿ ಇಟ್ಟುಕೊಂಡು ವಿವೋ (Vivo) ಸಂಸ್ಥೆ ವಿಶೇಷವಾದ ಮೊಬೈಲ್ ಒಂದನ್ನು ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ.

ಇದೀಗ ಭಾರತದಲ್ಲಿ ವಿವೋ ತನ್ನ ಹೊಸ ವಿವೋ ವೈ100 (Vivo Y100) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಈ ಫೊನಿನ ಪ್ರಮುಖ ವಿಶೇಷತೆ ಡಿಸೈನ್. ಈ ಫೋನಿನ ಹಿಂಭಾಗದ ಪ್ಯಾನೆಲ್​ನ ಬಣ್ಣ ಬದಲಾಗುತ್ತಾ ಇರುತ್ತದೆ. ಇದರ ಜೊತೆಗೆ ಪ್ರೊಸೆಸರ್‌, ಬಲಿಷ್ಠ ಬ್ಯಾಟರಿ, ಆಕರ್ಷಕ ಕ್ಯಾಮೆರಾಗಳನ್ನು ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನು ಫೀಚರ್​ಗಳಿವೆ? ಎಂಬುದನ್ನು ನೋಡೋಣ.

ಇದನ್ನೂ ಓದಿ
Image
iQOO Neo 7: ಫಾಸ್ಟ್ ಚಾರ್ಜರ್​ಗೆ ದಂಗಾದ ಟೆಕ್ ಜಗತ್ತು: ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ
Image
Cyber Swachhta Kendra: ಸೈಬರ್ ಸ್ವಚ್ಛತಾ ಕೇಂದ್ರದಿಂದ ನಿಮಗೂ ಬಂದಿರಬಹುದು ಈ ಮೆಸೇಜ್: ನಿರ್ಲಕ್ಷ್ಯ ಮಾಡದಿರಿ
Image
Fire-Boltt Quantum: ಬ್ಲೂಟೂತ್ ಕಾಲಿಂಗ್ ಇರುವ ಫೈರ್ ಬೋಲ್ಟ್ ಸ್ಮಾರ್ಟ್​ವಾಚ್ ಬಿಡುಗಡೆ
Image
Nokia X30 5G: ಭಾರತದಲ್ಲಿ ಫೆಬ್ರವರಿ 20ರಿಂದ ಸೇಲ್ ಆರಂಭ; ದರ ಎಷ್ಟು?

ವಿವೋ Y100 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 8GB RAM + 128GB ಮಾದರಿಗೆ 24,999ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್ ಮೂಲಕ ಇಂದಿನಿಂದಲೇ ಈ ಫೋನ್ ಖರೀದಿಗೆ ಸಿಗುತ್ತಿದೆ. ಹೆಚ್​ಡಿಎಫ್​ಸಿ, ICICI ಬ್ಯಾಂಕ್, ಎಸ್​ಬಿಐ ಹಾಗೂ ಕೋಟಕ್ ಮಹೀಂದ್ರ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಖರೀದಿಸಿದರೆ 1500ರೂ. ರಿಯಾಯತಿ ಪಡೆಯಬಹುದು.

Tech Tips: ನಿಮ್ಮ ಫೇಸ್​ಬುಕ್ ಪ್ರೊಫೈಲ್ ಯಾರು ನೋಡುತ್ತಿದ್ದಾರೆಂದು ತಿಳಿಯಬೇಕೆ?: ಇಲ್ಲಿದೆ ಸಿಂಪಲ್ ಟ್ರಿಕ್

ವಿವೋ Y100 ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.38 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್​ರೇಟ್​ನಿಂದ ಕೂಡಿದ್ದು, ಸೂರ್ಯನ ಕಿರಣದ ಆಧಾರದ ಮೇಲೆ ಫೋನಿನ ಹಿಂಭಾಗ ಬಣ್ಣ ಬದಲಾಗುತ್ತದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಮೂಲದ ಫನ್​ಟಚ್ OS 13 ಬೆಂಬಲದೊಂದಿಗೆ ರನ್‌ ಆಗಲಿದೆ. ಮೆಮೊರಿ ಕಾರ್ಡ್‌ ಬಳಸಿ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಕೂಡ ಅವಕಾಶವನ್ನು ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್​ನಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದ್ದು, ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಹಿಂಭಾಗದ ಕ್ಯಾಮೆರಾಗಳು ನೈಟ್‌ ಮೋಡ್, ಪೋರ್ಟ್ರೇಟ್, ಸೂಪರ್ ಮ್ಯಾಕ್ರೋ, ಹೈ ರೆಸಲ್ಯೂಶನ್, ಪನೋರಮಾ, ಲೈವ್ ಫೋಟೋ, ಸ್ಲೋ ಮೋಷನ್ ಸೇರಿದಂತೆ ನೂತನವಾದ ಆಯ್ಕೆಗಳಿವೆ. 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ವಿವೋ V25 ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4GHz / 5HGz, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ