AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸಾಪ್, ಇನ್​ಸ್ಟಾಗ್ರಾಂ, ಫೇಸ್​ಬುಕ್ ಡೌನ್; ಸೋಷಿಯಲ್ ಮೀಡಿಯಾ ಬಳಕೆದಾರರ ಪರದಾಟ

WhatsApp, Facebook, Instagram: ಹಲವರು ತಮಗಾದ ಅನುಭವಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಅಪ್ಲಿಕೇಷನ್​ಗಳು ವೆಬ್ ಅಥವಾ ಸ್ಮಾರ್ಟ್​ಫೋನ್​ಗಳಲ್ಲಿ ಕೂಡ ಕೆಲಸ ಮಾಡುತ್ತಿಲ್ಲ. ಈ ಸಮಸ್ಯೆ ಆಂಡ್ರಾಯ್ಡ್ ಹಾಗೂ ಐಒಎಸ್ ಮತ್ತು ವೆಬ್​ ಮೂರರಲ್ಲೂ (Android, iOS) ಆಗಿರುವ ಬಗ್ಗೆ ತಿಳಿದುಬಂದಿದೆ.

ವಾಟ್ಸಾಪ್, ಇನ್​ಸ್ಟಾಗ್ರಾಂ, ಫೇಸ್​ಬುಕ್ ಡೌನ್; ಸೋಷಿಯಲ್ ಮೀಡಿಯಾ ಬಳಕೆದಾರರ ಪರದಾಟ
WhatsApp
Follow us
TV9 Web
| Updated By: ganapathi bhat

Updated on:Oct 04, 2021 | 10:04 PM

ಜನರು ಬಹುವಾಗಿ ಬಳಸುವ ಪ್ರಮುಖ ಅಪ್ಲಿಕೇಷನ್​ಗಳಾದ ವಾಟ್ಸಾಪ್, ಫೇಸ್​ಬುಕ್ ಹಾಗೂ ಇನ್​ಸ್ಟಾಗ್ರಾಂ ಸೋಷಿಯಲ್ ಮೀಡಿಯಾಗಳು ಸೋಮವಾರ ಸಂಜೆ (ಅಕ್ಟೋಬರ್ 4) ಕ್ರಾಶ್ ಆಗಿವೆ. ವಿಶ್ವದ ಬಹಳಷ್ಟು ಕಡೆಗಳಲ್ಲಿ ಈ ಸಮಸ್ಯೆ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸೋಷಿಯಲ್ ಮೀಡಿಯಾ ಬಳಸುವ ಅಸಂಖ್ಯ ಜನರು ಪರದಾಡುವಂತಾಗಿದೆ. ಹಲವರು ತಮಗಾದ ಅನುಭವಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಅಪ್ಲಿಕೇಷನ್​ಗಳು ವೆಬ್ ಅಥವಾ ಸ್ಮಾರ್ಟ್​ಫೋನ್​ಗಳಲ್ಲಿ ಕೂಡ ಕೆಲಸ ಮಾಡುತ್ತಿಲ್ಲ. ಈ ಸಮಸ್ಯೆ ಆಂಡ್ರಾಯ್ಡ್ ಹಾಗೂ ಐಒಎಸ್ ಮತ್ತು ವೆಬ್​ ಮೂರರಲ್ಲೂ (Android, iOS) ಆಗಿರುವ ಬಗ್ಗೆ ತಿಳಿದುಬಂದಿದೆ.

ಮಾಹಿತಿ ಹಂಚಿಕೊಳ್ಳಲು ಹಾಗೂ ಸಂವಹನಕ್ಕೆ ಬಹುತೇಕ ಜನರು ಈಗ ವಾಟ್ಸಾಪ್ ಅವಲಂಬಿಸಿರುತ್ತಾರೆ. ಮನರಂಜನೆಗೆ ಖ್ಯಾತ ಸೋಷಿಯಲ್ ಮೀಡಿಯಾಗಳಾದ ಇನ್​ಸ್ಟಾಗ್ರಾಂ ಹಾಗೂ ಫೇಸ್​ಬುಕ್ ಬಳಸುತ್ತಾರೆ. ಇದ್ಯಾವುದೂ ಈಗ ಕೆಲಸ ಮಾಡುತ್ತಿಲ್ಲ. ಕಳಿಸಿರುವ ಸಂದೇಶ, ಹಂಚಿಕೊಂಡಿರುವ ಪೋಸ್ಟ್​ಗಳು ಅರ್ಧಕ್ಕೆ ನಿಂತಂತಾಗಿದೆ. ಈ ವಿಚಾರವು ಈಗ ಟ್ವಿಟರ್ ಟ್ರೆಂಡಿಂಗ್​ನಲ್ಲಿ ಕೂಡ ಸ್ಥಾನ ಪಡೆದುಕೊಂಡಿದೆ. ಮತ್ತೊಂದು ಸಾಮಾಜಿಕ ಜಾಲತಾಣ ಟ್ವಿಟರ್​ನಲ್ಲಿ ಜನರು ವಿಚಾರ ಹಂಚಿಕೊಳ್ಳುತ್ತಿದ್ದಾರೆ. ಹಲವಾರು ಟ್ರಾಲ್, ಮೀಮ್ಸ್​​ಗಳು ಕೂಡ ಕ್ರಿಯೇಟ್ ಆಗಿವೆ.

ಟ್ವಿಟರ್ ಟ್ರೆಂಡಿಂಗ್​ನ ಟೆಕ್ನಾಲಜಿ ವಿಭಾಗದ 4 ಮತ್ತು 5ನೇ ಸ್ಥಾನದಲ್ಲಿ Facebook and Instagram ಮತ್ತು #facebookdown ಇದೆ. ಸುದ್ದಿ ಮಾಡುವ ವೇಳೆಗಾಗಲೇ ಈ ಬಗ್ಗೆ 88.1k ಮತ್ತು 69.5k ಟ್ವೀಟ್​ಗಳಾಗಿವೆ. ಟ್ರೆಂಡಿಂಗ್ 9ರಲ್ಲಿ ಮಾರ್ಕ್ ಜುಕರ್​ಬರ್ಗ್ ಹೆಸರಿದೆ. ಈ ಬಗ್ಗೆ 38.2k ಟ್ವೀಟ್​ಗಳು ಆಗಿವೆ. #serverdown ಎಂಬ ಹ್ಯಾಷ್ ಟ್ಯಾಗ್ ಕೂಡ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಇದನ್ನೂ ಓದಿ: How To: ಈಗ ವಾಟ್ಸಾಪ್ ಮೂಲಕ ಕೇವಲ 3 ಹಂತಗಳಲ್ಲಿ ಸುಲಭವಾಗಿ ಲಸಿಕೆ ಪ್ರಮಾಣಪತ್ರ ಪಡೆಯಿರಿ! ಇಲ್ಲಿದೆ ವಿವರ

ಇದನ್ನೂ ಓದಿ: Cyber Crime: ಸಾಮಾಜಿಕ ಜಾಲತಾಣದ ಮೂಲಕ ಮೋಸದ ಬಲೆ; ಎಚ್ಚರ ತಪ್ಪಿದರೆ ಅಪಾಯ ಖಚಿತ!

Published On - 9:37 pm, Mon, 4 October 21

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ