AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Ban: ಮಾರ್ಚ್ ತಿಂಗಳಲ್ಲಿ ಭಾರತದ 47 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

WhatsApp Ban: ಮಾರ್ಚ್ ತಿಂಗಳಲ್ಲಿ ಭಾರತದ 47 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
WhatsApp
TV9 Web
| Updated By: Vinay Bhat|

Updated on: May 02, 2023 | 2:57 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 47 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,715,906 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 46 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ. ಮೇ 26 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ ದೊಡ್ಡ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು (5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರು) ಪ್ರತಿ ತಿಂಗಳು ವರದಿಗಳನ್ನು ಪ್ರಕಟಿಸಬೇಕು. ಈ ವರದಿಯಲ್ಲಿ ಸ್ವೀಕರಿಸಿದ ದೂರುಗಳು ಹಾಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು.

ಪಾಕಿಸ್ತಾನದಲ್ಲಿರುವ ತಮ್ಮ ನಾಯಕರಿಗೆ ರಹಸ್ಯ ಸಂದೇಶ ಕಳುಹಿಸಲು ಉಗ್ರರು ಬಳಸುತ್ತಿದ್ದ 14 ಮೆಸೆಂಜರ್ ಆ್ಯಪ್​ಗಳನ್ನು ನಿಷೇಧಿಸಿದ ಭಾರತ ಸರ್ಕಾರ

ಇದನ್ನೂ ಓದಿ
Image
Realme Anniversary Sale: ಭಾರತದ ಮಾರುಕಟ್ಟೆಗೆ ರಿಯಲ್ ಮಿ ಕಾಲಿಟ್ಟು 5 ವರ್ಷ: ಸ್ಮಾರ್ಟ್​ಫೋನ್, ಲ್ಯಾಪ್​ಟಾಪ್​ಗಳ ಮೇಲೆ ಬಂಪರ್ ಆಫರ್ ಘೋಷಣೆ
Image
JIO-Airtel: ಈ ರೀಚಾರ್ಜ್ ಮಾಡಿಕೊಂಡರೆ ಒಂದು ವರ್ಷದ ವರೆಗೆ ಯಾವುದೇ ಟೆನ್ಶನ್ ಬೇಡ
Image
Tech Tips: ನೀವು ರಾಂಗ್ ನಂಬರ್​ಗೆ ರೀಚಾರ್ಜ್ ಮಾಡಿದ್ದೀರಾ?: ಹಣ ವಾಪಸ್ ಪಡೆಯಲು ಇಲ್ಲಿದೆ ನೋಡಿ ಟ್ರಿಕ್
Image
TRAI Spam Filter: ಟ್ರಾಯ್ ಹೊಸ ನಿಯಮ ಇಂದಿನಿಂದ ಜಾರಿ: ಸ್ಪ್ಯಾಮ್ ಕರೆ, ಎಸ್​ಎಮ್​ಎಸ್​ ಬ್ಯಾನ್

ವಾಟ್ಸ್​ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್​ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ. ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.

ವಿಡಿಯೋ ಮೆಸೇಜ್:

ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆ. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?