AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ

ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ.

WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ
WhatsApp
TV9 Web
| Edited By: |

Updated on:Oct 25, 2022 | 2:55 PM

Share

ಭಾರತ ಹಲವು ನಗರಗಳಲ್ಲಿ ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ (WhatsApp) ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದರೀಗ ಮೆಟಾ ಈ ಸಮಸ್ಯೆಯನ್ನು ಬರೆ ಹರಿಸಿದೆ. ಮಧ್ಯಾಹ್ನ 2:30 ರಿಂದ ಮೆಸೇಜ್ ಕಳುಹಿಸಲು ಮತ್ತು ರಿಸೀವ್ ಮಾಡಲು ಸಾಧ್ಯವಾಗುತ್ತಿದೆ. ಇದಕ್ಕೂ ಮುನ್ನ ಆಂಡ್ರ್ಯಾಯ್ಡ್ (Android), ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿರಲಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿರಲಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿರಲಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿರಲಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡಿದ್ದರು. ಬಳಕೆದಾರರು ವಾಟ್ಸ್​ಆ್ಯಪ್ ಅಪ್ಲಿಕೇಷನ್ ಬಳಕೆಯಲ್ಲಿ ಎದುರಿಸುತ್ತಿರುವ ತೊಂದರೆಯ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ವಾಟ್ಸ್​ಆ್ಯಪ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

2000 ಕ್ಕೂ ಅಧಿಕ ಬಳಕೆದಾರರು ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರು ನೀಡಿದ್ದಾರೆ. ಶೇ. 69 ರಷ್ಟು ಬಳಕೆದಾರರು ವಾಟ್ಸ್​ಆ್ಯಪ್ ಮೆಸೇಜ್ ಕಳುಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಮುಖ ಟ್ರ್ಯಾಕರ್ ಡೌನ್​ಡಿಟೆಕ್ಟರ್ ಹೇಳಿದೆ. ಫೇಸ್​ಬುಕ್, ಇನ್​ಸ್ಟಾಗ್ರಾಮ್ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ವಾಟ್ಸ್​ಆ್ಯಪ್​ನಲ್ಲಿ ಮಾತ್ರ ಈ ಸಮಸ್ಯೆ ಕಂಡುಬಂದಿದೆ. ಸದ್ಯ ವಾಟ್ಸ್​ಆ್ಯಪ್ ಈ ಸಮಸ್ಯೆಯನ್ನು ಬಗೆಹರಿಸಿದೆ.

ಈ ಬಗ್ಗೆ ವಾಟ್ಸ್​ಆ್ಯಪ್ ಮಾಹಿತಿ ಹಂಚಿಕೊಂಡಿದ್ದು, ”ಕಳೆದ ಕೆಲವು ಸಮಯದಿಂದ ಬಳಕೆದಾರರು ವಾಟ್ಸ್​ಆ್ಯಪ್ ಉಪಯೋಗಿಸಲು ಸಾಧ್ಯವಾಗುತ್ತಿರಲಿಲ್ಲ. ಸಮಸ್ಯೆಯನ್ನು ಪರಿಗಣಿಸಿ ಇದನ್ನು ಸರಿಪಡಿಸಿದ್ದೇವೆ. ಈಗ ಎಲ್ಲರೂ ವಾಟ್ಸ್​ಆ್ಯಪ್ ಹಿಂದಿನಂತೆ ಉಪಯೋಗಿಸಬಹುದು,” ಎಂದು ಹೇಳಿದೆ.

ಟ್ವಿಟ್ಟರ್‌ನಲ್ಲಿ ವಾಟ್ಸ್​ಆ್ಯಪ್ ಡೌನ್ ಕುರಿತ ಮೀಮ್ಸ್‌ ಸಖತ್ ವೈರಲ್ ಆಗುತ್ತಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ…

Published On - 1:08 pm, Tue, 25 October 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ