AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ವಾಟ್ಸ್​ಆ್ಯಪ್​ನಿಂದ ಮತ್ತೆ 2 ಮಿಲಿಯನ್ ಭಾರತೀಯರ ಖಾತೆ ಬ್ಯಾನ್: ತಪ್ಪಿಯೂ ಹೀಗೆ ಮಾಡದಿರಿ

WhatsApp Banned 2.069 Million Accounts in India: ಅಕ್ಟೋಬರ್ (October) ತಿಂಗಳಿನಲ್ಲಿ ವಾಟ್ಸ್​ಆ್ಯಪ್ ತನ್ನ 2 ಮಿಲಿಯನ್​ ಭಾರತೀಯರ ಖಾತೆಗಳನ್ನು ಬ್ಯಾನ್​ ಮಾಡಿದೆಯಂತೆ. ಈ ಹಿಂದೆ ಸೆಪ್ಟೆಂಬರ್​ನಲ್ಲೂ ಇದೇರೀತಿ ಮಾಡಿತ್ತು. ನಿಷೇಧಕ್ಕೊಳಗಾದ ಎಲ್ಲ ವಾಟ್ಸ್​ಆ್ಯಪ್​ ಖಾತೆಗಳು ನಿಯಮಗಳನ್ನು ಉಲ್ಲಂಘಿಸಿದೆ.

WhatsApp: ವಾಟ್ಸ್​ಆ್ಯಪ್​ನಿಂದ ಮತ್ತೆ 2 ಮಿಲಿಯನ್ ಭಾರತೀಯರ ಖಾತೆ ಬ್ಯಾನ್: ತಪ್ಪಿಯೂ ಹೀಗೆ ಮಾಡದಿರಿ
WhatsApp Banned Indian Accounts
TV9 Web
| Updated By: Vinay Bhat|

Updated on: Dec 02, 2021 | 12:58 PM

Share

ಕಳೆದ ತಿಂಗಳಷ್ಟೆ ಸೆಪ್ಟೆಂಬರ್​ನಲ್ಲಿ ಎರಡು ಮಿಲಿಯನ್ ಭಾರತೀಯರ ಖಾತೆಯನ್ನು ನಿಷೇಧ ಮಾಡಿದ್ದೇವೆ ಎಂಬ ಆಘಾತಕಾರಿ ಸುದ್ದಿಯನ್ನು ವಾಟ್ಸ್​ಆ್ಯಪ್ (WhatsApp) ನೀಡಿತ್ತು. ಇದೀಗ ಅಕ್ಟೋಬರ್​​​ ತಿಂಗಳಿನಲ್ಲಿ ಮತ್ತೆ 2 ಮಿಲಿಯನ್​ ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು (WhatsApp Banned) ಬ್ಯಾನ್​ ಮಾಡಿದೆ. ಕಂಪನಿಯು ಅಕ್ಟೋಬರ್ (October) ತಿಂಗಳಿನಲ್ಲಿ ಭಾರತೀಯ ಅಧಿಕಾರಿಗಳಿಗೆ ಅನುಸರಣೆ ವರದಿಯ ಸಲ್ಲಿಸಿದ್ದು, ಇದರ ಪ್ರಕಾರ ಅನೇಕ ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು (WhatsApp Account) ಬ್ಯಾನ್​​ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಿಷೇಧಕ್ಕೊಳಗಾದ ಎಲ್ಲ ವಾಟ್ಸ್​ಆ್ಯಪ್​ ಖಾತೆಗಳು ನಿಯಮಗಳನ್ನು ಉಲ್ಲಂಘಿಸಿದೆ. ಹೀಗಾಗಿ ವಾಟ್ಸ್​ಆ್ಯಪ್ ಈ ಕ್ರಮಗಳನ್ನು ಕೈಗೊಂಡಿದೆಯಂತೆ. ಒಟ್ಟಾರೆಯಾಗಿ ಇತ್ತೀಚಿನ ವರದಿಯ ಪ್ರಕಾರ 2,069,000 ಭಾರತೀಯರ ವಾಟ್ಸ್​ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಕಂಪನಿ ಹೇಳಿದೆ.

ವಾಟ್ಸ್​ಆ್ಯಪ್​ ಪ್ಲಾಟ್‌ಫಾರ್ಮ್‌ನಲ್ಲಿನ ಸಂದೇಶಗಳು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಆಗಿವೆ. ಆದರೆ ಇದು ಬಳಕೆದಾರರ ವರದಿಗಳು, ಪ್ರೊಫೈಲ್ ಫೋಟೋಗಳು, ಗುಂಪು ಫೋಟೋಗಳು ಸೇರಿದಂತೆ ಲಭ್ಯವಿರುವ ಎನ್‌ಕ್ರಿಪ್ಟ್ ಮಾಡದ ಮಾಹಿತಿಯನ್ನು ಅವಲಂಬಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿ ತಿಳಿಸಿದೆ. ಜತೆಗೆ ಅದರ ಪ್ಲಾಟ್‌ಫಾರ್ಮ್‌ನಲ್ಲಿ ದುರ್ಬಳಕೆಯನ್ನು ಪತ್ತೆಹಚ್ಚಲು ಮತ್ತು ತಡೆಯಲು ವಿವಿಧ ರಿಪೋರ್ಟ್ ಮತ್ತು ಸುಧಾರಿತ AI ಪರಿಕರಗಳು (AI tools) ಮತ್ತು ಸಂಪನ್ಮೂಲಗಳು‌ ಬಳಸಿದೆ ಎಂದು ಅದು ಹೇಳಿದೆ.

ಅಕ್ಟೋಬರ್‌ನಲ್ಲಿ ಖಾತೆ ಬೆಂಬಲ (146), ಬ್ಯಾನ್ ಮೇಲ್ಮನವಿ (248), ಇತರ ಬೆಂಬಲ (42), ಉತ್ಪನ್ನ ಬೆಂಬಲ (53), ಮತ್ತು ಸುರಕ್ಷತೆ (11) ಮೂಲಕ 500 ಬಳಕೆದಾರರ ವರದಿಗಳನ್ನು ಸ್ವೀಕರಿಸಿದೆ ಎಂದು ಹೇಳಿದೆ. ಈ ಅವಧಿಯಲ್ಲಿ, ಸ್ವೀಕರಿಸಿದ ವರದಿಗಳ ಆಧಾರದ ಮೇಲೆ ನಿಷೇಧ ಮೇಲ್ಮನವಿ ವರ್ಗದ ಅಡಿಯಲ್ಲಿ 18 ವಿವಿಧ ವಿಚಾರಗಳ ಖಾತೆಗಳ ಮೇಲೆ ಬ್ಯಾನ್ ಮಾಡಲಾಗಿದೆ. ವಾಟ್ಸ್​ಆ್ಯಪ್​ ಐಟಿ ನಿಯಮಗಳು, 2021ಕ್ಕೆ ಅನುಗುಣವಾಗಿ ಅಪ್ಲಿಕೇಶನ್ ಜುಲೈನಿಂದ ಈ ಮಾಸಿಕ ವರದಿಗಳನ್ನು ಪ್ರಕಟಿಸುತ್ತಿದೆ. ನಿಯಮಗಳ ಪ್ರಕಾರ, ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ) ಪ್ರತಿ ತಿಂಗಳು ಅನುಸರಣೆ ವರದಿಗಳನ್ನು‌ ಪ್ರಕಟಿಸಬೇಕು.

ಶೇ. 95 ಕ್ಕಿಂತ ಹೆಚ್ಚು ನಿಷೇಧಗಳು, ಸ್ವಯಂಚಾಲಿತ ಅಥವಾ ಸ್ಪ್ಯಾಮ್ ಬಳಕೆಯಿಂದಾಗಿ ಅಥವಾ ಇನ್ನಿತರ ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂಕಷ್ಟ ಎದುರಾಗುರುವುದರಿಂದ ಆಗಿರುತ್ತದೆ. ವಾಟ್ಸ್​ಆ್ಯಪ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ನಿಂದನೆಯನ್ನು ತಡೆಯಲು ನಿಷೇಧಿಸುವ ಜಾಗತಿಕ ಸರಾಸರಿ ಖಾತೆಗಳ ಸಂಖ್ಯೆಯು ತಿಂಗಳಿಗೆ ಸುಮಾರು 8 ಮಿಲಿಯನ್ ಖಾತೆಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ.

ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು. ಹೀಗಾಗಿ ಎಚ್ಚರದಿಂದಿರಿ.

Fast Charging: ಫಾಸ್ಟ್​ ಚಾರ್ಜರ್​ಗಿಂತ ಫಾಸ್ಟ್ ಆಗಿ ನಿಮ್ಮ ಮೊಬೈಲ್ ಚಾರ್ಜ್ ಆಗಬೇಕೆ?: ಇಲ್ಲಿದೆ ನೋಡಿ ಟ್ರಿಕ್

(WhatsApp again banned over 2 million accounts in India in the month of October)

ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?