WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಚಾಟ್ ಲಾಕ್ ಫೀಚರ್: ಹೇಗೆ ಬಳಸುವುದು?

ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಚಾಟ್ ಲಾಕ್ ಫೀಚರ್: ಹೇಗೆ ಬಳಸುವುದು?
ವಾಟ್ಸ್​​ಆ್ಯಪ್
Follow us
|

Updated on: May 20, 2023 | 2:47 PM

ವಾಟ್ಸ್​ಆ್ಯಪ್ ಅನ್ನು ಇಂದು ಬಳಕೆ ಮಾಡುವವರ ಸಂಖ್ಯೆ ಭಾರತದಲ್ಲೇ 550 ಮಿಲಿಯನ್ ದಾಟಿದೆ. ಪ್ರತಿ ತಿಂಗಳು ಒಂದಲ್ಲ ಒಂದು ಹೊಸ ಅಪ್ಡೇಟ್ ಬಿಡುಗಡೆ ಮಾಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ (WhatsApp) ಸಾಲು ಸಾಲು ಫೀಚರ್​ಗಳು ಪರೀಕ್ಷಾ ಹಂತದಲ್ಲಿದೆ. ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ನೂತನ ಆಯ್ಕೆಗಳನ್ನು ಬಿಡುಗಡೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ದಿನಗಳಲ್ಲಿ ಊಹಿಸಲಾಗದ ಫೀಚರ್​ಗಳು ಬರಲಿದೆ. ಬಳಕೆದಾರರ ಪ್ರೈವಸಿ ವಿಚಾರದಲ್ಲಿ ಯಾವಾಗಲೂ ಮುಂದಿರುವ ವಾಟ್ಸ್​ಆ್ಯಪ್ ಇದೀಗ ಚಾಟ್ ಲಾಕ್ (Chat Lock) ಎಂಬ ಹೊಸ ಆಯ್ಕೆಯೊಂದನ್ನು ನೀಡಿದೆ. ಕೆಲ ವಾಟ್ಸ್​​ಆ್ಯಪ್ ಬೀಟಾ ಪರೀಕ್ಷಕರು ತಮಗೆ ಬೇಕಾದ ಚಾಟ್ ಅನ್ನು ಲಾಕ್ ಮಾಡಬಹುದು ಅಥವಾ ಹೈಡ್ (Hide) ಮಾಡಬಹುದು.

ಹೆಚ್ಚುವರಿ ಗೌಪ್ಯತೆ ಮತ್ತು ಭದ್ರತೆಯನ್ನು ಮೆಟಾ ಮಾಲೀಕತ್ವದ ಅಪ್ಲಿಕೇಶನ್ ತನ್ನ ಬಳಕೆದಾರರಿಗೆ ನೀಡಲು ಮುಂದಾಗಿದೆ. ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಲಾಕ್ ಮಾಡಿದಾಗ ಬಳಕೆದಾರರು ತಮ್ಮ ಫಿಂಗರ್‌ಪ್ರಿಂಟ್ ಅಥವಾ ಪಾಸ್‌ಕೋಡ್ ಅನ್ನು ಬಳಸಿಕೊಂಡು ಮಾತ್ರ ತೆರೆಯಲು ಸಾಧ್ಯವಾಗುತ್ತದೆ. ಹೀಗಿದ್ದಾಗ ಇದನ್ನು ಬೇರೆ ಯಾರೂ ಸಹ ವೀಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಈ ಆಯ್ಕೆ ಚಾಟ್​ನ ಕಾಂಟೆಕ್ಟ್ ಅಥವಾ ಗ್ರೂಪ್​ನ ಇನ್​ಫೋದಲ್ಲಿ ಇರುತ್ತದೆ. ಇದನ್ನು ಆ್ಯಕ್ಟಿವ್ ಮಾಡಿದ ತಕ್ಷಣ ಆ ಚಾಟ್ ಹೈಡ್ ಆಗಿ ಹೊಸ ಸೆಕ್ಷನ್​ಗೆ ಹೋಗುತ್ತದೆ.

Vivo Y78 5G: ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೊ

ಇದನ್ನೂ ಓದಿ
Image
Google Pixel 6a: ಧಮಾಕ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್
Image
Gaming Phones Under 30K: 30,000 ರೂ. ಗಿಂತ ಕಡಿಮೆಗೆ ಸಿಗುತ್ತಿರುವ ಅತ್ಯುತ್ತಮ ಗೇಮಿಂಗ್ ಸ್ಮಾರ್ಟ್​ಫೊನ್ಸ್ ಇಲ್ಲಿದೆ ನೋಡಿ
Image
Motorola Edge 40: ಮೇ 23ಕ್ಕೆ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರಂಟಿ
Image
Canon PowerShot V10: ಕ್ಯಾನನ್ ಸೂಪರ್ ಪವರ್​ಫುಲ್ ಪಾಕೆಟ್ ಕ್ಯಾಮೆರಾ

ಚಾಟ್ ಲಾಕ್ ಫೀಚರ್ ಬಳಸುವುದು ಹೇಗೆ?:

  • ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ವಾಟ್ಸ್​ಆ್ಯಪ್​ ಅನ್ನು ಮೊದಲು ಅಪ್​ಡೇಟ್​ ಮಾಡಿ.
  • ಚಾಟ್‌ಗಳನ್ನು ಲಾಕ್ ಮಾಡಲು ವಾಟ್ಸ್​ಆ್ಯಪ್​ ಕಾಂಟ್ಯಾಕ್ಟ್ ಪ್ರೊಫೈಲ್ ವಿಭಾಗ ಓಪನ್​ ಮಾಡಬೇಕು.
  • ಕೆಳಗೆ ಸ್ಕ್ರೋಲ್​ ಮಾಡಿದಾಗ ಚಾಟ್ ಲಾಕ್ ಆಯ್ಕೆ ಕಾಣಿಸುತ್ತದೆ
  • ಚಾಟ್ ಲಾಕ್ ಟ್ಯಾಪ್ ಮಾಡಿದರೆ ಲಾಕ್ ದಿಸ್ ಚಾಟ್ ವಿತ್ ಫಿಂಗರ್‌ಪ್ರಿಂಟ್ ಆಯ್ಕೆಯನ್ನು ಆಕ್ಟೀವ್​ ಮಾಡಬೇಕು.
  • ಫಿಂಗರ್‌ಪ್ರಿಂಟ್‌, ಪಾಸ್​ ಕೋಡ್​ ಅಥವಾ ಫೇಸ್​ ಐಡಿಯೊಂದಿಗೂ ಚಾಟ್ ಅನ್ನು ಲಾಕ್ ಮಾಡಬಹುದು.
  • ಲಾಕ್ಡ್ ಚಾಟ್ಸ್ ಎಂಬ ಫೋಲ್ಡರ್‌ನಲ್ಲಿ ಈ ಚಾಟ್​​ಗಳು ಗೌಪ್ಯವಾಗಿ ಇರಲಿವೆ.

ಎಡಿಟ್ ಸೆಂಟ್ ಮೆಸೇಜ್:

ವಾಟ್ಸ್​​ಆ್ಯಪ್ ಕೆಲವೇ ದಿನಗಳಲ್ಲಿ ಎಡಿಟ್ ಸೆಂಟ್ ಮೆಸೇಜ್ ಎಂಬ ನೂತನ ಅಪ್ಡೇಟ್ ಪರಿಚಯಿಸಲಿದೆ. ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಈಗಾಗಲೇ ಈ ಆಯ್ಕೆ ಆಯ್ದ ಆಂಡ್ರಾಯ್ಡ್ ಬೇಟಾ ವರ್ಷನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಲಭ್ಯವಾಗುತ್ತಿದೆ. ಇದರ ಮೂಲಕ ಬಳಕೆದಾರರು ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ, ಇದಕ್ಕೆ 15 ನಿಮಿಷಗಳ ಕಾಲವಕಾಶ ಮಾತ್ರ ಇರುತ್ತದೆ. ಪ್ರಸ್ತುತ, ವಾಟ್ಸ್​ಆ್ಯಪ್​​ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು, ಆದರೆ ಎಡಿಟ್‌ ಮಾಡಲು ಸಾಧ್ಯವಿಲ್ಲ. ಈ ವೈಶಿಷ್ಟ್ಯವನ್ನು ಬಳಸಿ ಮೆಸೇಜ್ ಕಳುಹಿಸಿದ ನಂತರ ಅವುಗಳನ್ನು ಎಡಿಟ್‌ ಮಾಡಲು ಸಾಧ್ಯವಾಗಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್