AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Web: ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಭರ್ಜರಿ ಸುದ್ದಿ: ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ

WhatsApp Web: ಈವರೆಗೆ ವಾಟ್ಸ್​ಆ್ಯಪ್ ವೆಬ್​ನಲ್ಲಿ ಲಾಗಿನ್ ಆಗಬೇಕು ಎಂದರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕಿತ್ತು. ಆದರೆ, ಇದಕ್ಕೆ ಕ್ಯಾಮೆರಾ ಅವಶ್ಯಕ. ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸದವರು ಲಾಗಿನ್ ಆಗಲು ಕಷ್ಟ ಪಡುತ್ತಿದ್ದರು. ಈ ಬಗ್ಗೆ ಅನೇಕರು ದೂರು ಕೂಡ ನೀಡಿದ್ದರು.

WhatsApp Web: ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಭರ್ಜರಿ ಸುದ್ದಿ: ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ
Whatsapp Web
Vinay Bhat
|

Updated on: Jul 10, 2023 | 11:07 AM

Share

ಮುಖ್ಯಾಂಶಗಳು

  • ವಾಟ್ಸ್​ಆ್ಯಪ್ ವೆಬ್ ಬಳಕೆದಾರರಿಗೆ ಭರ್ಜರಿ ಸುದ್ದಿ
  • ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಿ
  • .23.14.18 ಆವೃತ್ತಿ ಅಪ್ಡೇಟ್​ನಲ್ಲಿ ಈ ಆಯ್ಕೆ ಸಿಗಲಿದೆ

ಈ ಹಿಂದೆ ಆಂಡ್ರಾಯ್ಡ್ (Android) ಮತ್ತು ಐಒಎಸ್ ಬಳಕೆದಾರರಿಗೆ ಹೆಚ್ಚು ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುತ್ತಿದ್ದ ವಾಟ್ಸ್​ಆ್ಯಪ್ ಇದೀಗ ವೆಬ್ (WhatsApp Web) ಬಳಕೆದಾರರಿಗೆ ಕೂಡ ಹೊಸ ಹೊಸ ಫೀಚರ್​ಗಳನ್ನು ನೀಡುತ್ತಿದೆ. ಇದಕ್ಕೆ ಕಾರಣ ವಾಟ್ಸ್​ಆ್ಯಪ್ ವೆಬ್ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆ ಆಗುತ್ತಿರುವುದು. ಇದನ್ನು ಮನಗಂಡು ಮೆಟಾ ಒಡೆತನದ ಪ್ರಸಿದ್ಧ ಮೆಸೀಜಿಂಗ್ ಅಪ್ಲಿಕೇಷನ್ ಇದೀಗ ಹೊಸ ಆಯ್ಕೆಯೊಂದನ್ನು ತರಲು ಸಜ್ಜಾಗಿದೆ. ವಾಟ್ಸ್​ಆ್ಯಪ್ ತನ್ನ ಬೀಟಾ ಚಾನಲ್‌ನಲ್ಲಿ ಈ ಕುರಿತ ಫೀಚರ್ ರಿಲೀಸ್ ಮಾಡಿದೆ. ಇದರ ಮೂಲಕ ಬಳಕೆದಾರರು ಇನ್ಮುಂದೆ ವಾಟ್ಸ್​ಆ್ಯಪ್ ವೆಬ್​ನಲ್ಲಿ ಮೊಬೈಲ್ ನಂಬರ್ (Mobile Number) ನಮೋದಿಸುವ ಮೂಲಕ ಲಾಗಿನ್ ಆಗಬಹುದಾಗಿದೆ.

ಈವರೆಗೆ ವಾಟ್ಸ್​ಆ್ಯಪ್ ವೆಬ್​ನಲ್ಲಿ ಲಾಗಿನ್ ಆಗಬೇಕು ಎಂದರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕಿತ್ತು. ಆದರೆ, ಇದಕ್ಕೆ ಕ್ಯಾಮೆರಾ ಅವಶ್ಯಕ. ಕ್ಯಾಮೆರಾ ಸರಿಯಾಗಿ ಕಾರ್ಯನಿರ್ವಹಿಸದವರು ಲಾಗಿನ್ ಆಗಲು ಕಷ್ಟ ಪಡುತ್ತಿದ್ದರು. ಈ ಬಗ್ಗೆ ಅನೇಕರು ದೂರು ಕೂಡ ನೀಡಿದ್ದರು. ಸದ್ಯ ಈ ಸಮಸ್ಯೆಗಳನ್ನು ಸರಿಪಡಿಸಲು ಕ್ಯೂಆರ್ ಕೋಡ್ ಅಥವಾ ಮೊಬೈಲ್ ನಂಬರ್ ಅನ್ನು ಹಾಕುವ ಮೂಲಕ ಲಾಗಿನ್ ಮಾಡಲು ಅವಕಾಶ ನೀಡುತ್ತಿದೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ನಿರೀಕ್ಷೆಗೂ ಮೀರಿದ ಫೀಚರ್: ಚಾಟ್ ಲಿಸ್ಟ್​ನಲ್ಲಿ ಮಹತ್ವದ ಬದಲಾವಣೆ

ಇದನ್ನೂ ಓದಿ
Image
Realme GT Neo 5 Pro: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಬಲಿಷ್ಠವಾದ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್
Image
Samsung Event: ಜುಲೈ 26ಕ್ಕೆ ಸ್ಯಾಮ್​ಸಂಗ್​ನಿಂದ ಅತಿ ದೊಡ್ಡ ಈವೆಂಟ್: ಗ್ಯಾಲಕ್ಸಿ Z ಫೋಲ್ಡ್ ಸರಣಿ ಬಿಡುಗಡೆ
Image
Amazon Prime Day: ಅಮೆಜಾನ್ ಪ್ರೈಮೆ ಡೇ ಸೇಲ್​ನಲ್ಲಿ ನೀವು ಖರೀದಿಸಬಹುದಾದ ಆಕರ್ಷಕ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
Nothing Phone 1: ನಥಿಂಗ್ ಫೋನ್ 2 ಬಿಡುಗಡೆಗೆ ಕ್ಷಣಗಣನೆ: ನಥಿಂಗ್ ಫೋನ್ 1 ಮೇಲೆ ಊಹಿಸಲಾಗದಷ್ಟು ಡಿಸ್ಕೌಂಟ್

WABetaInfo ಪ್ರಕಾರ, ಆಂಡ್ರಾಯ್ಡ್​ನ ಕೆಲ ಬೀಟಾ ಪರೀಕ್ಷಕರಿಗೆ ಈ ಫೀಚರ್ ಲಭ್ಯವಾಗುತ್ತಿದೆ. ವರದಿಯ ಪ್ರಕಾರ ‘2.23.14.18’ ಆವೃತ್ತಿ ಅಪ್ಡೇಟ್​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ. ಕೆಲ ಅದೃಷ್ಟಶಾಲಿ ಬಳಕೆದಾರರಿಗೆ ಈ ಫೀಚರ್ ಈಗಾಗಲೇ ಲಭ್ಯವಾಗುತ್ತಿದೆ. ನಿಮಗೆ ಈ ಆಯ್ಕೆ ಲಭ್ಯವಿದೆಯೇ ಎಂದು ನೋಡಲು ಗೂಗಲ್ ಪ್ಲೇ ಸ್ಟೋರ್​ಗೆ ತೆರಳಿ ಅಪ್ಡೇಟ್ ಮಾಡುವ ಮೂಲಕ ಪರಿಶೀಲಿಸಬಹುದು.

ವಾಟ್ಸ್​ಆ್ಯಪ್ ವೆಬ್: ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದು ಹೇಗೆ?:

  • ವಾಟ್ಸ್​ಆ್ಯಪ್ ವೆಬ್​ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • QR ಕೋಡ್‌ನಲ್ಲಿ ಕೆಳಗೆ ಇರಿಸಲಾಗಿರುವ ‘ಫೋನ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿ’ ಆಯ್ಕೆ ಮೇಲೆ ಕ್ಲಿಕ್ ಮಾಡಿ
  • ನೀವು ಲಿಂಕ್ ಮಾಡಲು ಬಯಸುವ ಖಾತೆಯ ಫೋನ್ ಸಂಖ್ಯೆಯನ್ನು ನಮೂದಿಸಿ ಮತ್ತು ಮುಂದುವರಿಯಿರಿ
  • ಈಗ ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ WhatsApp ತೆರೆಯಿರಿ
  • ಮೇಲಿನ ಬಲಭಾಗದಲ್ಲಿರುವ ಮೂರು ಚುಕ್ಕೆಗಳ ಐಕಾನ್‌ನಿಂದ ‘ಲಿಂಕ್ ಮಾಡಲಾದ ಸಾಧನಗಳಿಗೆ’ ಹೋಗಿ
  • ‘ಲಿಂಕ್ ಎ ಡಿವೈಸ್’ ಮೇಲೆ ಟ್ಯಾಪ್ ಮಾಡಿ ಮತ್ತು ‘ಫೋನ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿ’ ಆಯ್ಕೆಯ ಮೇಲೆ ಟ್ಯಾಪ್ ಮಾಡಿ
  • ಬ್ರೌಸರ್ ಪರದೆಯಲ್ಲಿ ಪ್ರದರ್ಶಿಸಲಾದ 8-ಅಕ್ಷರಗಳ ಕೋಡ್ ಅನ್ನು ನಮೂದಿಸಿದರೆ ಆಯಿತು

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ