AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ

ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ
WhatsApp
TV9 Web
| Edited By: |

Updated on:Oct 25, 2022 | 2:55 PM

Share

ಭಾರತ ಹಲವು ನಗರಗಳಲ್ಲಿ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದರೀಗ ಮೆಟಾ ಈ ಸಮಸ್ಯೆಯನ್ನು ಬರೆ ಹರಿಸಿದೆ. ಮಧ್ಯಾಹ್ನ 2:30 ರಿಂದ ಮೆಸೇಜ್ ಕಳುಹಿಸಲು ಮತ್ತು ರಿಸೀವ್ ಮಾಡಲು ಸಾಧ್ಯವಾಗುತ್ತಿದೆ. ಇದಕ್ಕೂ ಮುನ್ನ ಆಂಡ್ರ್ಯಾಯ್ಡ್ (Android), ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿರಲಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿರಲಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿರಲಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿರಲಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡಿದ್ದರು. ಬಳಕೆದಾರರು ವಾಟ್ಸ್​ಆ್ಯಪ್ ಅಪ್ಲಿಕೇಷನ್ ಬಳಕೆಯಲ್ಲಿ ಎದುರಿಸುತ್ತಿರುವ ತೊಂದರೆಯ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ವಾಟ್ಸ್​ಆ್ಯಪ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

2000 ಕ್ಕೂ ಅಧಿಕ ಬಳಕೆದಾರರು ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಶೇ. 69 ರಷ್ಟು ಬಳಕೆದಾರರು ವಾಟ್ಸ್​ಆ್ಯಪ್ ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಮುಖ ಟ್ರ್ಯಾಕರ್ ಡೌನ್​ಡಿಟೆಕ್ಟರ್ ಹೇಳಿದೆ. ಫೇಸ್​ಬುಕ್, ಇನ್​ಸ್ಟಾಗ್ರಾಮ್ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ವಾಟ್ಸ್​ಆ್ಯಪ್​ನಲ್ಲಿ ಮಾತ್ರ ಈ ಸಮಸ್ಯೆ ಕಂಡುಬಂದಿದೆ. ಸದ್ಯ ವಾಟ್ಸ್​ಆ್ಯಪ್ ಈ ಸಮಸ್ಯೆಯನ್ನು ಬಗೆಹರಿಸಿದೆ.

ಈ ಬಗ್ಗೆ ವಾಟ್ಸ್​ಆ್ಯಪ್ ಮಾಹಿತಿ ಹಂಚಿಕೊಂಡಿದ್ದು, ”ಕಳೆದ ಕೆಲವು ಸಮಯದಿಂದ ಬಳಕೆದಾರರು ವಾಟ್ಸ್​ಆ್ಯಪ್ ಉಪಯೋಗಿಸಲು ಸಾಧ್ಯವಾಗುತ್ತಿರಲಿಲ್ಲ. ಸಮಸ್ಯೆಯನ್ನು ಪರಿಗಣಿಸಿ ಇದನ್ನು ಸರಿಪಡಿಸಿದ್ದೇವೆ. ಈಗ ಎಲ್ಲರೂ ವಾಟ್ಸ್​ಆ್ಯಪ್ ಹಿಂದಿನಂತೆ ಉಪಯೋಗಿಸಬಹುದು,” ಎಂದು ಹೇಳಿದೆ.

ಟ್ವಿಟ್ಟರ್‌ನಲ್ಲಿ ವಾಟ್ಸ್​ಆ್ಯಪ್ ಡೌನ್ ಕುರಿತ ಮೀಮ್ಸ್‌ ಸಖತ್ ವೈರಲ್ ಆಗುತ್ತಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ…

Published On - 1:08 pm, Tue, 25 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್