AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ

ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ
WhatsApp
TV9 Web
| Updated By: Vinay Bhat|

Updated on:Oct 25, 2022 | 2:55 PM

Share

ಭಾರತ ಹಲವು ನಗರಗಳಲ್ಲಿ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದರೀಗ ಮೆಟಾ ಈ ಸಮಸ್ಯೆಯನ್ನು ಬರೆ ಹರಿಸಿದೆ. ಮಧ್ಯಾಹ್ನ 2:30 ರಿಂದ ಮೆಸೇಜ್ ಕಳುಹಿಸಲು ಮತ್ತು ರಿಸೀವ್ ಮಾಡಲು ಸಾಧ್ಯವಾಗುತ್ತಿದೆ. ಇದಕ್ಕೂ ಮುನ್ನ ಆಂಡ್ರ್ಯಾಯ್ಡ್ (Android), ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿರಲಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿರಲಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿರಲಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿರಲಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡಿದ್ದರು. ಬಳಕೆದಾರರು ವಾಟ್ಸ್​ಆ್ಯಪ್ ಅಪ್ಲಿಕೇಷನ್ ಬಳಕೆಯಲ್ಲಿ ಎದುರಿಸುತ್ತಿರುವ ತೊಂದರೆಯ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ವಾಟ್ಸ್​ಆ್ಯಪ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

2000 ಕ್ಕೂ ಅಧಿಕ ಬಳಕೆದಾರರು ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಶೇ. 69 ರಷ್ಟು ಬಳಕೆದಾರರು ವಾಟ್ಸ್​ಆ್ಯಪ್ ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಮುಖ ಟ್ರ್ಯಾಕರ್ ಡೌನ್​ಡಿಟೆಕ್ಟರ್ ಹೇಳಿದೆ. ಫೇಸ್​ಬುಕ್, ಇನ್​ಸ್ಟಾಗ್ರಾಮ್ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ವಾಟ್ಸ್​ಆ್ಯಪ್​ನಲ್ಲಿ ಮಾತ್ರ ಈ ಸಮಸ್ಯೆ ಕಂಡುಬಂದಿದೆ. ಸದ್ಯ ವಾಟ್ಸ್​ಆ್ಯಪ್ ಈ ಸಮಸ್ಯೆಯನ್ನು ಬಗೆಹರಿಸಿದೆ.

ಈ ಬಗ್ಗೆ ವಾಟ್ಸ್​ಆ್ಯಪ್ ಮಾಹಿತಿ ಹಂಚಿಕೊಂಡಿದ್ದು, ”ಕಳೆದ ಕೆಲವು ಸಮಯದಿಂದ ಬಳಕೆದಾರರು ವಾಟ್ಸ್​ಆ್ಯಪ್ ಉಪಯೋಗಿಸಲು ಸಾಧ್ಯವಾಗುತ್ತಿರಲಿಲ್ಲ. ಸಮಸ್ಯೆಯನ್ನು ಪರಿಗಣಿಸಿ ಇದನ್ನು ಸರಿಪಡಿಸಿದ್ದೇವೆ. ಈಗ ಎಲ್ಲರೂ ವಾಟ್ಸ್​ಆ್ಯಪ್ ಹಿಂದಿನಂತೆ ಉಪಯೋಗಿಸಬಹುದು,” ಎಂದು ಹೇಳಿದೆ.

ಟ್ವಿಟ್ಟರ್‌ನಲ್ಲಿ ವಾಟ್ಸ್​ಆ್ಯಪ್ ಡೌನ್ ಕುರಿತ ಮೀಮ್ಸ್‌ ಸಖತ್ ವೈರಲ್ ಆಗುತ್ತಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ…

Published On - 1:08 pm, Tue, 25 October 22

ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿಯ ಆಚರಣೆಯ ಮಹತ್ವ ಹಾಗೂ ಅದರ ಫಲ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ನಾಗರ ಪಂಚಮಿ ಹಬ್ಬದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ