AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ವಾಟ್ಸ್ಆ್ಯಪ್​ನಿಂದ ದೊಡ್ಡ ಕ್ರಮ: ಭಾರತದಲ್ಲಿ 98 ಲಕ್ಷಕ್ಕೂ ಹೆಚ್ಚು ಖಾತೆ ಬ್ಯಾನ್

WhatsApp Ban India: ಭಾರತದಲ್ಲಿ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್​ನ ಹಲವು ಖಾತೆಗಳನ್ನು ನಿಷೇಧಿಸಲಾಗಿದೆ. 98 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸ್ಆ್ಯಪ್ ಹೇಳಿದೆ. ಈ ನಿರ್ಧಾರಕ್ಕೆ ಕಾರಣವನ್ನು ನೀಡಲಾಗಿದ್ದು, ಭಾರತದಲ್ಲಿ ವಾಟ್ಸ್ಆ್ಯಪ್ ಬಳಸುವ ನಿಯಮಗಳನ್ನು ಉಲ್ಲಂಘಿಸುತ್ತಿದ್ದ ಖಾತೆಗಳನ್ನು ಮುಚ್ಚಲಾಗಿದೆ ಎಂದು ಕಂಪನಿ ಹೇಳಿದೆ.

WhatsApp Ban: ವಾಟ್ಸ್ಆ್ಯಪ್​ನಿಂದ ದೊಡ್ಡ ಕ್ರಮ: ಭಾರತದಲ್ಲಿ 98 ಲಕ್ಷಕ್ಕೂ ಹೆಚ್ಚು ಖಾತೆ ಬ್ಯಾನ್
Whatsapp
ಮಾಲಾಶ್ರೀ ಅಂಚನ್​
| Updated By: Vinay Bhat|

Updated on:Aug 06, 2025 | 9:24 AM

Share

ಬೆಂಗಳೂರು (ಆ. 06): ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ (WhatsApp)​ ಮತ್ತೊಮ್ಮೆ ದೊಡ್ಡ ಕ್ರಮ ಕೈಗೊಂಡಿದ್ದು, 98 ಲಕ್ಷ ಭಾರತೀಯ ಬಳಕೆದಾರರ ಖಾತೆಗಳನ್ನು ನಿಷೇಧಿಸಿದೆ. ಮೆಟಾ ತನ್ನ ಜೂನ್ ಅನುಸರಣಾ ವರದಿಯಲ್ಲಿ ಇದನ್ನು ಪ್ರಕಟಿಸಿದೆ. ದುರುಪಯೋಗ ಮತ್ತು ವದಂತಿಗಳನ್ನು ಹರಡುವುದು ಇತ್ಯಾದಿಗಳಿಂದಾಗಿ ತ್ವರಿತ ಸಂದೇಶ ವೇದಿಕೆ ಈ ವಾಟ್ಸ್​ಆ್ಯಪ್​ ಖಾತೆಗಳ ಮೇಲೆ ಈ ಕ್ರಮ ಕೈಗೊಂಡಿದೆ. ಈ ಹಿಂದೆಯೂ ಸಹ ವಾಟ್ಸ್​ಆ್ಯಪ್​ ಭಾರತದಲ್ಲಿ ಲಕ್ಷಾಂತರ ಬಳಕೆದಾರರ ಖಾತೆಗಳನ್ನು ನಿಷೇಧಿಸಿತ್ತು. ಪ್ರತಿ ತಿಂಗಳು ವಾಟ್ಸ್​ಆ್ಯಪ್​ ಈರೀತಿಯ ಕ್ರಮವನ್ನು ಕೈಗೊಳ್ಳುತ್ತಿದೆ.

16 ಕ್ಕೂ ಹೆಚ್ಚು ನಿಷೇಧ ವಿನಂತಿಗಳು

ಜೂನ್‌ನಲ್ಲಿ ಖಾತೆಗಳನ್ನು ನಿಷೇಧಿಸಲು ವಾಟ್ಸ್​ಆ್ಯಪ್​ಗೆ 16 ಸಾವಿರಕ್ಕೂ ಹೆಚ್ಚು ವಿನಂತಿಗಳು ಬಂದಿವೆ. ಜೂನ್ ತಿಂಗಳಲ್ಲಿ, ಕಂಪನಿಯು ಈ ಖಾತೆಗಳ ಮೇಲೆ ಕ್ರಮ ಕೈಗೊಂಡು 16,069 ಖಾತೆಗಳನ್ನು ಪ್ಲಾಟ್‌ಫಾರ್ಮ್‌ನಿಂದ ನಿಷೇಧಿಸಿದೆ. 19.79 ಲಕ್ಷ ಖಾತೆಗಳನ್ನು ನಿಷೇಧಿಸುವಂತೆ ಬಳಕೆದಾರರು ವರದಿ ಮಾಡಿದ್ದಾರೆ. ಮೆಟಾ ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್, 2021 ರ ಮಾರ್ಗಸೂಚಿಗಳ ಅಡಿಯಲ್ಲಿ ವಾಟ್ಸಾಪ್ ಖಾತೆಗಳ ಮೇಲೆ ಕ್ರಮ ಕೈಗೊಂಡಿದೆ.

ಇದನ್ನೂ ಓದಿ
Image
ಆಂಡ್ರಾಯ್ಡ್​ನಿಂದ ಐಫೋನ್​ಗೆ ಸುಲಭವಾಗಿ ಡೇಟಾ ಟ್ರಾನ್ಸ್ಫರ್ ಮಾಡುವುದು ಹೇಗೆ?
Image
ಫ್ಲಿಪ್‌ಕಾರ್ಟ್ vs ಅಮೆಜಾನ್, ಅಗ್ಗದ ಐಫೋನ್ 16 ಯಾವುದರಲ್ಲಿ ಖರೀದಿಸಬಹುದು?
Image
ವಾಟ್ಸ್ಆ್ಯಪ್ ಚಾಟ್ ಅನ್ನು ಹೈಡ್ ಮಾಡಲು ಬಯಸುವಿರಾ? ಹೀಗೆ ಮಾಡಿ..
Image
ಆನ್​ಲೈನ್​ನಲ್ಲಿ ನಿಮ್ಮ ಫೋಟೋ-ವಿಡಿಯೋ ಲೀಕ್ ಆದ್ರೆ ಡಿಲೀಟ್ ಮಾಡೋದು ಹೇಗೆ?

ಅನುಸರಣಾ ವರದಿಯ ಪ್ರಕಾರ, ಜೂನ್ ತಿಂಗಳಲ್ಲಿ ವಾಟ್ಸ್​ಆ್ಯಪ್​ ಒಟ್ಟಾರೆಯಾಗಿ 23,596 ವಿನಂತಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ ಕಂಪನಿಯು 1,001 ಖಾತೆಗಳ ಮೇಲೆ ಕ್ರಮ ಕೈಗೊಂಡಿದೆ. ನಿಷೇಧ ವಿನಂತಿಗಳನ್ನು ಹೊಂದಿರುವ 756 ಖಾತೆಗಳ ಮೇಲೆ ವಾಟ್ಸ್​ಆ್ಯಪ್​ ಕ್ರಮ ಕೈಗೊಂಡಿದೆ. ಉಳಿದ ಎಲ್ಲಾ ದೂರುಗಳು ಖಾತೆ ಸಹಾಯ, ಉತ್ಪನ್ನ ಸಂಬಂಧಿತ ಪ್ರಶ್ನೆಗಳು ಮತ್ತು ಸುರಕ್ಷತಾ ಪ್ರಶ್ನೆಗಳು ಇತ್ಯಾದಿಗಳಿಗೆ ಸಂಬಂಧಿಸಿವೆ.

ಮೂರು ಹಂತದ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತದೆ

ಕಂಪನಿಯು ಈಗಾಗಲೇ ತನ್ನ ವೇದಿಕೆಯಲ್ಲಿ ಎಲ್ಲಾ ರೀತಿಯ ಆಕ್ಷೇಪಾರ್ಹ ಚಟುವಟಿಕೆಗಳು ಮತ್ತು ವಿಷಯವನ್ನು ಪತ್ತೆಹಚ್ಚುತ್ತಿದೆ ಎಂದು ವಾಟ್ಸ್​ಆ್ಯಪ್​ ಹೇಳಿದೆ. ಇದಕ್ಕಾಗಿ, ಕಂಪನಿಯು ದುರುಪಯೋಗ ಪತ್ತೆ ವ್ಯವಸ್ಥೆಯನ್ನು ರಚಿಸಿದೆ, ಇದು ಮೂರು ಪ್ರಮುಖ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಖಾತೆ ಸೆಟಪ್, ಸಂದೇಶ ಕಳುಹಿಸುವಿಕೆ ಮತ್ತು ಪ್ರತಿಕ್ರಿಯೆ ಅಥವಾ ನಕಾರಾತ್ಮಕ ಪ್ರತಿಕ್ರಿಯೆಯನ್ನು ಒಳಗೊಂಡಿದೆ.

Tech Tips: ಆಂಡ್ರಾಯ್ಡ್​ನಿಂದ ಐಫೋನ್​ಗೆ ಸುಲಭವಾಗಿ ಡೇಟಾ ಟ್ರಾನ್ಸ್ಫರ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್ಸ್

ವಾಟ್ಸ್​ಆ್ಯಪ್​ ಪರವಾಗಿ ಮಾಹಿತಿ ನೀಡಿದ ವಕ್ತಾರರು, ವಾಟ್ಸ್​ಆ್ಯಪ್​ ಹಲವು ವರ್ಷಗಳಿಂದ ಕೃತಕ ಬುದ್ಧಿಮತ್ತೆಯ ಮೇಲೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಇದರೊಂದಿಗೆ, ನಮ್ಮ ಡೇಟಾ ವಿಜ್ಞಾನಿಗಳು ಮತ್ತು ತಜ್ಞರು ನಮ್ಮ ಪ್ಲಾಟ್‌ಫಾರ್ಮ್‌ನಲ್ಲಿರುವ ಎಲ್ಲಾ ಬಳಕೆದಾರರಿಗೆ ಸಂಪೂರ್ಣ ಸುರಕ್ಷತೆಯನ್ನು ಒದಗಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಜನರ ಸುರಕ್ಷತೆಗೆ ಧಕ್ಕೆ ತರುತ್ತಿದ್ದ ತಪ್ಪು ವಿಷಯಗಳನ್ನು ತಡೆಯಲು ವಾಟ್ಸ್​ಆ್ಯಪ್​ ಈ ಕ್ರಮ ಕೈಗೊಂಡಿದೆ.

50 ಸಾವಿರ ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಮೆಟಾ ಸೇರಿದಂತೆ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಪ್ರತಿ ತಿಂಗಳು ಮಾಸಿಕ ಅನುಸರಣಾ ವರದಿಯನ್ನು ನೀಡಬೇಕು. ಈ ವರದಿಯಲ್ಲಿ, ಕಂಪನಿಗಳು ಬಳಕೆದಾರರ ಖಾತೆಗಳ ಮೇಲೆ ತೆಗೆದುಕೊಂಡ ಕ್ರಮ ಮತ್ತು ಸ್ವೀಕರಿಸಿದ ವಿನಂತಿಗಳ ವಿವರವಾದ ವರದಿಯನ್ನು ನೀಡಬೇಕು. ಸಾಮಾಜಿಕ ಮಾಧ್ಯಮ ಕಂಪನಿಯು ಬಳಕೆದಾರರ ಖಾತೆಯ ಮೇಲೆ ಉದ್ದೇಶಪೂರ್ವಕವಾಗಿ ಯಾವುದೇ ಕ್ರಮ ಕೈಗೊಂಡರೆ, ಅವರು ಮೇಲ್ಮನವಿ ಸಮಿತಿಗೆ ಹೋಗಬಹುದು. ಆದಾಗ್ಯೂ, ಸಾಮಾಜಿಕ ಮಾಧ್ಯಮ ವೇದಿಕೆಯಿಂದ ಬಳಕೆದಾರರ ಖಾತೆಯನ್ನು ಉದ್ದೇಶಪೂರ್ವಕವಾಗಿ ನಿಷೇಧಿಸುವುದು ಅಪರೂಪ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:24 am, Wed, 6 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!